ಮೂಲಸೌಕರ್ಯ ಗಳಿಲ್ಲದೆ ಪರದಾಡುತ್ತಿರುವ ವಲಸಿಗರು

ಜೋಪಡಿಗೆ ಬಾಡಿಗೆ 500-2,000 ರೂ.: ಬಯಲು ಶೌಚಾಲಯದಲ್ಲಿ ನಿತ್ಯಕರ್ಮ!

Team Udayavani, Nov 8, 2020, 1:07 PM IST

ಮೂಲಸೌಕರ್ಯ ಗಳಿಲ್ಲದೆ ಪರದಾಡುತ್ತಿರುವ ವಲಸಿಗರು

ಪಣಂಬೂರು, ನ. 7: ಇಂದಿಗೂ ಶೌಚಾಲಯವಿಲ್ಲದ ನೂರಾರು ವಲಸಿಗ ಕುಟುಂಬಗಳು, ಮನೆ, ಜೋಪಡಿಗಳು ಆಧುನಿಕ ತಂತ್ರ ಜ್ಞಾನದ ದಿನ ಗಳಲ್ಲಿಯೂ ಅದೂ ಮಂಗಳೂರು ಸುತ್ತಮುತ್ತ ಕಾಣಸಿಗುತ್ತಿವೆ.

ಬೈಕಂಪಾಡಿಯ ಮೀನಕಳಿಯ ಬಳಿ ಸಮುದ್ರ ದಂಡೆ, ರೈಲ್ವೇ ಯಾರ್ಡ್‌ ಭಾಗಗಳಲ್ಲಿ ಒಂದು ಬಾರಿ ಸುತ್ತಾಡಿ ಬಂದರೆ ನಿಜ ಸ್ವರೂಪ ದರ್ಶನವಾಗುತ್ತದೆ. ರಾಜ್ಯದ ಉತ್ತರ ಕರ್ನಾಟಕದಿಂದ ಬಂದ ಕೂಲಿ ಕಾರ್ಮಿಕರಿಗೆ ತಮ್ಮ ಜಾಗದಲ್ಲಿ ಜೋಪಡಿ ನಿರ್ಮಿಸಲು ಅವಕಾಶ ಕೊಟ್ಟು 500ರಿಂದ 2,000 ರೂ.ಗಳ ವರೆಗೆ ಜಾಗದ ಮಾಲಕರು ಬಾಡಿಗೆ ವಸೂಲು ಮಾಡುತ್ತಾರೆ. ಆದರೆ ಅವರಿಗೆ ಸ್ನಾನ, ಶೌಚಾಲಯಕ್ಕೆ ಬೇಕಾದ ವ್ಯವಸ್ಥೆ ಮಾಡುವಲ್ಲಿ ಹಿಂದುಳಿದಿದ್ದಾರೆ. ನಿತ್ಯ ಕರ್ಮಕ್ಕಾಗಿ ರಸ್ತೆ ಬದಿ, ರೈಲ್ವೇ ಯಾರ್ಡ್‌ ಮತ್ತಿತರ ಪ್ರದೇಶ ಹುಡುಕಿಕೊಳ್ಳುತ್ತಾರೆ. ಇನ್ನು ಕೆಲವರಂತೂ ರಸ್ತೆ ಬದಿ ನಾಲ್ಕು ಪ್ಲಾಸ್ಟಿಕ್‌ ಹೊದಿಕೆ ಕಟ್ಟಿ ಸ್ನಾನಗೃಹ ನಿರ್ಮಿಸಿದ್ದಾರೆ. ಆದರೆ ರಸ್ತೆ ಮೇಲೆಯೇ ಈ ನೀರು ಹರಿದು ಪಾದಚಾರಿಗಳು ಸಂಕಷ್ಟ ಎದುರಿ ಸುವಂತಾಗಿದೆ. ಈ ಭಾಗದಲ್ಲಿ ಐವತ್ತಕ್ಕೂ ಮಿಕ್ಕಿ ಜೋಪಡಿಗಳಿದ್ದು ಇನ್ನೂರಕ್ಕೂ ಮಿಕ್ಕಿ ಕಾರ್ಮಿಕರು ನಿತ್ಯ ಜೀವನ ಸಾಗಿಸುತ್ತಿದ್ದಾರೆ.

ಶುಚಿತ್ವದ ಕೊರತೆ;ಆರೋಗ್ಯ ಸಮಸ್ಯೆ :
ಮಂಗಳೂರು ಹೊರವಲಯದ ಪ್ರವಾಸಿ ಸಮುದ್ರ ತೀರ ಪ್ರದೇಶಗಳಲ್ಲಿ ಹಣ ಕೊಟ್ಟು ಬಳಸುವ ಶೌಚಾಲಯವಿಲ್ಲ. ಇದರ ಜತೆಗೆ ಈ ಭಾಗದಲ್ಲಿ ಕೆಲವೊಂದು ಬಾಡಿಗೆದಾರರು ಶೌಚಾಲಯ ನಿರ್ಮಿಸಿ ಕೊಟ್ಟಿದ್ದಾರೆ. ಇನ್ನುಳಿದವರು ಬಾಡಿಗೆ ಮಾತ್ರ ಪಡೆಯುತ್ತಾರೆ. ಮೂಲಸೌಕರ್ಯ ನೀಡಿಲ್ಲ. ಜೋಪಡಿಯಲ್ಲಿರುವ ಪುಟ್ಟ ಮಕ್ಕಳು ಕೂಡ ಈ ಬಯಲು ಶೌಚಾಲಯದ ದುಷ್ಪರಿಣಾಮ ಎದುರಿಸುತ್ತಿದ್ದಾರೆ. ಶುಚಿತ್ವದ ಕೊರತೆಯಿಂದ ನೆಗಡಿ, ಕೆಮ್ಮು, ಹೊಟ್ಟೆ ನೋವು ಮತ್ತಿತರ ಸಮಸ್ಯೆಗಳಿಂದ ಬಳಲುತ್ತಿರುವುದು ಕಂಡು ಬರುತ್ತಿದೆ. ಪಣಂಬೂರು, ಬೈಕಂಪಾಡಿ, ಮುಕ್ಕ ಸಹಿತ ಈ ಭಾಗದಲ್ಲಿ ಸಮುದ್ರ ತೀರದುದ್ದಕ್ಕೂ ವಲಸೆ ಕಾರ್ಮಿಕರು ಜೋಪಡಿ ನಿರ್ಮಿಸಿ ಕೊಂಡಿದ್ದಾರೆ. ಇನ್ನೊಂದೆಡೆ ಜಾಗವಿದ್ದ ಕಡೆಯಲ್ಲೆಲ್ಲ ತಗಡು ಶೀಟು ಹಾಕಿ ಕಾರ್ಮಿಕರಿಗೆ ಬಾಡಿಗೆ ನೀಡಲಾಗಿದೆ.

ಎಚ್ಚರಿಕೆ ನೀಡಿದ್ದೇವೆ :
ಇಲ್ಲಿನ ಜಾಗ ಬಾಡಿಗೆ ನೀಡಿದ ಸ್ಥಳಕ್ಕೆ ಭೇಟಿ ನೀಡಿ ಮಾಲಕರಿಗೆ ಎಚ್ಚರಿಕೆ ನೀಡಿದ್ದೇವೆ. ಸೂಕ್ತ ಶೌಚಾಲಯ ಕಟ್ಟಿಕೊಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದಲ್ಲಿ ಪಾಲಿಕೆಯ ಆರೋಗ್ಯ ಮತ್ತು ಪರಿಸರ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ಸುರತ್ಕಲ್‌ ವಲಯ ಆರೋಗ್ಯಾಧಿಕಾರಿ ಸುಶಾಂತ್‌, ಸುರತ್ಕಲ್‌ ವಲಯ ಪರಿಸರ ಅಧಿಕಾರಿ ದಯಾನಂದ್‌ ಅವರು ತಿಳಿಸಿದ್ದಾರೆ.

ರೋಗ ಹರಡುವ ಭೀತಿ : ನಾವು ಇಲ್ಲಿಯೇ ಅನೇಕ ವರ್ಷಗಳಿಂದ ವಾಸಿಸುತ್ತಿದ್ದೇವೆ. ಈ ಭಾಗದಲ್ಲಿ ಬಾಡಿಗೆಗೆ ಕುಳಿತುಕೊಳ್ಳಲು ಜಾಗ ನೀಡಿದರೂ ಬೇಕಾದ ಮೂಲಸೌಕರ್ಯ ನಿರ್ಮಿಸಿಕೊಡದೆ ಪರಿಸರ ಮಾಲಿನ್ಯವಾಗುತ್ತಿದೆ. ಬಯಲು ಶೌಚದಿಂದ ನಮ್ಮ ಸುತ್ತಮುತ್ತ ರೋಗ ಹರಡುವ ಭೀತಿ ವ್ಯಕ್ತವಾಗಿದೆ. -ಅನಂತ ಐತಾಳ್‌, ಮಾಜಿ ಅಧ್ಯಕ್ಷರು, ಪಣಂಬೂರು ಶ್ರೀ ನಂದನೇಶ್ವರ ವ್ಯವಸ್ಥಾಪನ ಸಮಿತಿ

 

 -ಲಕ್ಷ್ಮೀನಾರಾಯಣ ರಾವ್‌

ಟಾಪ್ ನ್ಯೂಸ್

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.