ತಕ್ತೆ ಚಂಡಮಾರುತ; ಹಾನಿಗೆ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
Team Udayavani, May 17, 2021, 6:45 PM IST
ಮಂಗಳೂರು : ಕರ್ನಾಟಕದಲ್ಲಿ ತಕ್ತೆ ಚಂಡಮಾರುತದಿಂದ ಸಂಪೂರ್ಣ ಮನೆ ಕುಸಿದು ಬಿದ್ದಿದ್ದರೆ 5 ಲಕ್ಷ ಪರಿಹಾರ, ಭಾಗಶಃ ಹಾನಿಯಾಗಿದ್ದರೆ 1 ಲಕ್ಷ ಪರಿಹಾರ ನೀಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಇಂದು ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾನಿ ಪರಿಶೀಲನೆಗೆ ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜತೆಗೆ ಅವರು ಎನ್ಎಂಪಿಟಿ ಕಚೇರಿಯಲ್ಲಿ ಸಮುದ್ರದಲ್ಲಿ ಸಿಕ್ಕಿಬಿದ್ದಿದ್ದ ರಕ್ಷಣೆಯಾದ ಕಾರ್ಮಿಕರ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದರು.
ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಚಂಡಮಾರುತದಿಂದ ಮನೆ ಸಂಪೂರ್ಣ ಕುಸಿದು ಬಿದ್ದಿದ್ದರೆ 5 ಲಕ್ಷ ಪರಿಹಾರ, ಭಾಗಶಃ ಹಾನಿಯಾಗಿದ್ದರೆ 1 ಲಕ್ಷ ಪರಿಹಾರ, ಅರಬ್ಬಿ ಸಮುದ್ರದ ಟಗ್ ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಒದಗಿಸುವುದು. ಜತೆಗೆ ಚಂಡಮಾರುತದಿಂದ ತೊಂದರೆಗೊಳಗಾದ 182 ಕುಟುಂಬಗಳಿಗೆ ತಲಾ 10,000 ರೂಪಾಯಿ ಪರಿಹಾರ ಮನೆಗಳಿಗೆ ನೀಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.