ಗಂಭೀರ ಸ್ಥಿತಿಯಲ್ಲಿರುವ H1N1 ಪೀಡಿತೆಗೆ ನೌಕರರ ಸಂಘದ ಸಹಾಯ ಹಸ್ತ
Team Udayavani, Jul 29, 2017, 8:40 AM IST
– ಎಚ್1ಎನ್1 ಪೀಡಿತೆ ಪಂಚಾಯತ್ ನೌಕರರ ಸ್ಥಿತಿ ಗಂಭೀರ
ವೇಣೂರು: ಹೇಳಲು ಈಕೆ ಪಂಚಾಯತ್ ನೌಕರೆ. ಸರಕಾರದ ಹತ್ತು ಹಲವು ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಸೇವಾನಿಷ್ಠೆ ಈಕೆಯದು. ಆದರೆ ಪಂಚಾಯತ್ ನೌಕರರ ಪಾಲಿಗೆ ಸಿಗುವ ಸವಲತ್ತುಗಳಲ್ಲಿ ಕಿಂಚಿತ್ತು ಸಂಬಳ ಬಿಟ್ಟರೆ ಬೇರೆ ಯಾವ ಸವಲತ್ತೂ ಈಕೆಯ ಪಾಲಿಗಿಲ್ಲ. ಪ್ರಸುತ ಈಕೆ ಎಚ್1ಎನ್1ನಿಂದಾಗಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ.
ವೇಣೂರು ಗಾ.ಪಂ.ನಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್ ಇಲಾಖೆಯ ಸ್ಥಳಿಯಾಡಳಿತ ಅಡಿಯಲ್ಲಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪುಷ್ಪಾವತಿಯವರ ನೋವಿನ ಕತೆಯಿದು. ತುಂಬು ಗರ್ಭಿಣಿಯಾಗಿದ್ದ ಪುಷ್ಪಾವತಿ ಅವರನ್ನು ಜು.21ರಂದು ತುರ್ತುಶಸ್ತ್ರಚಿಕಿತ್ಸೆಗೆ ಒಳಪಡಿಸಿ ಮಗುವನ್ನು ಹೊರತೆಗೆಯಲಾಗಿದೆ. ಆದರೆ ಪುಷ್ಪಾವತಿ ಅವರು ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ. ಸೂಕ್ತ ಚಿಕಿತ್ಸೆಗಾಗಿ ಅವರನ್ನು ತೀವ್ರ ನಿಗಾಘಟಕದಲ್ಲಿ ಇರಿಸಲಾಗಿದೆ. ಪಂಚಾಯತ್ನಲ್ಲಿ ತಾತ್ಕಾಲಿಕ ನೌಕರರಿಗೆ ಯಾವುದೇ ವೈದ್ಯಕೀಯ ಭದ್ರತೆ (ಇಎಸ್ಐ) ಸೌಲಭ್ಯವಿಲ್ಲ. ಈಕೆಯದ್ದು ತುಂಬಾ ಬಡತನದ ಕುಟುಂಬ. ಹಾಗಾಗಿ ಚಿಕಿತ್ಸೆಯ ವೆಚ್ಚ ಭರಿಸಲು ಸಾಧ್ಯವಾಗದೆ ಅಸಹಾಯಕವಾಗಿದ್ದಾರೆ.
ನೆರವಿಗೆ ಮುಂದಾದ ಸಂಘ
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ನೇತೃತ್ವದಲ್ಲಿ ಗ್ರಾ.ಪಂ. ನೌಕರರಿಂದ ಒಟ್ಟು 1.50 ಲ.ರೂ. ಸಂಗ್ರಹಿಸಲಾಗಿದ್ದು ಪುಷ್ಪಾವತಿ ಮತ್ತು ಅವರ ಮಗುವಿನ ಜೀವ ಉಳಿಸುವ ಪ್ರಯತ್ನ ಮುಂದುವರಿದಿದೆ.
ಸರಕಾರ ಸೂಕ್ತ ವ್ಯವಸ್ಥೆ ಕಲ್ಪಿಸಲಿ
ಇದು ಕೇವಲ ಪುಷ್ಪಾವತಿಯೊಬ್ಬರ ನೋವಾಗಿರದೆ ಇಡೀ ರಾಜ್ಯದ ಗ್ರಾ.ಪಂ. ನೌಕರರ ನೋವು ಮತ್ತು ಸಮಸ್ಯೆಯಾಗಿದೆ. ಇನ್ನಾದರೂ ರಾಜ್ಯ ಸರಕಾರ ಗ್ರಾ.ಪಂ. ನೌಕರರ ಸಮಸ್ಯೆಗಳ ಬಗ್ಗೆ ಗಮನಹರಿಸಿ ಅವರಿಗೂ ಸೇವಾ ಭದ್ರತೆ, ಆರೋಗ್ಯ ಮತ್ತು ಕುಟುಂಬದ ಭದ್ರತೆಗಾಗಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಸಲಿ.
– ದೇವಿಪ್ರಸಾದ್ ಬೊಳ್ಮ, ಅಧ್ಯಕ್ಷರು, ಕರ್ನಾಟಕ ರಾಜ್ಯ ಗ್ರಾ.ಪಂ. ನೌಕರರ ಶ್ರೇಯೋಭಿವೃದ್ಧಿ ಸಂಘ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ