ಎಂಐಎಫ್ಎಸ್ಇಯಲ್ಲಿ ರಾ. ಸುರಕ್ಷತಾ ದಿನಾಚರಣೆ
Team Udayavani, Mar 6, 2019, 1:00 AM IST
ಮಂಗಳೂರು: ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಫೈರ್ ಸೇಫ್ಟಿ ಎಂಜಿನಿಯರಿಂಗ್ ಸಂಸ್ಥೆಯು ರಾಷ್ಟ್ರೀಯ ಸುರಕ್ಷತಾ ದಿನವನ್ನು ಮಂಗಳವಾರ ಸಂಸ್ಥೆಯ ನೂತನ ಕ್ಯಾಂಪಸ್ ಅಡ್ಯಾರ್ನಲ್ಲಿ ವಿದ್ಯಾರ್ಥಿಗಳು ಮತ್ತು ವಿವಿಧ ಕಂಪೆನಿಗಳ ಸಹಯೋಗದೊಂದಿಗೆ ಆಚರಿಸಿತು.
ಎಂಐಎಫ್ಎಸ್ಇ ಸಂಸ್ಥೆಯ ಆಡಳಿತ ನಿರ್ದೇಶಕ ವಿನೋದ್ ಜಾನ್ ಮಾತನಾಡಿ, ಸುರಕ್ಷತೆ ಎಂಬುದು ಕೇವಲ ಉದ್ಯಮ ಮತ್ತು ಕಾರ್ಮಿಕರಿಗೆ ಸೀಮಿತವಾಗಿಲ್ಲ. ಪ್ರತಿಯೊಬ್ಬರೂ ಹೇಗೆ ಸುರಕ್ಷಿತವಾಗಿ ಬದುಕಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸು ವುದೇ ಈ ಆಚರಣೆಯ ಉದ್ದೇಶ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ನಗರ ಅಗ್ನಿಶಾಮಕ ದಳದ ಪ್ರಾಂತೀಯ ಅಗ್ನಿಶಮನ ಅಧಿಕಾರಿ ಜಿ. ತಿಪ್ಪೇಸ್ವಾಮಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಸುರಕ್ಷತೆ ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ ಎಂದರು.
ಬಳಿಕ ವಿಶೇಷ ಸುರಕ್ಷತಾ ಜಾಥಾಕ್ಕೆ ಚಾಲನೆ ನೀಡಲಾಯಿತು. ಸುಮಾರು 200ರಷ್ಟು ವಿದ್ಯಾರ್ಥಿಗಳು, ಸಂಸ್ಥೆಯ ಸಿಬಂದಿ ಮತ್ತು ಸಾರ್ವಜನಿಕರು ಪಾಲ್ಗೊಂಡ ಜಾಥಾ ಅಡ್ಯಾರ್ ಕ್ಯಾಂಪಸ್ನಿಂದ ಅಡ್ಯಾರ್ಕಟ್ಟೆ ಮೂಲಕ ಸುಮಾರು 6 ಕಿ.ಮೀ. ಸಾಗಿ ಮತ್ತೆ ಅಡ್ಯಾರ್ ಎಂಐಎಫ್ಎಸ್ಇ ಕ್ಯಾಂಪಸ್ನಲ್ಲಿ ಕೊನೆಗೊಂಡಿತು.
ಸಂಸ್ಥೆಯ ಪ್ರಾಂಶುಪಾಲ ಯಶವಂತ್ ಗೋಪಾಲ್ ಶೆಟ್ಟಿ ಮತ್ತು ಅಡ್ಮಿನಿಸ್ಟ್ರೇಟರ್ ಸನತ್ ಕೆ.ಬಿ. ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಸಿಬಂದಿಗಳಾದ ಮಕೂºಲ್ ಶರೀಫ್, ಓಬಯ್ಯ, ವೆನಿಲ್ಡಾ, ರಾಹಿಲಾ, ದೀಪ್ತಿ, ರಾಜೇಶ್, ನಿಶೆಲ್, ಪ್ರಮೀಳಾ, ನವ್ಯಾ, ಚಂದ್ರಾವತಿ ಭಾಗವಹಿಸಿ ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ