‘ಆರೋಗ್ಯ ಕಾಳಜಿಗೆ ಗರಿಷ್ಠ ಕೊಡುಗೆ ಮುಖ್ಯ’
Team Udayavani, May 18, 2018, 12:58 PM IST
ಮಂಗಳೂರು: ನಗರದ ಫಳ್ನೀರಿನ ಅಥೆನಾ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸಯನ್ಸಸ್ನಲ್ಲಿ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ ಗುರುವಾರ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳಿಂದ ‘ದಾದಿಯರ ನುಡಿಯಲ್ಲಿ ಆರೋಗ್ಯ ಮಾನವನ ಹಕ್ಕು’ ಎಂಬ ವಿಷಯದ ಕುರಿತು ಚರ್ಚಾಕೂಟ ಜರಗಿತು.
ಕಾರ್ಯಕ್ರಮದಲ್ಲಿ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ನ ಉಪಪ್ರಾಂಶುಪಾಲೆ ಡಾ| ಥೆರೆಸಾ ಎಲ್. ಮೆಂಡೋನ್ಸಾ ಮುಖ್ಯ ಅತಿಥಿಯಾಗಿದ್ದರು. ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯ ಮಹತ್ವದ ಕುರಿತು ವಿವರಿಸಿ ದಾದಿಯರ ವೃತ್ತಿಪರತೆ ಅಂತಸ್ತನ್ನು ವೃದ್ಧಿಸುವ ಬಗ್ಗೆ ವಿವರಿಸಿದರು.
ಕಾಲೇಜಿನ ಚೇರ್ಮನ್ ಆರ್.ಎಸ್. ಶೆಟ್ಟಿಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ದಾದಿಯರಿಗೆ ಶುಭ ಹಾರೈಸಿ ಆರೋಗ್ಯ ಕಾಳಜಿ ಬಗ್ಗೆ ತಮ್ಮ ಗರಿಷ್ಠ ಕೊಡುಗೆ ನೀಡಲು ತಿಳಿಸಿದರು. ಅಥೆನಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆಶಾ ಶೆಟ್ಟಿಯಾನ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ| ಸಿ| ಧನ್ಯಾ ದೇವಾ ಸಿಯಾ ದಾದಿಯರ ಜವಾಬ್ದಾರಿಯ ಬಗ್ಗೆ ನುಡಿದರು. ಆ್ಯನ್ಸಿ ಮರಿಯಾ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ರೇಖಾ ಕುಮಾರಿ ಮತ್ತು ಗ್ಲೋರಿಯಾ ಕಾರ್ಯ ಕ್ರಮ ನಿರೂಪಿಸಿದರು. ಮಿನ್ನು ಮೇರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ