ಅಶಕ್ತರ ಸೇವೆಯಿಂದ ಭಗವಂತನ ಕೃಪೆ : ಸಚಿವ ಖಾದರ್‌


Team Udayavani, Feb 18, 2019, 5:16 AM IST

18-february-4.jpg

ಮಹಾನಗರ: ಸಮಾಜದಲ್ಲಿ ಅಶಕ್ತರ, ನಿರ್ಗತಿಕರ ಸೇವೆ ಭಗವಂತನು ಮೆಚ್ಚುವ ಕಾರ್ಯ. ಮನೋರೋಗಿಗಳು, ನಿರ್ಗತಿಕರ ಸೇವೆಯ ಮೂಲಕ ವೈಟ್‌ ಡೌಸ್‌ ಸಂಸ್ಥೆ ಇಂತಹ ಉದಾತ್ತ ಕಾರ್ಯ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಹೇಳಿದರು.

ಮರೋಳಿಯಲ್ಲಿ ವೈಟ್‌ ಡೌಸ್‌ ವತಿಯಿಂದ ನಿರ್ಮಿಸಲಾಗಿರುವ ಮನೋ ರೋಗಿಗಳ ಶುಶ್ರೂಷೆ, ನಿರಾಶ್ರಿತರ ಆಶ್ರಯ ತಾಣ ಉದ್ಘಾಟನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈಟ್‌ಡೌಸ್‌ ಸಂಸ್ಥೆ ಸುಸಜ್ಜಿತ ಹಾಗೂ ಉತ್ತಮ ಸೌಲಭ್ಯಗಳಿಂದ ಕೂಡಿದ ಕಟ್ಟಡ ನಿರ್ಮಿಸಿ ಸಮಾಜದಲ್ಲಿ ನಿರ್ಗತಿಕ ಮನೋರೋಗಿಗಳಿಗೆ, ಆಶ್ರಯ ವಂಚಿತರಿಗೆ ಆಶ್ರಯ ಕಲ್ಪಿಸಿ ಅವರಿಗೆ ಹೊಸ ಬದುಕು ಕಟ್ಟಿಕೊಡುವ ಕಾರ್ಯ ಮಾಡುತ್ತಿದೆ. ಇಂತಹ ಕಾರ್ಯಕ್ಕೆ ಸರಕಾರ, ಸಮಾಜ ಕೈಜೋಡಿಸಬೇಕು ಎಂದರು. ವಿಶ್ರಾಂತ ಬಿಷಪ್‌ ಡಾ| ಅಲೋಶಿಯಸ್‌ ಪಾವ್ಲ್  ಡಿ’ಸೋಜಾ ಆಶೀರ್ವಚನ ನೀಡಿದರು. ಅಶಕ್ತರು, ನಿರಾಶ್ರಿತರ ಸೇವೆಯಲ್ಲಿ ದೇವರನ್ನು ಕಾಣುವ ವೈಟ್‌ಡೌಸ್‌ ಸಂಸ್ಥೆ ಹಾಗೂ ದಾನಿಗಳು, ಸೇವಾ ನಿರತರನ್ನು ದೇವರು ಹರಸಲಿ ಎಂದರು.

ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಶುಭ ಹಾರೈಸಿದರು. ದಾನಿಗಳಾದ ಲೆಸ್ಲಿ ಫೆರ್ನಾಂಡಿಸ್‌ ಶುಶ್ರೂಷೆ, ನಿರಾಶ್ರಿತರ ಆಶ್ರಯತಾಣವನ್ನು ಹಾಗೂ ರೋನಿ ಪಿಂಟೋ ಪ್ರಾರ್ಥನಾ ಗೃಹವನ್ನು ಉದ್ಘಾಟಿಸಿದರು. ಶಾಸಕ ವೇದವ್ಯಾಸ ಕಾಮತ್‌, ಮಾಜಿ ಶಾಸಕ ಜೆ.ಆರ್‌. ಲೋಬೋ, ಡಿಸಿ ಶಶಿಕಾಂತ್‌ ಸೆಂಥಿಲ್‌, ದಾನಿ ಬೆನೆಡಿಕ್ಟ್ ಬರ್ಬೊಜಾ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನಗೌಡ ಪಾಟೀಲ್‌ ಅತಿಥಿಗಳಾಗಿದ್ದರು.

ವೈಟ್‌ಡೌವ್ಸ್‌ ಸ್ಥಾಪಕಿ ಕೊರಿನ್‌ ರಸ್ಕಿನ್ಹಾ ಅವರು ಪ್ರಸ್ತಾವಿಸಿ, ಮರೋಳಿಯಲ್ಲಿ 8 ಕೋ.ರೂ. ವೆಚ್ಚದಲ್ಲಿ ದಾನಿಗಳ ನೆರವಿನೊಂದಿಗೆ ನಿರ್ಮಾಣವಾಗಿರುವ ವೈಟ್‌ಡೌಸ್‌ ಮನೋರೋಗಿಗಳ ಶುಶ್ರೂಷೆ ಹಾಗೂ ನಿರಾಶ್ರಿತರ ಆಶ್ರಯತಾಣ 43 ಸಾವಿರ ಚ. ಅಡಿಯ ವಿಸ್ತೀರ್ಣ ಹೊಂದಿದ್ದು 200 ಹಾಸಿಗೆಗಳನ್ನು ಒಳಗೊಂಡಿದೆ. ಫಿಸಿಯೋಥೆರಪಿ, ವಿವಿಧ ಚಿಕಿತ್ಸೆ, ವ್ಯಾಯಾಮ, ಮನೋರಂಜನೆ ಸಹಿತ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಇಲ್ಲಿ 600ಕ್ಕೂ ಹೆಚ್ಚು ಮಂದಿ ಉಚಿತ ಸೂರು, ವಸತಿ, ವಿದ್ಯೆ, ಆಹಾರ ಸೇವೆಗಳನ್ನು ಪಡೆದಿದ್ದಾರೆ. ಕೆಲವರು ಸ್ನಾತಕೋತ್ತರ ಪದವಿ, ವಿವಿಧ ಉದ್ಯೋಗಗಳನ್ನು ಗಿಟ್ಟಿಸಿಕೊಂಡು ಜೀವನ ರೂಪಿಸುತ್ತಿದ್ದಾರೆ. ಮಾನಸಿಕ ಕಾಯಿಲೆ ಅಥವಾ ಇನ್ನಿತರ ಕಾರಣಗಳಿಗಾಗಿ ಮನೆಬಿಟ್ಟು ಬಂದವರು, ಇಲ್ಲಿ ಚಿಕಿತ್ಸೆ ಪಡೆದುಕೊಂಡ ಬಳಿಕ ವಿಳಾಸ ಸಿಕ್ಕಿದಲ್ಲಿ ಮತ್ತೆ ಮನೆಗೆ ಕಳುಹಿಸಲಾಗುತ್ತದೆ ಎಂದರು. ಟ್ರಸ್ಟಿಗಳಾದ ವೈಟಸ್‌ ರಸ್ಕಿನ್ನಾ, ಜೆರೋಮ್‌ ಕುವೆಲ್ಲೊ, ಸುನಿಲ್‌ ಬಾಳಿಗಾ, ಜೆರಾಲ್ಡ್‌ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಅನುದಾನಕ್ಕೆ ಸರಕಾರಕ್ಕೆ ಶಿಫಾರಸ್ಸು
‌ಸಮಾಜದಲ್ಲಿ ನಿರ್ಗತಿಕರು, ಅಸಹಾಯಕರಿಗೆ ನೆರವು ಹಾಗೂ ಆಶ್ರಯ ಕಲ್ಪಿಸುವುದು ಸರಕಾರ ಮಾಡಬೇಕಾದ ಕೆಲಸ. ಈ ಕೆಲಸವನ್ನು ವೈಟ್‌ ಡೌಸ್‌ ಸಂಸ್ಥೆ ಮಾಡುತ್ತಿದೆ. ಇದಕ್ಕೆ ಅನುದಾನ ಒದಗಿಸುವಂತೆ ಮುಖ್ಯಮಂತ್ರಿಯವರಿಗೆ ತಾನು ಮತ್ತು ಇಲ್ಲಿಯ ಶಾಸಕರು ಸೇರಿ ಸರಕಾರಕ್ಕೆ ಮನವಿ ಮಾಡುತ್ತೇವೆ. ಇದಲ್ಲದೆ ಮನೆ, ನಿವೇಶನ ವಂಚಿತರಿಗೆ ಮನೆಗಳನ್ನು ನಿರ್ಮಿಸಿಕೊಡುವ ನಿಟ್ಟಿನಲ್ಲಿ ಶೀಘ್ರದಲ್ಲೇ ನೀತಿಯೊಂದನ್ನು ರೂಪಿಸಲಾಗುವುದು ಎಂದು ಸಚಿವ ಯು.ಟಿ.ಖಾದರ್‌ ತಿಳಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.