ಮರಳು: ಕರಾವಳಿ ಶಾಸಕರ ಜತೆ ಸಭೆ
Team Udayavani, Dec 24, 2018, 6:05 AM IST
ಬೆಂಗಳೂರು: ಕರಾವಳಿ ಜಿಲ್ಲೆಗಳ ಮರಳಿನ ಸಮಸ್ಯೆ ನಿವಾರಣೆ ಕುರಿತಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ಅವರು ಡಿ.28 ಅಥವಾ ಡಿ.29ರಂದು ಆ ಭಾಗದ ಶಾಸಕರು ಮತ್ತು ಡಿಸಿಗಳ ಜತೆ ಸಭೆ ನಡೆಸಲಿದ್ದಾರೆ. ಕರಾವಳಿ ಜಿಲ್ಲೆಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚಿಸಲು ಡಿ.26ರಂದು ಕಾಲಾವಕಾಶ ನೀಡುವಂತೆ ಕರಾವಳಿ ಭಾಗದ ಶಾಸಕರು ಸಚಿವರಿಗೆ ಪತ್ರ ಬರೆದಿದ್ದರು. ಡಿ.26ಕ್ಕೆ ಪೂರ್ವನಿಗದಿತ ಕಾರ್ಯಕ್ರಮ ಇರುವುದಿಂದ ಡಿ. 28 ಅಥವಾ 29ರಂದು ಮಂಗಳೂರಿಗೆ ಬಂದು ಸಮಸ್ಯೆ ಬಗ್ಗೆ ಶಾಸಕರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂಬುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿ ಅಧಿವೇಶನದ ಅನಂತರ ಕರಾವಳಿ ಶಾಸಕರೆಲ್ಲ ಸಭೆ ಸೇರಿ, ಸಮಸ್ಯೆಯನ್ನು ಸರಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಸಚಿವರೊಂದಿಗೆ ಸಮಾಲೋಚನೆ ನಡೆಸಲು ಕಾಲಾವಕಾಶ ಕೋರಿದ್ದೆವು. ಸಚಿವರು ಡಿ. 28 ಅಥವಾ 29ರಂದು ಸಭೆ ನಡೆಸುವ ಭರವಸೆ ನೀಡಿದ್ದಾರೆ. ಸಭೆಯ ಅನಂತರ ಮುಂದಿನ ತೀರ್ಮಾನ ತೆಗೆದು ಕೊಳ್ಳ ಲಿದ್ದೇವೆ ಎಂದು ವಿಧಾನ ಸಭೆ ವಿಪಕ್ಷ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್ ‘ಉದಯವಾಣಿ’ಗೆ ತಿಳಿಸಿದರು.
ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ: ಸಿಎಂ
ರಾಯಚೂರಿನಲ್ಲಿ ಅಧಿಕಾರಿಯೊಬ್ಬರ ಮೇಲೆ ಲಾರಿ ಹರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಬ್ಬರನ್ನು ಬಂಧಿಸಿದ್ದು, ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ