ಅಫ್ಘಾನಿಸ್ಥಾನದಿಂದ ಏರ್‌ಲಿಫ್ಟ್  ತಾಯ್ನಾಡಿಗೆ ಮರಳಿದ ಉಳ್ಳಾಲದ ಮೆಲ್ವಿನ್‌ 


Team Udayavani, Aug 19, 2021, 7:50 AM IST

ಅಫ್ಘಾನಿಸ್ಥಾನದಿಂದ ಏರ್‌ಲಿಫ್ಟ್  ತಾಯ್ನಾಡಿಗೆ ಮರಳಿದ ಉಳ್ಳಾಲದ ಮೆಲ್ವಿನ್‌ 

ಉಳ್ಳಾಲ: ಅಫ್ಘಾನಿಸ್ಥಾನವು ತಾಲಿಬಾನ್‌ ವಶವಾಗುತ್ತಿದ್ದಂತೆ ಅಫ್ಘಾನ್‌ನಲ್ಲಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಅಘ್ಘಾನ್‌ನಲ್ಲಿ ಸಿಲುಕಿಕೊಂಡ ಭಾರತೀಯರಲ್ಲಿ ಮಂಗಳೂರು ಮೂಲದ ಅನೇಕ ಮಂದಿ ಇದ್ದಾರೆ. ವಿವಿಧ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ ಇವರನ್ನು ಆಯಾಯ ಕಂಪೆನಿಗಳು ಸ್ಥಳಾಂತರ ಮಾಡುವ ಕಾರ್ಯ ನಡೆಸುತ್ತಿದೆ. ಕೆಲವು ಮಂದಿ ಕತಾರ್‌, ಲಂಡನ್‌, ನಾರ್ವೆ ಸೇರಿದಂತೆ ಬೇರೆ ಬೇರೆ ದೇಶಗಳಿಗೆಸ್ಥಳಾಂತರಗೊಂಡಿದ್ದಾರೆ.

ಕಾಬೂಲ್‌ನಿಂದ ಭಾರತೀಯ ವಾಯುಸೇನೆ ಏರ್‌ಲಿಫ್ಟ್‌ ಮಾಡಿದವರಲ್ಲಿ ಉಳ್ಳಾಲ ಉಳಿಯ ನಿವಾಸಿ ಮೆಲ್ವಿನ್‌ ಒಬ್ಬರಾಗಿದ್ದು, ಬುಧವಾರ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ಅವರು ಕಾಬೂಲ್‌ನ ನ್ಯಾಟೋ ಪಡೆಯ ಮಿಲಿಟರಿ ಬೇಸ್‌ ಕ್ಯಾಂಪ್‌ನ ಆಸ್ಪತ್ರೆಯಲ್ಲಿ ಎಲೆಕ್ಟ್ರಿಕಲ್‌ ಮೈಂಟೆನೆನ್ಸ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಅವರ ಸಹೋದರ ಮಾತ್ರ ಅಫ್ಘಾನ್‌ನಲ್ಲೇ ಉಳಿದುಕೊಂಡಿದ್ದು ಭಾರತಕ್ಕೆ ಮರಳಲು ವಿಮಾನದ ನಿರೀಕ್ಷೆಯಲ್ಲಿದ್ದಾರೆ.

ಅಪಘಾನಿಸ್ಥಾನದ ಕಾಬೂಲ್‌ ತಾಲಿಬಾನ್‌ ವಶವಾಗುತ್ತಿದ್ದಂತೆ ಮಿಲಿಟರಿ ಬೇಸ್‌ ಕ್ಯಾಂಪ್‌ನಲ್ಲಿದ್ದ ವಿದೇಶಿಯರನ್ನು ಸ್ಥಳಾಂತರ  ಮಾಡುವ ಕಾರ್ಯ ಆರಂಭಗೊಂಡಿತ್ತು. ಏಕಾಏಕಿ ಸ್ಥಳೀಯ ಅಫ್ಘಾನ್‌ ನಿವಾಸಿಗಳು ದೇಶದಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಕಾಬೂಲ್‌ನಲ್ಲಿ ಇಳಿಯಬೇಕಾಗಿದ್ದ ವಿಮಾನಗಳು ಜನಸಂದಣಿಯಿಂದ ಇಳಿಯಲು ಸಾದ್ಯವಾಗದೆ ವಾಪಸ್‌ ಹೋಗುವ ಸ್ಥಿತಿ ನಿರ್ಮಾಣವಾಯಿತು. ಈ ನಡುವೆ ಭಾರತೀಯ ರಾಯಬಾರಿ ಕಚೇರಿಯಲ್ಲಿದ್ದ ಸಿಬಂದಿಗಳನ್ನು, ಸೆಕ್ಯುರಿಟಿ ತಂಡವನ್ನು ಕರೆತರಲು ಬಂದಿದ್ದ ವಾಯಸೇನೆಯ ಸಿ 17 ವಿಮಾನದಲ್ಲಿ ನಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುವ 7 ಜನರ ಸಹಿತ ಒಟ್ಟು 160 ಮಂದಿಯನ್ನು ಮಂಗಳವಾರ ಬೆಳಗ್ಗೆ 5 ಗಂಟೆಗೆ ಕಾಬೂಲ್‌ನಿಂದ ಗುಜರಾತ್‌ನ ಜಾಮ್‌ನಗರದಲ್ಲಿರುವ  ವಾಯುಸೇನೆ ನೆಲೆಗೆ ಕರೆತಂದಿದ್ದು ಅಲ್ಲಿಂದ ದಿಲ್ಲಿ ಬಳಿಕ ಬೆಂಗಳೂರು ಮಾರ್ಗವಾಗಿ ಇಂದು ಉಳ್ಳಾಲದ ಸ್ವಗೃಹಕ್ಕೆ ಆಗಮಿಸಿದೆ ಎಂದು ಮೆಲ್ವಿನ್‌ ಉದಯವಾಣಿ ಪ್ರತಿನಿಧಿಗೆ ಮಾಹಿತಿ ನೀಡಿದರು.

ನಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಂಗಳೂರು ಸೇರಿದಂತೆ ಭಾರತದ ವಿವಿಧ ರಾಜ್ಯಗಳ ಜನರನ್ನು ಸಂಸ್ಥೆ ನಾರ್ವೆ, ಲಂಡನ್‌, ಕತಾರ್‌ಗೆ ಸ್ಥಳಾಂತರ ಮಾಡಿದ್ದು ಅಲ್ಲಿ ಕೆಲವರನ್ನು ಕ್ವಾರಂಟೈನ್‌ನಲ್ಲಿ ಇಟ್ಟಿದ್ದು ಬಳಿಕ ಭಾರತಕ್ಕೆ ಕಳುಹಿಸುವ ಸಾಧ್ಯತೆಯಿದೆ ಎಂದು ಮೆಲ್ವಿನ್‌ ತಿಳಿಸಿದರು.

ಸಹೋದರನ ನಿರೀಕ್ಷೆಯಲ್ಲಿ :

ಮೆಲ್ವಿನ್‌ ಸಹೋದರ ಡೆಮ್ಸಿ ಎಸಿ ಮೆಕ್ಯಾನಿಕ್‌ ಆಗಿದ್ದು ಕಾಬೂಲ್‌ನ ಮಿಲಿಟರಿ ಬೇಸ್‌ ಕ್ಯಾಂಪ್‌ನಲ್ಲಿ ಕೆಲಸ ಮಾಡುತ್ತಿದ್ದು, ಅವರೂ ಕಳೆದ ಎರಡು ದಿನಗಳಿಂದ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ವಿಮಾನಕ್ಕಾಗಿ ಕಾಯುತ್ತಿದ್ದಾರೆ. ಇಂಟರ್‌ನೆಟ್‌ ಅಲಭ್ಯದ ಕಾರಣ ಕೇವಲ ಸಂದೇಶ ಮಾತ್ರ ಮನೆಗೆ ಕಳುಹಿಸುತ್ತಿದ್ದು ಸುರಕ್ಷಿತರಾಗಿರುವ ಮಾಹಿತಿ ನೀಡಿದ್ದಾರೆ ಎನ್ನುತ್ತಾರೆ ಮೆಲ್ವಿನ್‌

ಮಿಲಿಟರಿ ಬೇಸ್ . 31 ವರೆಗೆ ಸುರಕ್ಷಿತ :

ಕಾಬೂಲ್‌ನಲ್ಲಿರುವ ಮಿಲಿಟರಿ ಬೇಸ್‌ ಆಗಸ್ಟ್‌ 31ರ ವರೆಗೆ ಸುರಕ್ಷಿತವಾಗಿದ್ದು ಅಲ್ಲಿಯವರೆಗೆ ತಾಲಿಬಾನ್‌ಗಳು ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಕಡಿಮೆ. ಬೇಸ್‌ ಖಾಲಿ ಮಾಡಲು ಆಗಸ್ಟ್‌ 31 ಗಡು ಆಗಿರುವ ಕಾರಣ ವಿದೇಶಿಯರು ತಮ್ಮ ತಮ್ಮ ದೇಶದಿಂದ ರಕ್ಷಣೆಗೆ ಆಗಮಿಸುವ ವಿಮಾನಗಳ ನಿರೀಕ್ಷೆಯಲ್ಲಿದ್ದಾರೆ. ಇನ್ನೆರಡು ದಿನಗಳಲ್ಲಿ ಕ್ಯಾಂಪ್‌ನಲ್ಲಿ ಆಹಾರದ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಮೆಲ್ವಿನ್‌ ಹೇಳಿದ್ದಾರೆ.

ಮಿಲಿಟರಿ ಬೇಸ್‌ ಕ್ಯಾಂಪ್‌ನಲ್ಲಿ ಕೆಲಸ ಮಾಡುವ ಅಫ್ಘಾನಿಸ್ಥಾನದ ಸ್ಥಳೀಯರು ತಾಲಿಬಾನ್‌ಗೆ ಟಾರ್ಗೆಟ್‌ ಮಾಡುವ ಮೊದಲೇ ಕ್ಯಾಂಪ್‌ನಿಂದ ತಪ್ಪಿಸಿಕೊಂಡು ಹೊರಗೆ ಹೋಗಲು ಯತ್ನಿಸುತ್ತಿದ್ದಾರೆ. ಕೆಲವರು ದೇಶದಿಂದ ಹೊರಗೆ ಹೋಗಲು ವಿಮಾನ ನಿಲ್ದಾಣಕ್ಕೆ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.