ಪುದುವೆಟ್ಟು: ತೋಟಕ್ಕೆಂದು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Team Udayavani, Jul 4, 2022, 3:21 PM IST
ಬೆಳ್ತಂಗಡಿ: ತೋಟಕ್ಕೆಂದು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಮಡ್ಯ ಎಂಬಲ್ಲಿ ಸೋಮವಾರ (ಜು.4) ಪತ್ತೆಯಾಗಿದೆ.
ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿ ಲಿಂಗಪ್ಪ ಪೂಜಾರಿ(65) ಮೃತ ದುರ್ದೈವಿ.
ಲಿಂಗಪ್ಪ ಅವರು ಜೂ. 30ರಂದು ತೋಟಕ್ಕೆ ಹೋದ ಬಳಿಕ ನಾಪತ್ತೆಯಾಗಿದ್ದು, ಹೊಳೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಹೊಳೆ ಪ್ರದೇಶದಲ್ಲಿ ಸಾಕಷ್ಟು ಹುಡುಕಾಟ ನಡೆಸಲಾಗಿತ್ತು. ಆದರೆ ಯಾವುದೇ ಸುಳಿವು ಕಂಡುಬಂದಿರಲಿಲ್ಲ. ಸೋಮವಾರ ಅವರ ಮೃತದೇಹ ತೋಟದಿಂದ ಒಂದೂವರೆ ಕಿ.ಮೀ ಕೆಳಭಾಗದ ಮಡ್ಯ ಎಂಬಲ್ಲಿ ಕಂಡು ಬಂದಿದೆ.
ಇದನ್ನೂ ಓದಿ: ಕೊಳ್ಳೇಗಾಲ: ಎರಡು ದಿನದ ಗಂಡು ಮಗುವನ್ನು ಕಸದ ರಾಶಿಗೆ ಎಸೆದ ತಾಯಿ
ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪಿ.ಎಸ್.ಐ.ಎ.ಕೃಷ್ಣಕಾಂತ ಪಾಟೀಲ್ ಮತ್ತು ತಂಡದವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್