ಕೆಎಂಎಫ್ ಹಾಲಿನ ದರ ಹೆಚ್ಚಳ? ಜ.17ರಂದು ಆಡಳಿತ ಮಂಡಳಿ ಸಭೆ


Team Udayavani, Jan 8, 2020, 7:05 AM IST

nandini

– ಎಲ್ಲಾ 14 ಒಕ್ಕೂಟಗಳಿಂದಲೂ ಬೆಲೆ ಹೆಚ್ಚಳಕ್ಕೆ ಮನವಿ
– ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಿರುವ ಕೆಎಂಎಫ್

ಮಂಗಳೂರು: ಎಲ್ಲವೂ ಅಂದುಕೊಂಡಂತಾದರೆ ಸದ್ಯದಲ್ಲೇ ಹಾಲಿನ ದರ ಜೇಬು ಸುಡಲಿದೆ.

ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಘಗಳ ಒಕ್ಕೂಟ ಸಹಿತ ರಾಜ್ಯದ 14 ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವಂತೆ ಕೆಎಂಎಫ್ಗೆ ಮನವಿ ಸಲ್ಲಿಸಿವೆ. ಇದೇ 17ರಂದು ಕೆಎಂಎಫ್ ನಿರ್ದೇಶಕರ ಸಭೆ ನಡೆಯಲಿದ್ದು, ಇದರಲ್ಲಿ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ.

ಹೈನುಗಾರರ ಉತ್ಪಾದನಾ ವೆಚ್ಚ ಮತ್ತು ಒಕ್ಕೂಟಗಳ ನಿರ್ವಹಣ ವೆಚ್ಚ ಹೆಚ್ಚಾಗುತ್ತಿರುವುದರಿಂದ ನಂದಿನಿ ಹಾಲಿನ ದರ ಏರಿಕೆ ಮಾಡಬೇಕು ಎಂಬುದು ಒಕ್ಕೂಟಗಳ ಬೇಡಿಕೆ. ಹೀಗಾಗಿ, ಜ.17ರ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಂಡು ರಾಜ್ಯ ಸರಕಾರಕ್ಕೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಲಿದೆ. ಇದಕ್ಕೆ ಸರಕಾರ ಒಪ್ಪಿದಲ್ಲಿ ಹಾಲಿನ ದರ ಹೆಚ್ಚಳವಾಗುವುದು ಖಾತ್ರಿ. ರಾಜ್ಯದಲ್ಲಿ ಮೂರು ವರ್ಷಗಳ ಹಿಂದೆ ಹಾಲಿನ ದರವನ್ನು 2 ರೂ. ಏರಿಸಲಾಗಿತ್ತು. ಈಗಲೂ ಇಷ್ಟೇ ಏರಿಕೆ ಮಾಡುವಂತೆ ಕೆಎಂಎಫ್‌ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆಯಿದೆ.

ಒಕ್ಕೂಟಗಳ ವಾದವೇನು?
ಹಾಲಿನ ಮಾರಾಟ ದರ ಏರದೆ 3 ವರ್ಷ ಆಗಿದೆ. ನಿರ್ವಹಣ ವೆಚ್ಚ ಏರಿಕೆ ಆಗುತ್ತಲೇ ಇದೆ. ಡೀಸೆಲ್‌-ಪೆಟ್ರೋಲ್‌ ದರವೂ ಹೆಚ್ಚುತ್ತಿರುವುದರಿಂದ ಸಾಗಣೆ ವೆಚ್ಚವೂ ಏರುತ್ತಿರುವುದು ಹಾಲು ಉತ್ಪಾದಕ ಸಂಘಗಳಿಗೆ ಹೊರೆಯಾಗುತ್ತಿದೆ. ಸಿಬಂದಿಯ ಸಂಬಳ ಸಹಿತ ವಿವಿಧ ವೆಚ್ಚಗಳಲ್ಲೂ ಏರಿಕೆಯಾಗಿದ್ದು, ಇದನ್ನು ಹೊಂದಾಣಿಕೆ ಮಾಡಲು ಒಕ್ಕೂಟಗಳು ಸಮಸ್ಯೆ ಅನುಭವಿಸುತ್ತಿವೆ. ಅಷ್ಟೇ ಅಲ್ಲ, ನೆರೆಯ ರಾಜ್ಯಗಳಲ್ಲಿ ಹಾಲಿನ ಮಾರಾಟ ದರ ಹೆಚ್ಚು ಇರುವುದರತ್ತಲೂ ಒಕ್ಕೂಟಗಳು ಕೆಎಂಎಫ್‌ ಗಮನ ಸೆಳೆದಿವೆ.

ರೈತರಿಗೆ ಲಾಭ
ರೈತರಿಂದ ಹಾಲು ಖರೀದಿ ದರ ಏರಿಸದೆ ಸಾಕಷ್ಟು ಸಮಯವಾಗಿದ್ದು, ಏರಿಸುವಂತೆ ಬೇಡಿಕೆ ಸಲ್ಲಿಸುತ್ತಾ ಬಂದಿದ್ದಾರೆ. ಮೇವು, ಹಿಂಡಿ ಸಹಿತ ವಿವಿಧ ವಸ್ತುಗಳ ದರ ಜಾಸ್ತಿಯಾಗುತ್ತಲೇ ಇರುವುದರಿಂದ ಹಾಲಿನ ಖರೀದಿ ದರ ಏರಿಕೆ ಮಾಡುವಂತೆ ನಿರಂತರ ಒತ್ತಡವೂ ಇದೆ.

ಕೆಎಂಎಫ್‌ ವಿವರ
ಹಾಲು ಸಹಕಾರಿ ಸಂಘಗಳು: 16,380
ಒಟ್ಟು ಸದಸ್ಯರು: 25.20 ಲಕ್ಷ
ದೈನಂದಿನ ಹಾಲು ಸಂಗ್ರಹ: 77.22 ಲಕ್ಷ ಲೀ.
ದೈನಂದಿನ ಹಾಲು ಮಾರಾಟ: 36.77 ಲಕ್ಷ ಲೀ.

ಖಾಸಗಿಯವರು ಇತ್ತೀಚೆಗೆ ದರ ಏರಿಕೆ ಮಾಡಿದ್ದಾರೆ. ಹೀಗಾಗಿ ನಮ್ಮಲ್ಲಿ ದರ ಏರಿಕೆ ಮಾಡುವ ಬಗ್ಗೆ ಹಾಲು ಉತ್ಪಾದಕ ಸಂಘಗಳಿಂದ ಬೇಡಿಕೆ ಬಂದಿದೆ. ಜ.17ಕ್ಕೆ ಕೆಎಂಎಫ್‌ ನಿರ್ದೇಶಕರ ಮಂಡಳಿ ಸಭೆ ನಡೆಯಲಿದ್ದು, ಅಂದು ಈ ಕುರಿತು ಚರ್ಚೆ ನಡೆಸಲಿದ್ದೇವೆ.
– ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷರು

ಹಾಲು ಖರೀದಿ ದರ ಏರಿಕೆ ಮಾಡದೆ 3 ವರ್ಷ ಕಳೆದಿವೆ. ಹೈನುಗಾರರ ಹಿತರಕ್ಷಣೆ ಮತ್ತು ಉತ್ಪಾದನೆಯಲ್ಲಿ ಏರಿಕೆ ದಾಖಲಿಸುವುದಕ್ಕಾಗಿ ಹಾಲಿನ ಖರೀದಿ ದರ ಏರಿಕೆ ಮಾಡುವ ಆವಶ್ಯಕತೆಯಿದೆ. ಈ ಸಂಬಂಧ ಹಾಲಿನ ಮಾರಾಟ ದರ ಏರಿಕೆ ಮಾಡಬೇಕು ಎಂದು ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಕೆಎಂಎಫ್‌ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
– ರವಿರಾಜ್‌ ಹೆಗ್ಡೆ, ಅಧ್ಯಕ್ಷರು, ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ

  • ದಿನೇಶ್‌ ಇರಾ

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.