ಮಾ. 26: ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ನಾಮಕರಣ
Team Udayavani, Mar 25, 2023, 6:38 AM IST
ಮಂಗಳೂರು: ಕೆಎಸ್ಸಾರ್ಟಿಸಿಯ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ- ಚೆನ್ನಯ ಎಂಬ ನಾಮಕರಣ ಸಮಾರಂಭವನ್ನು ಮಾ. 26ರಂದು ಬೆಳಗ್ಗೆ 10ಕ್ಕೆ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ನಾಮಫಲಕ ಉದ್ಘಾಟಿಸುವರು.
ಸಚಿವ ವಿ. ಸುನಿಲ್ ಕುಮಾರ್ ಜ್ಯೋತಿ ಬೆಳಗಿಸುವರು. ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಉಪಸ್ಥಿತರಿರುವರು. ಶಾಸಕರಾದ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.