ಕನಿಷ್ಠ ಕೂಲಿ, ತುಟ್ಟಿಭತ್ತೆ ಜಾರಿಗೆ ಆಗ್ರಹ
Team Udayavani, Jun 2, 2018, 9:59 AM IST
ಮಹಾನಗರ: ರಾಜ್ಯ ಸರಕಾರ ಎ. 1ರಿಂದ ಅನ್ವಯವಾಗುವಂತೆ ಬೀಡಿ ಕಾರ್ಮಿಕರಿಗೆ ಸಾವಿರ ಬೀಡಿಗೆ 210 ರೂ. ಕನಿಷ್ಠ ಕೂಲಿ ಹಾಗೂ ಪಾಯಿಂಟಿಗೆ 0.04 ಪೈಸೆಯಂತೆ ತುಟ್ಟಿ ಭತ್ತೆಯನ್ನು ಏರಿಕೆ ಮಾಡಿದೆ. ಈ ಏರಿಕೆ ವೇತನವನ್ನು ಬೀಡಿ ಮಾಲಕರು ಕೂಡಲೇ ಕಾರ್ಮಿಕರಿಗೆ ವಿತರಿಸಬೇಕೆಂದು ಸೌತ್ ಕೆನರಾ ಬೀಡಿ ವರ್ಕರ್ ಫೆಡರೇಶನ್ (ಸಿಐಟಿಯು) ನೇತೃತ್ವದಲ್ಲಿ ಬೀಡಿ ಕಾರ್ಮಿಕರು ನಗರದಲ್ಲಿ ಮೆರವಣಿಗೆ ನಡೆಸಿ, ಕದ್ರಿಯಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬೀಡಿ ಫೆಡರೇಶನ್ ಅಧ್ಯಕ್ಷ ವಸಂತ ಆಚಾರಿ, ಸಿಐಟಿಯು ಹಲವಾರು ವರ್ಷಗಳಿಂದ ನಡೆಸಿರುವ ಹೋರಾಟದ ಫಲವಾಗಿ ರಾಜ್ಯ ಸರಕಾರ ಕನಿಷ್ಠ ವೇತನ ಕಾಯಿದೆಯ ಸೆ. 5(1)(ಎ) ಅಡಿಯಲ್ಲಿ ನೇಮಿಸಿರುವ ತ್ರಿಪಕ್ಷೀಯ ಸಮಿತಿಯು ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ ಒಮ್ಮತದ ಕನಿ ಷ್ಠ ಕೂಲಿಯನ್ನು ಪ್ರಕಟಿಸಿದ್ದು, ಅದಕ್ಕೆ ಸಹಿ ಹಾಕಿರುವ ಮಾಲಕರು ಅದನ್ನು ಎ. 1ರಿಂದ ಜಾರಿ ಮಾಡುವುದರ ಬದಲು ಮೀನಮೇಷ ಎಣಿಸುವುದು ಸರಿಯಲ್ಲ ಎಂದರು.
ತುಟ್ಟಿಭತ್ತೆ ನೀಡದಿದ್ದರೆ ಹೋರಾಟ
ಫೆಡರೇಶನ್ ಉಪಾಧ್ಯಕ್ಷ ಯು.ಬಿ. ಲೋಕಯ್ಯ ಮಾತನಾಡಿ, ಕನಿ ಷ್ಠ ಕೂಲಿ ಮತ್ತು ತುಟ್ಟಿಭತ್ತೆಯನ್ನು ನೀಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದರು. ಬಳಿಕ ಸಹಾಯಕ ಕಾರ್ಮಿಕ ಆಯುಕ್ತರನ್ನು ಭೇಟಿ ಮಾಡಿದ ನಿಯೋಗವು, ಮನವಿಯನ್ನು ನೀಡಿತು. ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಜೆ. ಬಾಲಕೃಷ್ಣ ಶೆಟ್ಟಿ, ಪದ್ಮಾವತಿ ಶೆಟ್ಟಿ, ಬಾಬು ದೇವಾಡಿಗ, ಯು. ಜಯಂತ ನಾಯ್ಕ, ಸದಾಶಿವ ದಾಸ್, ಜಯಂತಿ ಶೆಟ್ಟಿ, ಗಂಗಯ್ಯ ಅಮೀನ್, ಬಾಬು ಪಿಲಾರ್, ವಸಂತಿ ಕುಪ್ಪೆಪದವು, ನೋಣಯ್ಯ ಗೌಡ, ಸುಂದರ ಕುಂಪಲ, ವಿಲಾಸಿನಿ ತೊಕ್ಕೊಟ್ಟು, ಕೃಷ್ಣಪ್ಪ ಸಾಲ್ಯಾನ್, ಭಾರತಿ ಬೋಳಾರ್, ಜಯಲಕ್ಷ್ಮೀ, ಪದ್ಮನಾಭ, ಪುಷ್ಪ ಶಕ್ತಿನಗರ, ಡಿವೈಎಫ್ಐ ನಾಯಕ ಮುನೀರ್ ಉಪಸ್ಥಿತರಿದ್ದರು. ಪದ್ಮಾವತಿ ಶೆಟ್ಟಿ ವಂದಿಸಿದರು.
ಕೂಡಲೇ ಪಾವತಿಸಿ
ಎಲ್ಲ ಆಹಾರ ಮತ್ತು ಅಗತ್ಯ ವಸ್ತುಗಳ ಮೇಲೆ ವಿಪರೀತ ಬೆಲೆ ಏರಿಕೆಯಾಗಿದೆ. ಅದನ್ನು ಸರಿದೂಗಿಸಿ ಬದುಕಲು ಬೀಡಿ ಕಾರ್ಮಿಕರಿಗೆ ತುಟ್ಟಿಭತ್ತೆಯನ್ನು ನ್ಯಾಯೋಚಿತವಾಗಿ ಕಾನೂನು ಬದ್ಧವಾಗಿ ಬೀಡಿ ಮಾಲಕರು ಕೂಡಲೇ ನೀಡಬೇಕು.
– ವಸಂತ ಆಚಾರಿ
ಅಧ್ಯಕ್ಷ, ಸಿಐಟಿಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ