ಕರ್ಫ್ಯೂನಿಂದ ಹಾಲು ಮಾರಾಟಕ್ಕೂ ಹಿನ್ನಡೆ


Team Udayavani, May 5, 2021, 5:20 AM IST

ಕರ್ಫ್ಯೂನಿಂದ ಹಾಲು ಮಾರಾಟಕ್ಕೂ ಹಿನ್ನಡೆ

ಮಹಾನಗರ: ಕೋವಿಡ್ ಕರ್ಫ್ಯೂ ಹಾಲು ಮಾರಾಟದ ಮೇಲೆ ಪರಿಣಾಮ ಬೀರಿದ್ದು, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟಕ್ಕೆ ದಿನವಹಿ ಸರಾಸರಿ 80,000 ಲೀ. ಗಳಿಂದ 1 ಲಕ್ಷ ಲೀ. ಮಾರಾಟವಾಗದೆ ಉಳಿಕೆಯಾಗುತ್ತಿದೆ. ಮಿಗತೆ ಹಾಲನ್ನು ಹುಡಿಯಾಗಿ ಪರಿವರ್ತಿಸಲಾಗುತ್ತಿದೆ.

ದ.ಕ. ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಒಕ್ಕೂಟವು ಪ್ರಸ್ತುತ ದಿನಕ್ಕೆ ಸರಾಸರಿ 5,10,000 ಲೀ. ಹಾಲು ಶೇಖರಣೆ ಮಾಡುತ್ತಿದೆ. ಕರ್ಫ್ಯೂ ಜಾರಿಗೆ ಮೊದಲು ದಿನಕ್ಕೆ ಸರಾಸರಿ 4 ಲಕ್ಷ ಲೀ. ಹಾಲು ಮಾರಾಟವಾಗುತ್ತಿದ್ದರೆ ಈಗ 3,20,000 ಲೀ. ಮಾತ್ರ ಮಾರಾಟ ಆಗುತ್ತಿದೆ. ಮೊದಲು 50,000 ಲೀ. ಮೊಸರು ತಯಾರಿಕೆಗೆ, 30,000 ಲೀ. ಲಸ್ಸಿ, ಮಜ್ಜಿಗೆ ಇತ್ಯಾದಿಗೆ ಬಳಕೆಯಾಗುತ್ತಿತ್ತು. ಈಗ 65,000 ಲೀ. ಹಾಲನ್ನು ಮೊಸರು ತಯಾರಿಗೆ ಹಾಗೂ 40,000 ಲೀ. ಹಾಲನ್ನು ಲಸ್ಸಿ, ಮಜ್ಜಿಗೆ ಇತ್ಯಾದಿ ತಯಾರಿಗೆ ಬಳಸಲಾಗುತ್ತಿದೆ.

ಪ್ರಸ್ತುತ ಹೊಟೇಲ್‌ಗ‌ಳಿಗೆ ಹಾಲು ಪೂರೈಕೆ ಕಡಿಮೆಯಾಗಿದೆ. ಧಾರ್ಮಿಕ ಕಾರ್ಯಕ್ರಮಗಳಿಲ್ಲ. ಮದುವೆ ಇತ್ಯಾದಿ ಸಮಾರಂಭಗಳಿಗೆ ನಿರ್ಬಂಧ ಇರುವುದು ಹಾಲು ಮಾರಾಟ ಕಡಿಮೆಯಾಗಲು ಕಾರಣ. ಮೊಸರು ಮತ್ತು ಇತರ ಉತ್ಪನ್ನಗಳಿಗೂ ಬೇಡಿಕೆ ಕುಸಿದಿದೆ.

ಮಿಗತೆ ಹಾಲು ಲೀ.ಗೆ 8ರಿಂದ 10 ರೂ. ನಷ್ಟ ! :

ದ.ಕ. ಹಾಲು ಒಕ್ಕೂಟವು ಹಾಲು ಉತ್ಪಾದಕರಿಗೆ ರಾಜ್ಯದಲ್ಲಿಯೇ ಗರಿಷ್ಠ ದರ ನೀಡುತ್ತಿದೆ. ಇದೀಗ ಮಿಗತೆ ಹಾಲನ್ನು ಅನಿವಾರ್ಯವಾಗಿ ಹಾಲಿನ ಪುಡಿ ತಯಾರಿಸಲು ಬಳಸಬೇಕಾದ ಪರಿಸ್ಥಿತಿ ಎದುರಾಗಿದೆ. ಪುಡಿ ತಯಾರಿಸಲು ಹಾಲನ್ನು ದೂರದ ಚೆನ್ನಪಟ್ಟಣ ಅಥವಾ ರಾಮನಗರಕ್ಕೆ ಕೊಂಡೊಯ್ಯಬೇಕು. ಇದಕ್ಕಾಗಿ ಪ್ರತ್ಯೇಕ ಟ್ಯಾಂಕರ್‌ ವ್ಯವಸ್ಥೆ, ಸಾಗಾಟ ವೆಚ್ಚ ಮಾತ್ರವಲ್ಲದೆ ಹಾಲನ್ನು ಸಂಸ್ಕರಿಸಿ ಪುಡಿಯಾಗಿ ಪರಿವರ್ತಿಸಲು ಇನ್ನೊಂದಿಷ್ಟು ಖರ್ಚು. ಹಾಲಿನ ಪುಡಿಗೆ ರಾಜ್ಯದಲ್ಲಿ ಬೇಡಿಕೆ ಇಲ್ಲದಿದ್ದರೆ ಅದನ್ನು ಇತರ ರಾಜ್ಯಗಳಿಗೆ ಸಾಗಿಸಬೇಕಾಗಿದೆ. (ಹಾಲಿನ ಪುಡಿಗೆ ಪ್ರಸ್ತುತ ಕೆ.ಜಿ.ಗೆ 195 ರೂ. ಬೆಲೆ ಇದೆ). ಹಾಲಿನ ಪುಡಿ ತಯಾರಿಕೆಯಲ್ಲಿ ಖರ್ಚೇ ಜಾಸ್ತಿ; ಲಾಭದ ಸಾಧ್ಯತೆ ಕಡಿಮೆ. ಪುಡಿ ತಯಾರಿಸಲು ಬಳಕೆಯಾಗುವ ಪ್ರತಿ ಲೀ. ಹಾಲಿನಲ್ಲಿ 8ರಿಂದ 10 ರೂ. ನಷ್ಟದ ಸಾಧ್ಯತೆ ಹೆಚ್ಚು ಎಂದು ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ ತಿಳಿಸಿದ್ದಾರೆ.

ಕಳೆದ ಲಾಕ್‌ಡೌನ್‌ ವೇಳೆ ಹಳ್ಳಿ ಸೇರಿದವರಲ್ಲಿ ಜಮೀನು ಇರುವ ಹಲವು ಮಂದಿ ಹೈನುಗಾರಿಕೆಯಲ್ಲಿ ತೊಡಗಿದ್ದಾರೆ. ಈ ವರ್ಷ ಮಳೆಯೂ ಉತ್ತಮ ವಾಗಿರುವುದರಿಂದ ಹಸಿರು ಹುಲ್ಲು ಕೂಡ ಯಥೇತ್ಛ ವಾಗಿದೆ. ವಾತಾವರಣವೂ ಅನುಕೂಲ ಕರವಾಗಿರುವುದರಿಂದ ಹಾಲು ಉತ್ಪಾದನೆ ಹೆಚ್ಚಳವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ (ಮೇ ಮೊದಲ ವಾರ) ದಿನಕ್ಕೆ 3,95,000 ಲೀ. ಹಾಲು ಶೇಖರವಾಗಿದ್ದರೆ ಈ ವರ್ಷ 4,96,000 ಲೀಟರ್‌ಗೆ ಏರಿದೆ. ಮೇ 2ರಂದು ದಾಖಲೆಯ 5,18,000 ಲೀ. ಉತ್ಪಾದನೆಯಾಗಿದೆ. ಇದೀಗ ಕರ್ಫ್ಯೂ ಕಾರಣ ಹೆಚ್ಚುವರಿ ಹಾಲು ಉತ್ಪಾದನೆಯ ಮಾರಾಟವೇ ಸವಾಲಾಗಿದೆ. -ರವಿರಾಜ ಹೆಗ್ಡೆ, ಅಧ್ಯಕ್ಷರು, ದ.ಕ. ಹಾಲು ಉತ್ಪಾದಕರ ಸಹಕಾರಿ ಒಕ್ಕೂಟ

 

– ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.