ಎನ್ಎನ್-32 ದುರಂತಕ್ಕೆ 4 ವರ್ಷ: ನಮ್ಮೂರು ವೀರಯೋಧ ಏಕನಾಥ ಶೆಟ್ಟಿ ನೆನಪು ಅಮರ
Team Udayavani, Jul 23, 2020, 2:53 PM IST
ಬೆಳ್ತಂಗಡಿ: ಚೆನೈ ತಾಂಬರಂ ವಾಯುನೆಲೆಯಿಂದ ಅಂಡಮಾನ್ ನಿಕೋಬರ್ ನ ಪೋರ್ಟ್ ಬ್ಲೇರ್ ಗೆ ಜು.22 ರಂದು ಪ್ರಯಾಣಿಸುತ್ತಿದ್ದ ಎಎನ್- 32 ಯುದ್ಧ ವಿಮಾನ ಬಂಗಾಲಕೊಲ್ಲಿ ಸಮುದ್ರದಲ್ಲಿ ಸಂಪರ್ಕ ಕಡಿತಗೊಂಡು ಬುಧವಾರಕ್ಕೆ ನಾಲ್ಕು ವರ್ಷ ಸಂದಿದೆ.
ಸೇವೆಯ ನಿಮಿತ್ತ ಪ್ರಯಾಣಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯೋಧ ಏಕನಾಥ ಶೆಟ್ಟಿ ಸೇರಿ 29 ಜನ ಭಾರತೀಯ ಸೈನಿಕರು ಇಂದಿಗೂ ಕಣ್ಮರೆಯಾಗಿಯೇ ಉಳಿದಿದ್ದಾರೆ. ಏಕನಾಥ ಶೆಟ್ಟಿ ಬರುವಿಕೆಯ ನಿರೀಕ್ಷೆಯಲಿರುವ ಕುಟುಂಬ ಸದಸ್ಯರು ಅನಾಥ ಭಾವದಲಿ ಮರುಗುತ್ತಿದ್ದಾರೆ.
ವಾಯು ಪಡೆ ಇತಿಹಾಸದಲ್ಲೇ ಕರಾಳದಿನ
ವಿಮಾನವೊಂದು ನಾಪತ್ತೆಯಾಗಿ ಕಿಂಚಿತ್ತು ಕುರಿಹು ಪತ್ತೆಯಾಗದಿರುವುದು ಭಾರತೀಯ ವಾಯುಪಡೆ ಇತಿಹಾಸದಲ್ಲೆ ಮೊದಲ ಕರಾಳ ನೆನಪಾಗಿದೆ. ಅಂದು ವಿಮಾನ ಪತ್ತೆ ಹಚ್ಚಲು ಕೇಂದ್ರ ಸರಕಾರ ಮತ್ತು ಮಿಲಿಟರಿ ತಜ್ಞರು ಸತತ ಮೂರು ತಿಂಗಳು ಎರಡು ಪಿ.8 ಎ ವಿಮಾನ, ಮೂರು ಡೋರ್ನಿಯರ್ ವಿಮಾನ, ಒಂದು ಜಲಾಂತರ್ಗಾಮಿ, ನೌಕಾಸೇನೆಯ 12 ನೌಕೆಗಳ ಮೂಲಕ ಪ್ರಯತ್ನಿಸಿದ್ದವು.
ಗುರುವಾಯನಕೆರೆ ವೀರ ಸೇನಾನಿ ಏಕನಾಥ ಶೆಟ್ಟಿಯವರು ಅದೇ ವಿಮಾನದಲ್ಲಿ ತಮ್ಮ ಸೇವಾ ಪಯಣ ಆರಂಭಿಸಿದ್ದರು. ಆದರೆ ಅಂದು ಬೆಳಗ್ಗೆ 9.12 ಕ್ಕೆ ಸಂಪರ್ಕ ಕಡಿತಗೊಂಡು ಮಧ್ಯಾಹ್ನ 1.50ರ ವರೆಗೂ ಸಂಪರ್ಕ ಸಿಗದೇ ಇದ್ದಾಗ ವಾಯುಸೇನೆ ಮಾಹಿತಿ ನೀಡಿತ್ತು.
ಅಂದಿನಿಂದ ಇಂದಿನವರೆಗೂ ಏಕನಾಥ ಶೆಟ್ಟಿ ನೆನಪಿನಲ್ಲೆ ಪತ್ನಿ ಜಯಂತಿ ಶೆಟ್ಟಿ, ಮಗ ಅಕ್ಷಯ್ ಶೆಟ್ಟಿ, ಪುತ್ರಿ ಅಶಿತಾ ಶೆಟ್ಟಿ ಮರುಗುವಂತಾಗಿದೆ.
ಪುತ್ರಿ ಉದ್ಯೋಗ ನಿರೀಕ್ಷೆಯೂ ಈಡೇರಿಲ್ಲ
ಮಗಳು ಅಶಿತಾ ಶೆಟ್ಟಿ ಎಂಎಚ್ಆರ್ ಡಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ ಬೆಂಗಳೂರು ಬಯೋಕಾನ್ ಲಿಮಿಟೆಡ್ ಕಂಪನಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಮಗ ಅಡ್ಯಾರು ಸಹ್ಯಾದ್ರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ಪುತ್ರಿ ಸರಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದು, ಅವಕಾಶ ಸಿಕ್ಕಲ್ಲಿ ತಂದೆಯಂತೆ ದೇಶ ಸೇವೆಗೆ ಸನ್ನದ್ಧರಾಗಿದ್ದಾರೆ.
ಪತಿಯ ನೆನಪಲ್ಲಿ ವರ್ಷಗಳು ಕಳೆಯುತ್ತಿದ್ದೇವೆ. ಅಧಿಕಾರಿಗಳು, ಮಂತ್ರಿಗಳು ಮಗಳಿಗೆ ಸರಕಾರಿ ಉದ್ಯೋಗ ಭರವಸೆ ನೀಡಿದ್ದರು. ಇದೀಗ ಅವಳ ಶಿಕ್ಷಣ ಪೂರ್ಣಗೊಂಡಿದೆ. ಇನ್ನು ಭರವಸೆ ಈಡೇರಿಲ್ಲ ಎಂಬ ಬೇಸರ ಇದೆ ಎನ್ನುತ್ತಿದ್ದಾರೆ ಏಕನಾಥ ಶೆಟ್ಟಿ ಅವರ ಪತ್ನಿ ಜಯಂತಿ ಶೆಟ್ಟಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್