ನವರಾತ್ರಿಗೆ ಮೇಯರ್‌ ಉಪವಾಸ ವ್ರತ!


Team Udayavani, Sep 22, 2017, 3:24 PM IST

22-Mng-2.jpg

ಮಹಾನಗರ : ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಟು ಹಾಗೂ ಕ್ರಿಯಾಶೀಲ ಮೇಯರ್‌ ಎಂದೇ ಹೆಸರು ಪಡೆದಿರುವ ಮಂಗಳೂರು ಮಹಾನಗರ ಪಾಲಿಕೆ ಮೇಯರ್‌ ಕವಿತಾ ಸನಿಲ್‌ ನವರಾತ್ರಿ ಸಮಯದಲ್ಲಿ ಬಹಳ ಶ್ರದ್ಧೆ ಮತ್ತು ಭಕ್ತಿಯಿಂದ ಪೂರ್ಣ ಪ್ರಮಾಣದ ವ್ರತ ಕೈಗೊಳ್ಳುತ್ತಾರೆ. ನವರಾತ್ರಿಯ ಒಂಬತ್ತು ದಿನವೂ ಬರೀ ನೀರನ್ನೇ ಕುಡಿದು ದಿನ ಕಳೆಯುತ್ತಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ನವರಾತ್ರಿ ಸಮಯದಲ್ಲಿ ಬರೀ ನೀರು ಸೇವಿಸುತ್ತಾರೆ ಎನ್ನುವ ವಿಚಾರ ಜಗತ್ತಿನಾದ್ಯಂತ ಸುದ್ದಿ ಮಾಡಿರುವ ಬೆನ್ನಲ್ಲೇ ಮೇಯರ್‌ ಕೂಡ ಹಬ್ಬವನ್ನು ಅದೇ ರೀತಿಯಲ್ಲಿ ಆಚರಿಸುತ್ತಿರುವುದು ವಿಶೇಷ. ದೇವಿಯ ಆರಾಧಕಿ ಯಾಗಿರುವ ಮೇಯರ್‌ 2009ರಿಂದ ನವರಾತ್ರಿಯ ಒಂಬತ್ತು ದಿನ ಅನ್ನ, ಆಹಾರ, ಫಲವಸ್ತುಗಳನ್ನು ತ್ಯಜಿಸಿ ಕೇವಲ ನೀರನ್ನು ಸೇವಿಸುತ್ತಿದ್ದಾರೆ. ನವ ರಾತ್ರಿಯ ಮೊದಲ ದಿನ ಮನೆಯಲ್ಲಿ ಪೂಜೆ ಮಾಡಿ ವ್ರತ ಪ್ರಾರಂಭಿಸಿದರೆ, ಕೊನೆಯ (ವಿಜಯ ದಶಮಿ) ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅನ್ನ ಸೇವಿಸಿ ವ್ರತ ಬಿಡುತ್ತಾರೆ. ಈ ಮಧ್ಯೆ ಅವರು ನೀರು ಹೊರತುಪಡಿಸಿ ಯಾವುದೇ ಫಲ ವಸ್ತುಗಳನ್ನು ಸೇವಿಸುವುದಿಲ್ಲ. ತಮ್ಮ ನಿವಾಸ ಬಿಜೈಯಿಂದ ಕಟೀಲು ದೇಗುಲಕ್ಕೆ ಪಾದ ಯಾತ್ರೆ ಮಾಡಿ, ದೇವಿಯ ದರ್ಶನ ಪಡೆಯುತ್ತಾರೆ. ನಿತ್ಯ ಎರಡು ಸಲ ಮನೆಯಲ್ಲೇ ದೇವಿ ಪೂಜೆ ಮಾಡುವ ಕವಿತಾ, ನಿತ್ಯವೂ ಒಂದು ದೇವಾಲಯಕ್ಕೆ ತೆರಳಿ ಪ್ರಾರ್ಥಿಸುತ್ತಾರೆ.

ಕುಟುಂಬದ ಸಹಕಾರ
ಮೇಯರ್‌ ಅವರ ಈ ವ್ರತಕ್ಕೆ ಪತಿ ಹಾಗೂ ಮಕ್ಕಳು ಪೂರ್ಣ ಸಹಕಾರ ನೀಡುತ್ತಾರೆ. ಪತಿ ಜಿ. ಅರುಣ್‌ ಕುಮಾರ್‌ ಕಳೆದ ಬಾರಿ ಒಂದು ಹೊತ್ತಿನ ಊಟ ಸೇವಿಸಿ ವ್ರತ ಆಚರಿಸಿದ್ದರು. ಆದರೆ ಈ ಬಾರಿ ಅವರು ವ್ರತ ಮಾಡುತ್ತಿಲ್ಲ. ಆದರೆ, ಮಗಳು ಪ್ರಿಶಾ (9) ಅಮ್ಮನೊಂದಿಗೆ ಈ ಬಾರಿ ವ್ರತದಲ್ಲಿ ಭಾಗಿಯಾಗುತ್ತೇನೆ ಎಂದು ಹಠ ಹಿಡಿದರೂ ಮೇಯರ್‌ ಅನುಮತಿ ನೀಡಿಲ್ಲ. 

ದೈನಂದಿನ ಕೆಲಸಕ್ಕೆ ಅಡ್ಡಿ ಇಲ್ಲ
ಒಂಬತ್ತು ದಿನಗಳ ಯಾವುದೇ ಆಹಾರ ಸೇವಿಸದೆ ಬರೀ ನೀರು ಕುಡಿಯುತ್ತಿದ್ದರೂ ಮೇಯರ್‌ ತಮ್ಮ ನಿತ್ಯದ ಕೆಲಸಗಳಲ್ಲಿ ಯಾವುದೇ ಬದಲಾವಣೆ ಮಾಡಿ ಕೊಂಡಿಲ್ಲ. ಮನೆಗೆಲಸ ಮುಗಿಸಿ ಅಧಿಕಾರಿಗಳೊಂದಿಗೆ ಸಭೆ, ಉಳಿದ ಕಾರ್ಯಕ್ರಮಗಳಲ್ಲಿ ಎಂದಿನಂತೆ ಪಾಲ್ಗೊಳ್ಳಲಿದ್ದಾರೆ. ಈ ಬಾರಿ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಲಿರುವುದರಿಂದ ದಿನನಿತ್ಯ ಎರಡು ಗಂಟೆ ತಯಾರಿ ನಡೆಸುತ್ತಿದ್ದ ಮೇಯರ್‌, ಈ ಒಂಬತ್ತು ದಿನಗಳಲ್ಲಿ ಅಭ್ಯಾಸ ಮಾಡುವ ಸಮಯಗಳಲ್ಲಿ ಬದ ಲಾವಣೆ ಆಗಬಹುದು ಎನ್ನುತ್ತಾರೆ.

ಪೂಜೆಯೊಂದಿಗೆ ವ್ರತಾರಂಭ
9 ದಿನವೂ ನೀರು ಮಾತ್ರ ಸೇವನೆ
ಕೆಲಸಕ್ಕೆ  ಏನೂ ಅಡ್ಡಿಯಿಲ್ಲ

ದೇವರ ಕೃಪೆಯಿಂದ 
ಜನಸೇವೆ ಮಾಡಲು ಸಾಧ್ಯವಾಗಿದೆ
ನಾನು ನವರಾತ್ರಿಯ ಒಂಬತ್ತು ದಿನಗಳಲ್ಲಿ ನೀರು ಮಾತ್ರ ಸೇವಿಸುತ್ತೇನೆ. ನನ್ನ ವ್ರತದಿಂದ ಜನಸೇವೆಗೆ ಯಾವುದೇ ರೀತಿಯ ಧಕ್ಕೆಯಾಗದು. ದೇವರ ಆಶೀರ್ವಾದದಿಂದಲೇ ನಾನು ಜನಸೇವೆ ಮಾಡಲು ಸಾಧ್ಯವಾಗಿದೆ. ಅದಕ್ಕಾಗಿ ಒಂಬತ್ತು ದಿನ ಅನ್ನ ತ್ಯಜಿಸಿದರೆ ಏನೂ ಆಗದು. ವ್ರತ ದಿಂದಾಗಿ ಯಾವುದೇ ಆರೋಗ್ಯ ಸಮಸ್ಯೆ ನನ್ನನ್ನು ಕಾಡಿಲ್ಲ.
ಕವಿತಾ ಸನಿಲ್‌ , ಮೇಯರ್‌

ಪ್ರಜ್ಞಾ  ಶೆಟ್ಟಿ

ಟಾಪ್ ನ್ಯೂಸ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.