ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ನಗರ ಪೊಲೀಸ್ ಕಮಿಷನರ್ ಹರ್ಷ ಹೇಳಿದ್ದೇನು?


Team Udayavani, Jan 20, 2020, 7:41 PM IST

Harsha-IPS-730

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅವರಣದಲ್ಲಿ ಸ್ಫೋಟಕ ತುಂಬಿದ್ದ ಶಂಕಿತ ಬ್ಯಾಗ್ ಒಂದು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಹರ್ಷ ಐ.ಪಿ.ಎಸ್. ಅವರು ತನಿಖೆಯಲ್ಲಿ ಇದುವರೆಗೆ ಆಗಿರುವ ಬೆಳಣಿಗೆಗಳ ಕುರಿತು ಮಾಧ್ಯಮಗಳಿಗೆ ವಿವರವಾದ ಮಾಹಿತಿಯನ್ನು ಒದಗಿಸಿದ್ದಾರೆ.

ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ 8.49ರ ಸುಮಾರಿಗೆ ಡಿಪಾರ್ಚರ್ ಟರ್ಮಿನಲ್ ಬಳಿಯ ಟಿಕೆಟ್ ಕೌಂಟರ್ ಬಳಿ ಹತ್ತಿರ ಶಂಕಾಸ್ಪದ ವ್ಯಕ್ತಿಯೊಬ್ಬ ಶಂಕಿತ ಬ್ಯಾಗ್ ಅನ್ನು ಬಿಟ್ಟುಹೋದ ಬಳಿಕ ಸ್ಥಳದಲ್ಲಿ ಭದ್ರತೆಗೆ ನಿಯೋಜಿತವಾಗಿರುವ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನವರು ತಮ್ಮ ಸೆಕ್ಯುರಿಟಿ ನಿಯಮಾವಳಿಗೆ ಅನುಗುಣವಾಗಿ ಶಂಕಿತ ಬ್ಯಾಗ್ ಅನ್ನು ತೀವ್ರ ತಪಾಸಣೆ ನಡೆಸಿ ಇದು ಸ್ಫೋಟಕ ಇರಬಹುದು ಎಂಬ ಸಂಶಯದ ಮೇಲೆ ಈ ವಿಚಾರವನ್ನು ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುತ್ತಾರೆ.

ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸ್ ಇಲಾಖೆಯು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳವನ್ನು ಘಟನಾ ಸ್ಥಳಕ್ಕೆ ಕರೆಸಿಕೊಳ್ಳುತ್ತಾರೆ. ಸ್ಥಳಕ್ಕಾಗಮಿಸಿದ ಬಾಂಬ್ ಪತ್ತೆ ದಳದವರು ಪ್ರಾಥಮಿಕ ಪರೀಕ್ಷೆಯನ್ನು ನಡೆಸಿ ಇದನ್ನು ನಿಷ್ಕ್ರಿಯಗೊಳಿಸುವುದು ಅತ್ಯಗತ್ಯ ಎಂಬ ನಿರ್ಧಾರಕ್ಕೆ ಬರುತ್ತಾರೆ.

ಬಳಿಕ ಸ್ಥಳಿಯ ಪೊಲೀಸರ ನೆರವಿನಿಂದ ಘಟನಾ ಸ್ಥಳವನ್ನು ಸಂಪೂರ್ಣವಾಗಿ ವಶಕ್ಕೆ ಪಡೆದುಕೊಂಡು ಸ್ಫೋಟಕ ಕಂಟೈನರ್ ನೆರವಿನಿಂದ ಶಂಕಿತ ಸ್ಪೋಟಕ ತುಂಬಿದ್ದ ಬ್ಯಾಗನ್ನು ಅಲ್ಲಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತದೆ. ಬಳಿಕ ಸ್ಫೋಟಕವನ್ನು ಸುರಕ್ಷಿತವಾಗಿ ಸ್ಫೋಟಿಸುವ ಹೊಣೆಯನ್ನು ಬಾಂಬ್ ನಿಷ್ಕ್ರಿಯ ದಳದವರು ಕೆಂಜಾರು ಮೈದಾನದಲ್ಲಿ ಯಶಸ್ವಿಯಾಗಿ ನಡೆಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಸಿ.ಎ.ಎಸ್.ಎಫ್.ನ ದೂರಿನ ಮೇರೆಗೆ ಬಜ್ಪೆ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಮತ್ತು ಲಭ್ಯವಿರುವ ಎಲ್ಲಾ ಸಾಕ್ಷ್ಯಾಧಾರಗಳ ಮೇಲೆ ಪೊಲೀಸರು ಈಗಾಗಲೇ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈ ಕೃತ್ಯ ಎಸಗಿರುವ ದುಷ್ಕರ್ಮಿಯ ಪ್ರಾಥಮಿಕ ಚಹರೆ ಮಾಹಿತಿಗಳು ಲಭ್ಯವಾಗಿದ್ದು ಅದನ್ನು ಸಾರ್ವಜನಿಕ ಮಾಹಿತಿ ಮತ್ತು ಗುರುತಿಸುವಿಕೆಗಾಗಿ ಪೊಲೀಸರು ಈಗಾಗಲೇ ಎಲ್ಲೆಡೆ ಹಂಚಿಕೊಂಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಪೊಲೀಸರಿಗೆ ಲಭಿಸಿರುವ ಮಾಹಿತಿಯಂತೆ, ಮಧ್ಯವಯಸ್ಕ ಪುರುಷ ತನ್ನ ಗುರುತನ್ನು ಮರೆಮಾಚಿ ಆಟೋ ರಿಕ್ಷಾದಲ್ಲಿ ಬಂದು ಈ ದುಷ್ಕೃತ್ಯ ಎಸಗಿರುವುದು ಮೇಲ್ನೋಟದಲ್ಲಿ ಕಂಡುಬಂದಿದೆ. ಈಗಾಗಲೇ ಮೂರು ತನಿಖಾ ತಂಡಗಳನ್ನು ರಚಿಸಲಾಗಿದೆ. ಮತ್ತು ತನಿಖೆಯಲ್ಲಿ ಹಲವಾರು ಮಾಹಿತಿಗಳು ಈ ತನಿಖಾ ತಂಡಗಳಿಗೆ ಈಗಾಗಲೇ ಲಭಿಸಿದೆ.

ಈ ರೀತಿಯ ವಿಧ್ವಂಸಕ ಕೃತ್ಯಗಳನ್ನು ಪತ್ತೆ ಹಚ್ಚಲು ಇರುವ ಸಂಸ್ಥೆಗಳ ಜೊತೆ ಈ ಘಟನೆಯಲ್ಲಿ ಲಭ್ಯವಿರುವ ಸುಳಿವುಗಳನ್ನು ಈಗಾಗಲೇ ಹಂಚಿಕೊಳ್ಳಲಾಗಿದೆ. ಈ ಕುರಿತಾದಂತೆ ಸಾರ್ವಜನಿಕರಿಗೆ ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸುಳಿವು ಲಭಿಸಿದಲ್ಲಿ ಅದನ್ನು ಪೊಲೀಸ್ ಇಲಾಖೆಯ ಜೊತೆಗೆ ಹಂಚಿಕೊಳ್ಳುವಂತೆ ಕಮಿಷನರ್ ಅವರು ಸಾರ್ವಜನಿಕರಲ್ಲಿ ವಿನಂತಿಯನ್ನು ಮಾಡಿಕೊಂಡಿದ್ದಾರೆ.

ಈಗಾಗಲೇ ಪೊಲೀಸರು ಬಿಡುಗಡೆಗೊಳಿಸಿರುವ ಶಂಕಾಸ್ಪದ ವ್ಯಕ್ತಿಯ ಚಹರೆಯನ್ನು ಹೋಲುವ ವ್ಯಕ್ತಿಗಳ ಮಾಹಿತಿ ಎಲ್ಲಿಯಾದರೂ ಸಿಕ್ಕಿದಲ್ಲಿ ಅಥವಾ ಈ ಹಿಂದೆ ಶಂಕಾಸ್ಪದ ವ್ಯಕ್ತಿಯನ್ನು ಮಂಗಳೂರು ನಗರದಲ್ಲಿ ಯಾರಾದ್ರೂ ನೋಡಿದ್ದಲ್ಲಿ, ಅಥವಾ ಬೇರಿನ್ಯಾವುದೇ ಸುಳಿವಿದ್ದಲ್ಲಿ ಅವುಗಳನ್ನು ಪೊಲೀಸ್ ಇಲಾಖೆಯ ಯಾವುದೇ ಅಧಿಕಾರಿಗೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ನೀಡಬಹುದು ಎಂದು ಪೊಲೀಸ್ ಕಮಿಷನರ್ ಅವರು ಇದೇ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮಂಗಳೂರು ನಗರದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರದ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಈಗಾಗಲೇ ಕಟಿಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರದ ಸೂಕ್ಷ್ಮ ಪ್ರದೇಶಗಳ ನಿಗಾವಣೆ ಮತ್ತು ತಪಾಸಣೆಯಲ್ಲಿ ಈಗಾಗಲೇ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅತೀ ಶೀಘ್ರದಲ್ಲಿ ಈ ತನಿಖೆಯಲ್ಲಿ ಪೊಲೀಸರು ನಿರ್ಣಾಯಕ ಹಂತವನ್ನು ತಲುಪುವ ವಿಶ್ವಾಸವನ್ನು ಪೊಲೀಸ್ ಕಮಿಷನರ್ ಹರ್ಷ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.