ಮಾರ್ಕೆಟಿಂಗ್‌ ಯುವಕನೀಗ ಭತ್ತ ಬೆಳೆಯುವ ಕೃಷಿಕ

ಭತ್ತ, ಅಡಿಕೆ ಕೃಷಿಯಲ್ಲಿ ಹೆಚ್ಚಿನ ಪ್ರಯೋಗ ನಡೆಸಲು ಒಲವು

Team Udayavani, Oct 29, 2020, 5:58 AM IST

ಮಾರ್ಕೆಟಿಂಗ್‌ ಯುವಕನೀಗ ಭತ್ತ ಬೆಳೆಯುವ ಕೃಷಿಕ

ನಾಗೇಶ್‌ ಶೆಟ್ಟಿ ಅವರ ಕೃಷಿ ಕಾಯಕ.

ಬಂಟ್ವಾಳ: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಬಂಟ್ವಾಳದ ಯುವಕನೊಬ್ಬ ಲಾಕ್‌ಡೌನ್‌ ಬಳಿಕ ಇದೀಗ ಕೃಷಿ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಹಡೀಲು ಬಿದ್ದಿದ್ದ ಅವರ ಗದ್ದೆಗಳು ಇದೀಗ ಹಚ್ಚ ಹಸುರಿನ ಭತ್ತದ ಪೈರಿನಿಂದ ಕಂಗೊಳಿಸುವಂತೆ ಮಾಡಿದ್ದಾರೆ. ಕೆಲವೇ ತಿಂಗಳುಗಳಲ್ಲಿ ಕೃಷಿ ಆತನ ಆಸಕ್ತಿಯನ್ನು ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಕೃಷಿಯಲ್ಲಿ ಇನ್ನೂ ಹೆಚ್ಚಿನ ಪ್ರಯೋಗಗಳನ್ನು ಮಾಡುವ ಹಂಬಲ ವ್ಯಕ್ತಪಡಿಸುತ್ತಿದ್ದಾರೆ.

ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೊಟ್ಟಾರಿಬೆಟ್ಟು ನಿವಾಸಿ ನಾಗೇಶ್‌ ಶೆಟ್ಟಿ ಅವರೇ ಕೃಷಿಯಲ್ಲಿ ತೊಡಗಿಕೊಂಡಿರುವ ಯುವಕ. ಕಳೆದ 4 ವರ್ಷಗಳಿಂದ ಬೆಂಗಳೂರಿನಲ್ಲಿ ಮಾರ್ಕೆಟಿಂಗ್‌ ಉದ್ಯೋಗದಲ್ಲಿದ್ದ ಅವರೀಗ ಪೂರ್ಣ ಪ್ರಮಾಣದ ಕೃಷಿಕರಾಗಿ ಪರಿವರ್ತನೆಗೊಂಡಿದ್ದು, ಪಾರ್ಟ್‌ಟೈಂ ಆಗಿ ಮಾರ್ಕೆಟಿಂಗ್‌ ಉದ್ಯೋಗವಾದ ಆಯುರ್ವೇದಿಕ್‌, ಇತರ ನಿತ್ಯೋಪಯೋಗಿ ಉತ್ಪನ್ನಗಳನ್ನು ಊರಿನಲ್ಲಿ ಮಾರಾಟ ಮಾಡುತ್ತಿದ್ದಾರೆ.

ನಾಗೇಶ್‌ ಶೆಟ್ಟಿ ಅವರ ಮನೆಯಲ್ಲಿ ತಾಯಿ, ತಮ್ಮ ಹಾಗೂ ತಂಗಿ ಇದ್ದು, ಸುಮಾರು 2 ಎಕರೆ ಜಮೀನು ಹೊಂದಿದ್ದಾರೆ. ಹಿಂದೆ ತಾಯಿ ಕೆಲಸದವರ ಸಹಾಯದಿಂದ 2 ಗದ್ದೆಗಳಲ್ಲಿ ಬೇಸಾಯ ಮಾಡಿದ್ದರೆ ಇದೀಗ ಸ್ವತಃ ನಾಗೇಶ್‌ ಅವರೇ ಈ ಕಾರ್ಯದಲ್ಲಿ ತೊಡಗಿಕೊಂಡಿದ್ದು, ವಿದ್ಯಾಭ್ಯಾಸ ಮಾಡುತ್ತಿರುವ ಅವರ ತಮ್ಮ ಹಾಗೂ ತಂಗಿಯೂ ಸಾಥ್‌ ನೀಡಿದ್ದಾರೆ. ಕೆಲಸದವರು ಮಾಡಿದ ಕೆಲಸವನ್ನು ನೋಡಿಕೊಂಡು ಅನುಭವ ಗಿಟ್ಟಿಸಿಕೊಂಡ ನಾಗೇಶ್‌ ಅವರು ಮುಂದೆ ತಾನೇ ಬೇಸಾಯ ನೇತೃತ್ವ ವಹಿಸಿಕೊಳ್ಳುವ ಛಲ ಬೆಳೆಸಿಕೊಂಡಿದ್ದಾರೆ.

ನೀರಿನ ಕೊರತೆ ಇದೆ
ಪ್ರಸ್ತುತ ಅವರ ಪೂರ್ಣ ಪ್ರಮಾಣದ ಕೃಷಿ ಕಾರ್ಯಕ್ಕೆ ನೀರಿನ ಕೊರತೆ ಇದ್ದು, ಈ ಬಾರಿ ಗುಡ್ಡದ ನೀರನ್ನು ಗದ್ದೆಗೆ ಹರಿಸಿ ಬೇಸಾಯದ ಕಾರ್ಯ ಮಾಡಿದ್ದಾರೆ. ಮುಂದೆ ನೀರಿಗೆ ವ್ಯವಸ್ಥೆ ಮಾಡಿಕೊಂಡು ವರ್ಷಕ್ಕೆ ಒಂದಕ್ಕಿಂತ ಹೆಚ್ಚು ಭತ್ತದ ಬೆಳೆ ತೆಗೆಯುವ ಗುರಿಯನ್ನು ಹೊಂದಿದ್ದಾರೆ. ಭತ್ತದ ಜತೆ ಅಡಿಕೆ ಕೃಷಿಯಾನ್ನು ವಿಸ್ತರಿಸುವ ಯೋಜನೆಯನ್ನು ಕೂಡ ಅವರು ಹಾಕಿಕೊಂಡಿದ್ದಾರೆ. ಸದ್ಯ ಅವರ ಮನೆಯಲ್ಲಿ 50 ಅಡಿಕೆ ಗಿಡಗಳು ಮಾತ್ರ ಇವೆ. ಜತೆಗೆ ಕೃಷಿಯಲ್ಲಿ ಹಲವು ಪ್ರಯೋಗಳನ್ನು ನಡೆಸುವ ಆಸಕ್ತಿ ಹೊಂದಿದ್ದು, ಲಭ್ಯ ಭೂಮಿಯಲ್ಲಿ ಉಪಬೆಳೆಗಳನ್ನೂ ಬೆಳೆಯುವ ಗುರಿ ಹೊಂದಿದ್ದಾರೆ.

ಕೃಷಿ ತನಗೆ ಖುಷಿ ನೀಡಿದೆ
ಬೆಂಗಳೂರಿನಿಂದ ಊರಿಗೆ ಬಂದ ಬಳಿಕ ಕೃಷಿ ತನಗೆ ಖುಷಿ ನೀಡಿದೆ. ಮುಂದೆ ಕೃಷಿಯಲ್ಲೇ ಹೊಸ ಹೊಸ ಪ್ರಯೋಗ ಗಳ ಮೂಲಕ ಸಾಧನೆ ಮಾಡಬೇಕೆಂಬ ಆಸಕ್ತಿ ಇದೆ. ಜತೆಗೆ ತನ್ನ ಹಿಂದಿನ ಮಾರ್ಕೆ ಟಿಂಗ್‌ ವೃತ್ತಿಯನ್ನು ಊರಿನಲ್ಲೇ ಮುಂದುವರಿಸುತ್ತೇನೆ. ನೀರಿನ ಕೊರತೆ ಯನ್ನು ನೀಗಿಸಿಕೊಂಡು ಕೃಷಿಯನ್ನು ವಿಸ್ತರಿಸುವ ಯೋಜನೆಯಿದೆ.
ನಾಗೇಶ್‌ ಶೆಟ್ಟಿ ಕೊಟ್ಟಾರಿಬೆಟ್ಟು.

ಕೊರೊನಾ ತಂದಿತ್ತ ಸಂಕಷ್ಟವನ್ನು ಎದುರಿಸಿ ಬದುಕನ್ನು ಕಟ್ಟಿಕೊಳ್ಳುತ್ತಿ ರುವವರ ಕುರಿತು ಈ ಅಂಕಣ. ನಿಮ್ಮ ಅಕ್ಕಪಕ್ಕದಲ್ಲಿ ಇಂಥವರಿದ್ದರೆ ನಮಗೆ ತಿಳಿಸಿ. ನಿಮಗೂ ತಿಳಿದಿದ್ದರೆ ಹೆಸರು, ಊರು, ಸಂಪರ್ಕ ಸಂಖ್ಯೆ ಅವರ ಕಳಿಸಿಕೊಡಿ. ಇನ್ನಷ್ಟು ಜನರಿಗೆ ಸ್ಫೂರ್ತಿಯಾಗಲೆಂದು ಈ ಮಾಲಿಕೆ . ವಾಟ್ಸ್‌ಆ್ಯಪ್‌ ಸಂಖ್ಯೆ:  7618774529

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.