ಯೇಸು ಕ್ರಿಸ್ತರ ಕೊನೆಯ ಭೋಜನದ ಸ್ಮರಣೆ
Team Udayavani, Apr 14, 2017, 12:17 PM IST
ಮಂಗಳೂರು/ಉಡುಪಿ: ಯೇಸು ಕ್ರಿಸ್ತರು ತಮ್ಮ ಕೊನೆಯ ಭೋಜನದ ವೇಳೆ 12 ಮಂದಿ ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರ ಪ್ರತಿಪಾದಿಸಿದುದರ ಸಂಕೇತವಾಗಿ ಕ್ರೈಸ್ತ ಚರ್ಚ್ಗಳಲ್ಲಿ ಗುರುವಾರ ಸಂಜೆ ಧರ್ಮಗುರು 12 ಜನ ಕ್ರೈಸ್ತರ ಪಾದಗಳನ್ನು ತೊಳೆದರು.
ಮಂಗಳೂರಿನ ರೊಜಾರಿಯೋ ಕೆಥೆಡ್ರಲ್ನಲ್ಲಿ ಬಿಷಪ್ ರೆ| ಡಾ| ಅಲೋಶಿಯಸ್ ಪಾವ್É ಡಿ’ಸೋಜಾ, ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್ನಲ್ಲಿ ಬಿಷಪ್ ರೆ| ಡಾ| ಜೆರಾಲ್ಡ್ ಐಸಾಕ್ ಲೋಬೊ ಪ್ರಕ್ರಿಯೆ ನಡೆಸಿದರು.
ಫಾ| ಜೆ.ಬಿ. ಕ್ರಾಸ್ತಾ ಮತ್ತು ಇತರ ಧರ್ಮಗುರು ಉಪಸ್ಥಿತರಿದ್ದರು. ಮಂಗಳೂರಿನಲ್ಲಿ 6 ಪುರುಷರು, 6 ಮಹಿಳೆಯರು, ಕಲ್ಯಾಣಪುರದಲ್ಲಿ 7 ಪುರುಷರು, 5 ಮಹಿಳೆಯರ ಪಾದ ತೊಳೆಯಲಾಯಿತು. ಮಹಿಳೆಯರಿಗೂ ಸಮಾನ ಸ್ಥಾನಮಾನ ನೀಡಬೇಕು ಎಂದು ಪೋಪ್ ಫ್ರಾನ್ಸಿಸ್ ಅವರ ಆದೇಶದಂತೆ ಕಳೆದ ವರ್ಷದಿಂದ ಈ ಬದಲಾವಣೆ ಮಾಡಲಾಗಿತ್ತು.
ಮಹಿಳೆಯರಿಗೆ ಸ್ಥಾನಮಾನ ಕಲ್ಪಿಸುವಾಗ ಯುವಜನರಿಗೆ, ವಯಸ್ಕರಿಗೆ, ರೋಗಿಗಳಿಗೆ ಹಾಗೂ ಧಾರ್ಮಿಕ ವ್ಯಕ್ತಿಗಳಿಗೂ ಪ್ರಾತಿನಿಧ್ಯ ನೀಡಲಾಗಿದ್ದು, ಅದರಂತೆ ಧರ್ಮ ಭಗಿನಿಯರೂ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ