ಕುತ್ತಿಗೆ ಕೊಯ್ದುಕೊಂಡು MD ಅಂತಿಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Aug 1, 2017, 11:38 AM IST
ಮಂಗಳೂರು: ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಎಂ.ಡಿ. (ಪೆಥಾಲಜಿ) ಅಂತಿಮ ವರ್ಷದ ವಿದ್ಯಾರ್ಥಿ ದಾವಣಗೆರೆ ಮೂಲದ ಎಚ್.ಕೆ. ಪ್ರಸಾದ್ (28) ಹಾಸ್ಟೆಲ್ನ ಕೋಣೆಯಲ್ಲಿ ಕುತ್ತಿಗೆಗೆ ಬ್ಲೇಡ್ನಿಂದ ಕೊಯ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸ್ಟೆಲ್ನ ಕೊಠಡಿಯಲ್ಲಿ ಒಬ್ಬನೇ ವಾಸ್ತವ್ಯವಿದ್ದು, ಶನಿವಾರ ಆತನನ್ನುಕೆಲವರು ನೋಡಿದ್ದಾರೆ. ರವಿವಾರ ಮನೆಯವರು ಆತನಿಗೆ ಕರೆ ಮಾಡಿ ಸಂಪರ್ಕಕ್ಕೆ ಪ್ರಯತ್ನಿಸಿದರೂ ಕರೆ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಆತಂಕಗೊಂಡ ಮನೆಯವರು ಸೋಮವಾರ ಬೆಳಗ್ಗೆ ಕಾಲೇಜಿಗೆ ಕರೆ ಮಾಡಿದ್ದಾರೆ. ಕಾಲೇಜು ಆಡಳಿತ ಮಂಡಳಿ ಸಿಬಂದಿ ಹಾಸ್ಟೆಲ್ ರೂಮ್ಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿರುವುದು ಪತ್ತೆಯಾಗಿದೆ.
ಆವರು ಮಾನಸಿಕವಾಗಿ ಖನ್ನರಾಗಿದ್ದು, ಮನೋ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ರೂಮಿನಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಅದರಲ್ಲಿ “ನಾನು ಎಲ್ಲವನೂ ಬಿಟ್ಟು ಹೋಗುತ್ತಿದ್ದೇನೆ, ಯಮರಾಜ ನನ್ನನ್ನು ಕರೆಯುತ್ತಿದ್ದಾನೆ’ ಎಂದು ಬರೆದಿಟ್ಟಿದ್ದಾನೆ. ತನ್ನ ಆಸ್ತಿ ಮತ್ತು ಹಣ ಯಾರಿಗೆ ಸೇರ ಬೇಕೆಂಬುದನ್ನು ಕೂಡ ನಮೂದಿಸಿದ್ದಾರೆ ಎಂದು ತಿಳಿದು ಬಂದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ