ಅಲಂಕಾರು ಶಾಖೆಯಲ್ಲಿ ಗರಿಷ್ಠ ಠೇವಣಿ: ಡಾ| ಎಂ.ಎನ್.
Team Udayavani, May 7, 2017, 3:18 PM IST
ಮಂಗಳೂರು: ಸಹಕಾರ ಕ್ಷೇತ್ರದ ಮೂಲ ಆಶಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇತ್ತೀಚೆಗೆ ಪುತ್ತೂರು ತಾಲೂಕಿನ ಅಲಂಕಾರಿನಲ್ಲಿ ಬ್ಯಾಂಕ್ ತನ್ನ 102ನೇ ಶಾಖೆಯನ್ನು ತೆರೆದಿದೆ.
ಅಲಂಕಾರು ನೂತನ ಶಾಖೆ ಉದ್ಘಾಟನ ಸಮಾರಂಭದಲ್ಲಿ ಊರಿನ ಸಮಸ್ತ ಸಹಕಾರಿ ಹಾಗೂ ಗ್ರಾಹಕರನ್ನು ಅಭಿನಂದಿಸಿ ಮಾತನಾಡಿದ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್, ಗ್ರಾಮೀಣ ಪ್ರದೇಶದಲ್ಲಿ ಆರಂಭಗೊಂಡ ಈ ಶಾಖೆ ರೂ. 26.18 ಕೋ ಠೇವಣಿ ಹೊಂದಿದೆ.
ಅಲಂಕಾರು ಗ್ರಾಮೀಣ ಪ್ರದೇಶವಾದರೂ ಇಲ್ಲಿನ ಜನರು ಹೃದಯ ಶ್ರೀಮಂತರು. ಹಾಗಾಗಿ ನೂತನ ಶಾಖೆ ಉದ್ಘಾಟನೆ ಸಂದರ್ಭ ಇಲ್ಲಿ ಗರಿಷ್ಠ ಠೇವಣಿ ಸಂಗ್ರಹವಾಗಿದೆ. ಇದು ಶಾಖೆ ಆರಂಭದಲ್ಲಿ ಸರ್ವಾಕಾಲಿಕ ದಾಖಲೆ ಆಗಿದೆ ಎಂದರು.
ಎಸ್ಸಿಡಿಸಿಸಿ ಬ್ಯಾಂಕ್ ಮುಖ್ಯವಾಗಿ ರೈತರ ಹಿತಾಸಕ್ತಿ ಕಾಪಾಡಿಕೊಂಡು ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ಪರಿಸರದ ಗ್ರಾಹಕರ ಆರ್ಥಿಕಾಭಿವೃದ್ಧಿಗೆ ಬ್ಯಾಂಕ್ ಸದಾ ಸ್ಪಂದಿಸುತ್ತಿದೆ. ಇಲ್ಲಿನ ಜನರು ತೋರಿದ ಪ್ರೀತಿ ವಿಶ್ವಾಸಕ್ಕೆ ಬ್ಯಾಂಕ್ ಚಿರರುಣಿ ಎಂದರು.
ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಮೇಶ ಭಟ್ ಉಪ್ಪಂಗಳ ಅಧ್ಯಕ್ಷತೆಯಲ್ಲಿ ಸಮ್ಮಾನಿಸಲಾಯಿತು. ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ, ಕೆ.ಎಸ್. ದೇವರಾಜ್, ಶಶೀ ಕುಮಾರ್ ರೈ, ಎಸ್.ಬಿ. ಜಯರಾಮ್ ರೈ, ಸದಾಶಿವ ಉಳ್ಳಾಲ, ಬ್ಯಾಂಕ್ನ ಮುಖ್ಯಕಾರ್ಯ ನಿರ್ವಹಣಾಧಿಕಾರಿ (ಪ್ರಭಾರ) ಸತೀಶ್ ಎಸ್. ಮೊದಲಾ ದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ