“ಗರಿಷ್ಠ ಮತದಾನಕ್ಕೆ ಯೋಜನೆ’


Team Udayavani, Mar 16, 2019, 12:30 AM IST

z-23.jpg

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಗರಿಷ್ಠ ಮತದಾನವಾಗಲು ಜಿಲ್ಲಾ ಸ್ವೀಪ್‌ ಸಮಿತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಸ್ವೀಪ್‌ ಸಮಿತಿ ಅಧ್ಯಕ್ಷ ಡಾ| ಆರ್‌. ಸೆಲ್ವಮಣಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮತದಾರರ ಜಾಗೃತಿಗಾಗಿ 1 ಲಕ್ಷ ಕರಪತ್ರಗಳನ್ನು ಮುದ್ರಿಸಿ ತಾಲೂಕು ಹಂತದಲ್ಲಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಇವು ಇವಿಎಂ- ವಿವಿಪ್ಯಾಟ್‌ ಕುರಿತು ಜಾಗೃತಿ ಉದ್ದೇಶ ಹೊಂದಿವೆ. ಎ3 ಗಾತ್ರದ 8,000 ಪೋಸ್ಟರ್‌ಗಳನ್ನು ವಿವಿಧ ಇಲಾಖೆ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಚಾರ ಮಾಡಲು ಬಳಸಲಾಗಿದೆ. 55 ಹೋರ್ಡಿಂಗ್‌ಗಳನ್ನು ಜಿಲ್ಲೆಯ ವಿವಿಧೆಡೆ ಸ್ಥಾಪಿಸಲಾಗುತ್ತಿದೆ. 

ಇವಿಎಂ, ವಿವಿಪ್ಯಾಟ್‌ ಪ್ರಾತ್ಯಕ್ಷಿಕೆ
ಇವಿಎಂ, ವಿವಿಪ್ಯಾಟ್‌ ಬಗ್ಗೆ ಮತದಾರರಿಗೆ ಹೆಚ್ಚಿನ ಮಾಹಿತಿ ನೀಡಲು 656 ತಂಡಗಳನ್ನು ರಚಿಸಲಾಗಿದೆ. ಇವರು ಮತಗಟ್ಟೆಗಳಿಗೆ ತೆರಳಿ ಪ್ರಾತ್ಯಕ್ಷಿಕೆ, ಮಾಹಿತಿ ನೀಡಲಿದ್ದಾರೆ. ಮತದಾರ ಸಾಕ್ಷರತಾ ಸಂಘ ಶಿಕ್ಷಣ ಸಂಸ್ಥೆಗಳಲ್ಲಿ ಮತದಾರರ ಸಾಕ್ಷರತಾ ಸಂಘ(ಇಎಲ್‌ಸಿ)ಗಳನ್ನು ಸ್ಥಾಪಿಸಲಾಗಿದೆ. ಜಾಥಾ, ಬೀದಿ ನಾಟಕ, ಪ್ರತಿಜ್ಞಾವಿಧಿ ಕಾರ್ಯಕ್ರಮಗಳನ್ನು ಈ ಸಂಘಗಳು ಕೈಗೊಳ್ಳುತ್ತಿವೆ. ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆಗಾಗಿ ಒಬ್ಬರು “ಈಚ್‌ ಒನ್‌ ಚೆಕ್‌ ಟೆನ್‌’ ಅಭಿಯಾನ ಪ್ರಾರಂಭಿಸಲಾಗಿದೆ. 1,861 ಮತಗಟ್ಟೆಗಳಲ್ಲಿ “ಚುನಾವ್‌ ಪಾಠಶಾಲೆ’ ತೆರೆಯಲಾಗುವುದು. ಶೇ. 100 ಮತದಾನ ದಾಖಲಿಸುವ ಅಪಾರ್ಟ್‌ ಮೆಂಟ್‌ಗಳಿಗೆ ಸ್ಮರಣಿಕೆ ನೀಡಲಾಗುವುದು ಎಂದರು. ಸ್ವೀಪ್‌ ಅಧಿಕಾರಿ ಸುಧಾಕರ್‌ ಉಪಸ್ಥಿತರಿದ್ದರು.

ಗಾಳಿಪಟ ಉತ್ಸವ, ಮ್ಯಾರಥಾನ್‌
ಮತದಾರರ ಜಾಗೃತಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. 18ಕಿ.ಮೀ. ಮಾನವ ಸರಪಣಿ, 18 ಕಿ.ಮೀ. ಸೈಕ್ಲೋಥಾನ್‌, 18 ಕಿ.ಮೀ. ಮ್ಯಾರಥಾನ್‌, ವಾಕಥಾನ್‌, ಗಾಳಿಪಟ ಉತ್ಸವ, ಮರಳುಕಲೆ, ಪ್ರಜಾಪ್ರಭುತ್ವಕ್ಕಾಗಿ ಸರ್ಫಿಂಗ್‌, ಆಟೋಟ ಚಟುವಟಿಕೆಗಳನ್ನು ನಡೆಸಲಾಗುವುದು ಎಂದರು.

ಹಿರಿಯ ನಾಗರಿಕ ಸ್ನೇಹಿ ಮತಗಟ್ಟೆಗಳು
ಪ್ರಥಮ ಬಾರಿಗೆ ಹಿರಿಯ ನಾಗರಿಕಸ್ನೇಹಿ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಇದರಲ್ಲಿ ರ್‍ಯಾಂಪ್‌ಗ್ಳು, ಗಾಲಿಕುರ್ಚಿ, ವಾಕರ್‌, ವಾಕಿಂಗ್‌ಸ್ಟಿಕ್‌ ಹಾಗೂ ನೆರವಿಗೆ ಸ್ವಯಂಸೇವಕರು ಇರುತ್ತಾರೆ. ಇದಲ್ಲದೆ 5 ಪಾರಂಪರಿಕ ಮತಗಟ್ಟೆಗಳು, 2 ಅಂಗವಿಕಲಸ್ನೇಹಿ ಮತಗಟ್ಟೆಗಳು, ಸುಮಾರು 25 ಸಖೀ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಸೆಲ್ವಮಣಿ ವಿವರಿಸಿದರು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.