ದಸರಾ ರಜೆ ಮಾರ್ಪಾಡಿಗೆ ಸಿಎಂಗೆ ಸಚಿವ ರಮಾನಾಥ ರೈ ಮನವಿ
Team Udayavani, Sep 19, 2017, 6:50 AM IST
ಮಂಗಳೂರು: ಈ ಬಾರಿ ಶಾಲೆಗಳಿಗೆ ದಸರಾ ರಜೆ ಅ. 11ರಿಂದ 25ರ ವರೆಗೆ ಎಂದು ಸರಕಾರ ಈಗಾಗಲೇ ನಿಗದಿಗೊಳಿಸಿದೆ. ಆದರೆ ನವರಾತ್ರಿ,ದಸರಾ ಉತ್ಸವಗಳು ಸೆ. 21ರಿಂದ ಆರಂಭವಾಗಿ ಸೆ.30ರ ವರೆಗೆ ನಡೆಯುತ್ತವೆ. ಇದರಿಂದಾಗಿ ಅಕ್ಟೋಬರ್ನಲ್ಲಿ ರಜೆ ನೀಡಿದರೆ ಉದ್ದೇಶ ಸಾರ್ಥಕವಾಗುವುದಿಲ್ಲ. ಆದ್ದರಿಂದ ಉತ್ಸವಕ್ಕೆ ಅನುಕೂಲವಾಗುವಂತೆ ದಸರಾ ರಜೆ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ರಮಾನಾಥ ರೈ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾಕ್ಕೆ ರಜೆ ಮಾರ್ಪಡಿಸಿದಂತೆ ಕರಾವಳಿಗೂ ಅನ್ವಯಿಸಬೇಕು. ಸೆ. 21ರಿಂದ ಅ.5ರ ವರೆಗೆ ದಸರಾ ರಜೆ ನೀಡುವಂತೆ ದ.ಕ. ಜಿಲ್ಲಾಡಳಿತ ಕೂಡ ಸರಕಾರಕ್ಕೆ ಪ್ರಸ್ತಾವನೆಯನ್ನೂ ಕಳುಹಿಸಿದೆ. ಪರಿಶೀಲನೆಗೆ ಮುಖ್ಯಮಂತ್ರಿಯವರು ಶಿಕ್ಷಣ ಇಲಾಖೆಗೆ ಸೂಚಿಸಿದ್ದಾರೆ. ತಾವೂ ಈ ಬಗ್ಗೆ ಅಧಿಕಾರಿಗಳು, ಶಿಕ್ಷಣ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಬೇಡಿಕೆ ಈಡೇರುವ ಭರವಸೆ ಇದೆ ಎಂದು ಸಚಿವ ರೈ ಹೇಳಿದರು.
ಈಗಾಗಲೇ ಸೆ. 21ರಿಂದ ಕೆಲವು ಶಾಲೆಗಳಲ್ಲಿ ಅರ್ಧ ವಾರ್ಷಿಕ ಪರೀಕ್ಷೆ ನಿಗದಿಯಾಗಿದೆ. ಆದ್ದರಿಂದ ಇನ್ನೆರಡು ದಿನಗಳೊಳಗೆ ಸರಕಾರದ ಖಚಿತ ನಿರ್ಧಾರ ಹೊರಬೀಳಲಿದೆ ಎಂದು ಸಚಿವ ರಮಾನಾಥ ರೈ ಹೇಳಿದರು.ಮೇಯರ್ ಕವಿತಾ ಸನಿಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ