ಸೇನಾ ನೇಮಕಾತಿ: ಕರಾವಳಿಯಲ್ಲಿ ಉತ್ತಮ ಸ್ಪಂದನೆ 


Team Udayavani, Apr 15, 2017, 2:27 PM IST

Army.jpg

ಮಂಗಳೂರು/ಉಡುಪಿ: ಭಾರತೀಯ ಸೇನೆ ಸೇರಲು ದ.ಕ., ಉಡುಪಿ ಜಿಲ್ಲೆಯಲ್ಲಿ ಆಕಾಂಕ್ಷಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಈ ವರ್ಷ ಇದುವರೆಗೆ ಕ್ರಮವಾಗಿ 275 ಮತ್ತು 110 ಮಂದಿ ಅರ್ಜಿ ಸಲ್ಲಿಸಿದ್ದಾರೆ.

ಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಪ್ರತೀ ವರ್ಷ ರಾಜ್ಯದ ವಿವಿಧೆಡೆ ನೇಮಕಾತಿ ರ್ಯಾಲಿ ನಡೆಯುತ್ತದೆ. ಈ ವರ್ಷ ಮೇ 12ರಿಂದ ವಿಜಯಪುರದಲ್ಲಿ ರ್ಯಾಲಿ ನಡೆಯಲಿದೆ. ಮಾ. 12ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಎ. 25ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.
 
ಸಾಮಾನ್ಯ ಸೈನಿಕ, ಸೈನಿಕ ಟ್ರೇಡ್ಸ್‌ಮೆನ್‌ (ಎಸೆಸ್ಸೆಲ್ಸಿ ಉತ್ತೀರ್ಣರಾಗಿರುವವರು), ತಾಂತ್ರಿಕ ಸೈನಿಕ (ದ್ವಿತೀಯ ಪಿಯುಸಿ ಪಿಸಿಎಂ), ನರ್ಸಿಂಗ್‌ ಸಹಾಯಕ (ದ್ವಿತೀಯ ಪಿಯುಸಿ ಪಿಸಿಬಿ) ಹಾಗೂ ಸೈನಿಕ ಗುಮಾಸ್ತ (ದ್ವಿತೀಯ ಪಿಯುಸಿ ಇಂಗ್ಲಿಷ್‌, ಅಕೌಂಟ್ಸ್‌/ಗಣಿತ) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಸಾಮಾನ್ಯ ಸೈನಿಕ (21 ವರ್ಷ) ಹಾಗೂ ಉಳಿದ ಹುದ್ದೆಗಳಿಗೆ 23 ವರ್ಷದೊಳಗಿನ ಪುರುಷರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತವಾಗಿದ್ದು, ಯಾವುದೇ ಶುಲ್ಕ ಇರುವುದಿಲ್ಲ.

ರ್ಯಾಲಿಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಯುವಕರು ಭಾಗವಹಿಸಬಹುದು.

ಸೇನಾ ನೇಮಕಾತಿ ಪ್ರಕ್ರಿಯೆ ಒಟ್ಟು ಮೂರು ಹಂತಗಳಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಮೊದಲ ಹಂತದಲ್ಲಿ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿದ್ದು, ಅನಂತರ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು. ಈ ಎರಡು ಹಂತದಲ್ಲಿ ಉತ್ತೀರ್ಣರಾದವರು ಲಿಖೀತ ಪರೀಕ್ಷೆ ಬರೆಯಬೇಕಾಗಿದ್ದು, ಇದರಲ್ಲಿ ಪಾಸಾದವರನ್ನು ಸೇನೆಗೆ ಆಯ್ಕೆ ಮಾಡಿ ತರಬೇತಿಗೆ ಕಳುಹಿಸಲಾಗುತ್ತದೆ. 

ಆನ್‌ಲೈನ್‌ನಲ್ಲಿ ವೆಬ್‌ಸೈಟ್‌ www.joinindian army.nic.inಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸೇನಾ ನೇಮಕಾತಿ ಕೇಂದ್ರದ ಪ್ರಕಟನೆ ತಿಳಿಸಿದೆ. 

ಸೌಲಭ್ಯಗಳು: ಸೇನೆಗೆ ಆಯ್ಕೆಯಾದವರಿಗೆ ಮಾಸಿಕ ಸುಮಾರು 25,000 ರೂ. ವೇತನ ನೀಡಲಾಗುವುದು. ಅಲ್ಲದೇ, ಉಚಿತ ಸಮವಸ್ತ್ರ, ಆಹಾರ, ವಸತಿ, ವೈದ್ಯಕೀಯ ಸೌಲಭ್ಯ, ಉಚಿತ ರೈಲು ಪ್ರಯಾಣ ಹಾಗೂ ಕ್ಯಾಂಟೀನ್‌ ಸೌಲಭ್ಯ ದೊರಕಲಿದೆ. ಪ್ರತೀ ವರ್ಷ 90 ದಿನಗಳ ರಜಾ ಸೌಲಭ್ಯವೂ ದೊರಕಲಿದೆ. 

ಸೈನಿಕರು ಸರಾಸರಿ 15-17 ವರ್ಷ ಮಾತ್ರ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಅನಂತರ ಸೇನೆಯಿಂದ ನಿವೃತ್ತನಾಗಿ ಜೀವನದ ಉಳಿದ ಅವಧಿಯುದ್ದಕ್ಕೂ ಪಿಂಚಣಿ ದೊರಕಲಿದೆ. ತಂದೆ, ತಾಯಿ, ಮಕ್ಕಳು ಸೇರಿದಂತೆ ಕುಟುಂಬ ಸದಸ್ಯರಿಗೆ ಶಸ್ತ್ರಚಿಕಿತ್ಸೆ ಸೇರಿದಂತೆ ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯ ದೊರಕಲಿದೆ. ಕರ್ನಾಟಕ ರಾಜ್ಯ ಸರಕಾರಿ ನೇಮಕಾತಿಗಳಲ್ಲಿ ನಿವೃತ್ತ ಸೈನಿಕರಿಗೆ ಶೇ. 10ರಷ್ಟು ಮೀಸಲಾತಿ ಇದೆ. ದೇಶಾದ್ಯಂತ ಸಂಚರಿಸುವ ವಿಮಾನಯಾನ ಟಿಕೆಟ್‌ಗಳಲ್ಲಿ ರಿಯಾಯಿತಿ ದೊರಕಲಿದೆ. 

ಕರಾವಳಿಯಿಂದ ಸೇನಾ ನೇಮಕಾತಿ ರ್ಯಾಲಿಯಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಕಡಿಮೆಯಾಗಿತ್ತು. ಆದರೆ ಈ ವರ್ಷ ಉತ್ತಮ ಸ್ಪಂದನೆ ಕಂಡು ಬಂದಿದೆ. ಅರ್ಜಿ ಸಲ್ಲಿಸಲು ಇನ್ನೂ ಹತ್ತು ದಿನಗಳಿರುವುದರಿಂದ ಇನ್ನಷ್ಟು ಆಕಾಂಕ್ಷಿಗಳು ಬರಬಹುದು ಎಂಬ ವಿಶ್ವಾಸ ಸೇನಾ ನೇಮಕಾಧಿಕಾರಿ ಪ್ರಶಾಂತ್‌ ಪೇಟ್ಕರ್‌ ಅವರಿಗೆ ಇದೆ. 

ಪ್ರಸಕ್ತ ವರ್ಷ ಮಂಗಳೂರು ಕೂಳೂರಿನಲ್ಲಿರುವ ಸೇನಾ ನೇಮಕಾತಿ ಕೇಂದ್ರ ಜಿಲ್ಲಾಡಳಿತದ ಸಹಯೋಗದಲ್ಲಿ ಸೇನಾ ನೇಮಕಾತಿ ರ್ಯಾಲಿ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡಿತ್ತು. ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮ, ಮಾಧ್ಯಮಗಳ ಮೂಲಕ ನೇಮಕಾತಿಯ ಪ್ರಚಾರ ನಡೆಸಿತ್ತು. ಉಡುಪಿ ಜಿಲ್ಲಾಡಳಿತ ಪ್ರಚಾರದ ಜೊತೆ ಪರಿಶಿಷ್ಟ ಜಾತಿ, ಪಂಗಡದವರಿಗೆ ಉಚಿತ ತರಬೇತಿ ಆಯೋಜಿಸಿದೆ ಎಂದು ಪ್ರಕಟನೆ ತಿಳಿಸಿದೆ. 

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.