ಮೆಸ್ಕಾಂ ಆನ್‌ಲೈನ್‌ ಬಿಲ್‌ ಪಾವತಿ ಸೌಲಭ್ಯ: ಗ್ರಾಮಾಂತರಕ್ಕೂ ವಿಸ್ತರಣೆ


Team Udayavani, May 28, 2019, 6:00 AM IST

2705MLR13

ಮಹಾನಗರ: ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿಯು (ಮೆಸ್ಕಾಂ) ಗ್ರಾಮಾಂತರ ಪ್ರದೇಶದ ವಿದ್ಯುತ್‌ ಗ್ರಾಹಕರಿಗೆ ಆನ್‌ಲೈನ್‌ ಮತ್ತು ಪೇಟಿಎಂ ಮೂಲಕ ವಿದ್ಯುತ್‌ ಬಿಲ್‌ ಪಾವತಿ ಮಾಡುವ ಸೇವೆಯನ್ನು ಪ್ರಾರಂಭಿಸಿವೆ.

ಗ್ರಾಮಾಂತರ ಪ್ರದೇಶದ ವಿದ್ಯುತ್‌ ಬಳಕೆದಾರ ಗ್ರಾಹಕರು ನಗರ ಪ್ರದೇಶಕ್ಕೆ ತೆರಳಿ ಸರತಿ ಸಾಲಿನಲ್ಲಿ ಗಂಟೆಗಟ್ಟಲೇ ನಿಂತು ಬಿಲ್‌ ಪಾವತಿ ಮಾಡುತ್ತಿದ್ದರು. ಇದರಿಂದ ಗ್ರಾಹಕರಿಗೆ ಮುಕ್ತಿ ನೀಡುವ ಕಾರಣದಿಂದ ನಗರದ ಪ್ರದೇಶದ ವಿದ್ಯುತ್‌ ಗ್ರಾಹಕರಿಗೆ ಮಾತ್ರ ಆನ್‌ಲೈನ್‌ ಬಿಲ್‌ ಪಾವತಿ ಸೌಲಭ್ಯ ನೀಡಿದ್ದ ಮೆಸ್ಕಾಂ ಇದೀಗ ಗ್ರಾಮೀಣ ಪ್ರದೇಶದ ಗ್ರಾಹಕರಿಗೂ ಈ ಸೌಲಭ್ಯವನ್ನು ವಿಸ್ತರಿಸಿವೆ. ಇದರೊಂದಿಗೆ ಮೆಸ್ಕಾಂ ವ್ಯಾಪ್ತಿಯ ಉಡುಪಿ, ದ.ಕ., ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಸುಮಾರು 16 ಲಕ್ಷಕ್ಕೂ ಅಧಿಕ ಗ್ರಾಹಕರು ಈ ಸೌಲಭ್ಯವನ್ನು ಪಡೆ ಯಲು ಸಾಧ್ಯವಾಗಿದೆ. ಗ್ರಾಹಕರು ಮನೆಯಲ್ಲಿಯೇ ಕುಳಿತು ಆ್ಯಂಡ್ರಾಯ್ಡ ಪೋನ್‌ ಮೂಲಕ ಬಿಲ್‌ ಪಾವತಿ ಮಾಡುವ ಸರಳ ವಿಧಾನವನ್ನು ಮೆಸ್ಕಾಂ ಪರಿಚಯಿಸಿದೆ.

ಪಾವತಿ ಹೇಗೆ
www. mesco.in ವೆಬ್‌ಸೈಟ್‌ಗೆ ಹೋದಾಗ ಆಯ್ಕೆ ಪರದೆಯು ತೆರೆದುಕೊಳ್ಳುತ್ತವೆ. ಹಾಗೇ ಆನ್‌ಲೈನ್‌ ಪೇಮೆಂಟ್‌ ಸಿಸ್ಟಮ್‌ ಐಕಾನ್‌ ಕಾಣುತ್ತದೆ. ಅದನ್ನು ಕ್ಲಿಕ್‌ ಮಾಡಿದರೆ ಆರ್‌ಎಪಿಡಿಆರ್‌ ಪಟ್ಟಣ ಹಾಗೂ ಗ್ರಾಮಾಂತರ ಎಂಬ ಆಯ್ಕೆ ತೆರೆದುಕೊಳ್ಳುತ್ತದೆ. ಗ್ರಾಮೀಣ ಭಾಗದ ಗ್ರಾಹಕರು ಗ್ರಾಮಾಂತರ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ಅನಂತರ ವಿದ್ಯುತ್‌ ಗ್ರಾಹಕರ ಆರ್‌ಆರ್‌ ಸಂಖ್ಯೆ ನಮೂದಿಸಿ ತ್ವರಿತವಾಗಿ ಬಿಲ್‌ ಪಾವತಿ ಮಾಡಬಹುದು.

ಪೇಟಿಎಂ ಮೂಲಕವೂ ಬಿಲ್‌ ಪಾವತಿ ಮಾಡುವ ಅವಕಾಶವಿದ್ದು, ಗ್ರಾಹಕರು ಮೊಬೈಲ್‌ ಸಂಖ್ಯೆ ದಾಖಲು ಮಾಡಿದ್ದರೆ, ಪಾವತಿಸಿದ ಕೂಡಲೇ ಎಸ್‌ಎಂಸ್‌ ಸಂದೇಶ ನೀಡುವ ವ್ಯವಸ್ಥೆಯೂ ಇದೆ. ನಗರ ಪ್ರದೇಶದವರು ಭಾರತ್‌ ಬಿಲ್‌ ಪೇ ಸರ್ವಿಸ್‌ (ಬಿಬಿಪಿಎಸ್‌) ಮೂಲಕವೂ ಬಿಲ್‌ ಪಾವತಿಸಬಹುದು. ಆದರೆ ಈ ಸೌಲಭ್ಯವು ಗ್ರಾಮೀಣ ಪ್ರದೇಶದ ಗ್ರಾಹಕರಿಗೆ ಸದ್ಯಕ್ಕೆ ಸಿಗುತ್ತಿಲ್ಲ.

ಮೇ 16ರಿಂದ ಆನ್‌ಲೈನ್‌ ಪಾವತಿ ವ್ಯವಸ್ಥೆಯನ್ನು ಅಧಿಕೃತವಾಗಿ ಆರಂಭಿಸಲಾಗಿದೆ. ಮೆಸ್ಕಾಂನ 24 ಲಕ್ಷ ಗ್ರಾಹಕರ ಪೈಕಿ 16 ಲಕ್ಷಕ್ಕೂ ಅಧಿಕ ಗ್ರಾಮೀಣ ಭಾಗದ ಗ್ರಾಹಕರು ಈ ಸೌಲಭ್ಯ ಪಡೆಯಲಿದ್ದಾರೆ.

 ಸಮಯ ವ್ಯರ್ಥ ಮಾಡಬೇಕಿಲ್ಲ
ಬಿಲ್‌ ಪಾವತಿಗಾಗಿ ಗಂಟೆಗಟ್ಟಲೆ ಸಾಲಿನಲ್ಲಿ ನಿಂತು ಸಮಯ ವ್ಯರ್ಥ ಮಾಡಬೇಕಾಗಿಲ್ಲ. ಮನೆಯಲ್ಲೇ ಮೊಬೈಲ್‌ ಬಳಕೆ ಮಾಡಿಕೊಂಡು ಆನ್‌ಲೈನ್‌ ವ್ಯವಸ್ಥೆಯಿಂದ ಬಿಲ್‌ ಪಾವತಿಸಬಹುದು.
 - ಸ್ನೇಹಲ್‌ ಆರ್‌., ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ .

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.