2.35 ಕೋ.ರೂ. ವೆಚ್ಚದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆಗೆ ಕಟ್ಟಡ ಸಿದ್ಧ
Team Udayavani, May 23, 2022, 9:27 AM IST
ಪುತ್ತೂರು: ತಾಲೂಕಿನ ಏಕೈಕ ಮೌಲಾನಾ ಆಜಾದ್ ಮಾದರಿ ಶಾಲೆಗೆ ಸಾಲ್ಮರದಲ್ಲಿ ನೂತನವಾಗಿ ನಿರ್ಮಿ ಸುತ್ತಿರುವ ಕಟ್ಟಡ ನಿರ್ಮಾಣ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು 3 ತಿಂಗಳೊಳಗೆ ಕಾರ್ಯಾರಂಭಕ್ಕೆ ಸಿದ್ಧಗೊಳ್ಳಲಿದೆ.
ಈ ಶೈಕಣಿಕ ವರ್ಷದಲ್ಲಿ ಕಟ್ಟಡ ಉದ್ಘಾಟನೆಗೊಳ್ಳಲಿದ್ದು, ಅಂತಿಮ ಹಂತದ ಕಾಮಗಾರಿಯು ಬಿರುಸು ಪಡೆದಿದೆ. ಈಗ ತಾತ್ಕಾಲಿಕ ಕಟ್ಟಡದಲ್ಲಿ ಶೈಕ್ಷಣಿಕ ತರಗತಿ ನಡೆಯುತ್ತಿದೆ.
ಎರಡು ಅಂತಸ್ತಿನ ಕಟ್ಟಡ
ಸಾಲ್ಮರ ದೇವರಾಜ ಅರಸು ಭವನದ ಸನಿಹದಲ್ಲಿ 2.35 ಕೋ. ರೂ.ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಾಣಗೊಂಡಿದೆ. ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಬಣ್ಣ ಬಳಿಯುವ ಕೆಲಸ, ಇನ್ನಿತರ ಸಣ್ಣ ಪುಟ್ಟ ಕಾರ್ಯ ಪ್ರಗತಿಯಲ್ಲಿದೆ. 6 ನೇ ತರಗತಿ ಯಿಂದ 10 ನೇ ತರಗತಿ ತನಕದ ಕೊಠಡಿ, ಶಿಕ್ಷಕರ, ಮುಖ್ಯ ಶಿಕ್ಷಕರ ಕೊಠಡಿ, ಶೌಚಾಲಯ ಸೇರಿದಂತೆ ವಿವಿಧ ಸೌಲಭ್ಯ ಒದಗಿಸಲಾಗಿದೆ.
ಐದು ವರ್ಷಗಳ ಹಿಂದೆ ಪ್ರಾರಂಭಗೊಂಡ ಈ ಶಾಲೆ ತಾತ್ಕಾಲಿಕ ನೆಲೆಯಲ್ಲಿ ನೆಲ್ಲಿಕಟ್ಟೆ ಹಳೆ ಶಾಲಾ ಕಟ್ಟಡದಲ್ಲಿ ಕಾರ್ಯಾ ಚರಿಸುತ್ತಿದೆ. ಅಲ್ಪಸಂಖ್ಯಾಕ ಕಲ್ಯಾಣ ಇಲಾಖೆಯಡಿಯಲ್ಲಿ ಈ ಶಾಲೆ ಇದ್ದು ಶಿಕ್ಷಣ ಇಲಾಖೆ ಮೂಲಕ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತದೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ 8ರಿಂದ 10ನೇ ತರಗತಿ ತನಕ ಒಟ್ಟು 249 ವಿದ್ಯಾರ್ಥಿಗಳು ದಾಖಲಾಗಿದ್ದರು. ಇದರಲ್ಲಿ ಈ ಬಾರಿಯ ಎಸೆ ಸೆಲ್ಸಿ ಪರೀಕ್ಷೆ ಬರೆದ 39 ವಿದ್ಯಾ ರ್ಥಿಗಳು ಸೇರಿ ದ್ದಾರೆ. ಈ ಬಾರಿ 8ನೇ ತರಗತಿಗೆ ಹೊಸ ದಾಗಿ ಸೇರ್ಪಡೆಯ ಬಳಿಕ ಒಟ್ಟು ಸಂಖ್ಯೆಯಲ್ಲಿ ಹೆಚ್ಚಳ ವಾಗ ಲಿದೆ ಎನ್ನುತ್ತಾರೆ ಶಾಲಾ ಮುಖ್ಯಗುರು ಅವಿನಾಶ್.
ಏನಿದು ಮೌಲಾನ್ ಆಜಾದ್ ಶಾಲೆ?
ಅಲ್ಪಸಂಖ್ಯಾಕ ಮಕ್ಕಳನ್ನು ಮರಳಿ ಶಾಲೆಗೆ ತರಲು ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಆರಂಭಿಸಲಾಗಿತ್ತು. ಅನಂತರ ವಸತಿ ಸಹಿತ ಶಾಲೆಯ ಮಾದರಿಯಲ್ಲೇ ವಸತಿ ರಹಿತ ಶಾಲೆ ಆರಂಭಿಸಿ 6 ನೇ ತರ ಗತಿಯಿಂದ ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಾರಂಭಿಸಿ 10ನೇ ತರಗತಿವರೆಗೆ ವಿಸ್ತರಿಸಲಾಯಿತು. ಈ ಶಾಲೆಗಳಲ್ಲಿ ಶೇ. 75ರಷ್ಟು ಸೀಟ್ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಕ್ಖ್, ಪಾರ್ಸಿ ವಿದ್ಯಾರ್ಥಿಗಳಿಗೆ, ಶೇ. 25ರಷ್ಟು ಪ.ಜಾತಿ, ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ.
ಉದ್ಘಾಟನೆಗೆ ಸಿದ್ಧತೆ
ಸಾಲ್ಮರದಲ್ಲಿ ನಿರ್ಮಾಣ ಹಂತದಲ್ಲಿರುವ ಮೌಲಾನ್ ಆಜಾದ್ ಮಾದರಿ ಶಾಲೆಯ ನೂತನ ಕಟ್ಟಡದ ಕಾಮಗಾರಿ ಅಂತಿಮ ಹಂತದಲ್ಲಿದ್ದು ಮೂರು ತಿಂಗಳಲ್ಲಿ ಕಾರ್ಯಾರಂಭಕ್ಕೆ ಬಿಟ್ಟು ಕೊಡುವಂತೆ ಸೂಚನೆ ನೀಡಲಾಗಿದೆ. ಸುಸಜ್ಜಿತ ಕಟ್ಟಡ ಮೂಲ ಸೌಕರ್ಯ ವ್ಯವಸ್ಥೆ ಒದಗಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಪೂರಕ ವಾತಾವರಣ ನಿರ್ಮಿಸಲು ಆದ್ಯತೆ ನೀಡಲಾಗಿದೆ. –ಸಂಜೀವ ಮಠಂದೂರು, ಶಾಸಕರು, ಪುತ್ತೂರು
ಕೊನೆಯ ಹಂತ
ಜಿಲ್ಲೆಯಲ್ಲಿ ಒಟ್ಟು ಎಂಟು ಮೌಲಾನ್ ಆಜಾದ್ ಮಾದರಿ ಶಾಲೆಗಳಿವೆ. ಪುತ್ತೂರಿನ ಶಾಲೆಗೆ ಹೊಸ ಕಟ್ಟಡ ನಿರ್ಮಾಣ ಮುಕ್ತಾಯದ ಹಂತದಲ್ಲಿ ಇದೆ. ಉದ್ಘಾಟನೆ ಅನಂತರ ತರಗತಿಗಳು ಹೊಸ ಕಟ್ಟಡದಲ್ಲಿ ಪ್ರಾರಂಭಗೊಳ್ಳಲಿದೆ. –ಅಂಜನಪ್ಪ, ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ದ.ಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್