ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ಸಚಿವ ರಮಾನಾಥ ರೈ
Team Udayavani, Apr 19, 2018, 11:21 AM IST
ಬಂಟ್ವಾಳ: ಸಚಿವ ಬಿ. ರಮಾನಾಥ ರೈ ಅವರು ಎ. 19ರಂದು ನಾಮಪತ್ರ ಸಲ್ಲಿಸುವುದಕ್ಕೆ ಪೂರ್ವಭಾವಿಯಾಗಿ ಬುಧವಾರ ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಅವರ ಆಶೀರ್ವಾದ ಪಡೆದರು. ಈ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಳಿವೇ ಇಲ್ಲ, ಜಿಲ್ಲೆಯಲ್ಲಿ ಎಲ್ಲ ಸ್ಥಾನಗಳನ್ನೂ ಕಾಂಗ್ರೆಸ್ ಪಡೆಯುವುದರೊಂದಿಗೆ ರಾಜ್ಯ
ದಲ್ಲೂ ಅತೀ ಹೆಚ್ಚಿನ ಸ್ಥಾನ ಗಳಿಸುತ್ತದೆ ಹಾಗೂ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಪೂಜಾರಿ ತಿಳಿಸಿದರು.
‘ರೈಯವರೇ ನಿಮ್ಮಂಥ ಜನಸೇವಕರನ್ನು ಪಡೆದಿರುವುದು ಕಾಂಗ್ರೆಸ್ ಮತ್ತು ಈ ರಾಜ್ಯದ ಜನತೆಯ ಪುಣ್ಯ ನೀವು ಅತೀ ಹೆಚ್ಚು ಅಂತರದ ಮತಗಳಿಂದ ವಿಜಯಿಯಾಗುತ್ತೀರಿ. ನಿಮಗೆ ದೇವರ ದಯೆಯೂ ಇದೆ. ಅಧಿಕಾರ ಇರಲಿ, ಇಲ್ಲದೇ ಇರಲಿ ನಮ್ಮಲ್ಲಿ ಜನಸೇವ ಮನೋಭಾವ ಅತಿ ಮುಖ್ಯವಾಗಿರಬೇಕು’ ಎಂದು ಹಿತನುಡಿದರು. ರೈ ಅವರನ್ನು ಅವರ ವಾಹನದ ತನಕ ಬೀಳ್ಕೊಟ್ಟು ಪೂಜಾರಿ ಅವರು ಶುಭ ಹಾರೈಸಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಟಾಸ್ ಅಲಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ