ಮಂಗಳೂರು ಪ್ರಕರಣ: ಹಿಂದೆ ಮುಂದಿರುವವರು ಬಹಿರಂಗ: ಸಚಿವ ವಿ. ಸುನಿಲ್‌ ಕುಮಾರ್‌


Team Udayavani, Nov 26, 2022, 7:25 AM IST

ಮಂಗಳೂರು ಪ್ರಕರಣ: ಹಿಂದೆ ಮುಂದಿರುವವರು ಬಹಿರಂಗ: ಸಚಿವ ವಿ. ಸುನಿಲ್‌ ಕುಮಾರ್‌

ಮಂಗಳೂರು: ಕುಕ್ಕರ್‌ ಪ್ರಕರಣವನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ, ರಾಷ್ಟ್ರೀಯ ತನಿಖಾ ದಳಕ್ಕೆ ಇದನ್ನು ಹಸ್ತಾಂತರಿಸುವ ಮೂಲಕ ಪ್ರಕರಣದ ಆಳ -ಅಗಲ ಅರ್ಥಮಾಡಿಕೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದ್ದಾರೆ.

ನಾಗುರಿಗೆ ಶುಕ್ರವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಪ್ರಕರಣದ ಹಿಂದೆ ಮುಂದೆ ಯಾರ್ಯಾರಿದ್ದಾರೆ ಎನ್ನುವುದು ಎನ್‌ಐಎ ತನಿಖೆಯಿಂದ ಬಹಿರಂಗಗೊಳ್ಳುವ ಸಂಪೂರ್ಣ ವಿಶ್ವಾಸವಿದೆ ಎಂದರು.

ಪಿಎಫ್‌ಐ ನಿಷೇಧದ ಬಳಿಕ ಈ ರೀತಿಯ ಚಟುವಟಿಕೆಗೆ ಕಡಿವಾಣ ಹಾಕುವ ಕ್ರಮ ಸರ್ಕಾರರಿಂದ ಆಗಿದೆ. ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು, ಶಿವಮೊಗ್ಗದ ಹರ್ಷ ಪ್ರಕರಣಗಳ ಮೂಲಕ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡುವ ಸಂಚನ್ನು ಹಾಕಿಕೊಂಡಿದ್ದು, ಅದನ್ನು ವಿಫಲಗೊಳಿಸುವ ಎಲ್ಲ ದಿಟ್ಟ ಕ್ರಮಗಳನ್ನು ಸರಕಾರ ಕೈಗೊಂಡಿದೆ, ಪಿಎಫ್‌ಐ ನಿಷೇಧ ಇದರ ಒಂದು ಭಾಗ. ಸಮಾಜಘಾತುಕ ಶಕ್ತಿಗಳ ಬಗ್ಗೆ ನಮ್ಮ ಸರಕಾರ ಮೃದು ಧೋರಣೆ ಹೊಂದುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಎನ್‌ಐಎ ಘಟಕ ಸ್ಥಾಪನೆ ಪೂರಕ ಸ್ಪಂದನೆ: ಮಂಗಳೂರಿನಲ್ಲಿ ಎನ್‌ಐಎ ಘಟಕ ಸ್ಥಾಪನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಂಗಳೂರಿನಲ್ಲಿ ಎನ್‌ಐಎ ಘಟಕ ಸ್ಥಾಪನೆಗೆ ನಾವು ಮನವಿ ಮಾಡಿದ್ದು, ಕೇಂದ್ರ ಇದಕ್ಕೆ ಪೂರಕ ಸ್ಪಂದನೆ ನೀಡಿದೆ, ಕೆಲವೊಂದು ನಿಯಮಾವಳಿ, ನಿಬಂಧನೆಗಳಿದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ ಎಂದರು.

ದುಷ್ಕರ್ಮಿಗಳು ದೇವಸ್ಥಾನಗಳನ್ನು ಟಾರ್ಗೆಟ್‌ ಮಾಡುವ ಯತ್ನ ವಿಫಲವಾಗಿದೆ. ಈ ರೀತಿಯ ಕೃತ್ಯದ ಹಿಂದೆ ದೊಡ್ಡ ಮಟ್ಟದ ಷಡ್ಯಂತ್ರವಿದೆ ಎನ್ನುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಇಂತಹ ಸಮಾಜಘಾತುಕ ಶಕ್ತಿಗಳನ್ನು ರಾಷ್ಟ್ರೀಯ ತನಿಖಾದಳ ಹಾಗೂ ನಮ್ಮ ಪೊಲೀಸರು ಮಟ್ಟಹಾಕುವ ವಿಶ್ವಾಸವಿದೆ ಎಂದರು.

ಚಿಕಿತ್ಸೆ ಪೂರ್ಣ ವೆಚ್ಚ
ಕುಕ್ಕರ್‌ ಪ್ರಕರಣದಲ್ಲಿ ಗಾಯಗೊಂಡಿರುವ ರಿಕ್ಷಾ ಚಾಲಕ ಪುರುಷೋತ್ತಮ ಅವರ ಚಿಕಿತ್ಸೆಯ ಪೂರ್ಣ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭ ಮೇಯರ್‌ ಜಯಾನಂದ ಅಂಚನ್‌, ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌., ಕಾರ್ಪೊರೇಟರ್‌ಗಳಾದ ಸಂದೀಪ್‌ ಗರೋಡಿ, ಸುಧೀರ್‌ ಶೆಟ್ಟಿ ಕಣ್ಣೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಪ್ರಭಾ ಮಾಲಿನಿ, ಮಂಗಳೂರು ನಗರ ದಕ್ಷಿಣ ಅಧ್ಯಕ್ಷ ವಿಜಯ ಕುಮಾರ್‌ ಶೆಟ್ಟಿ, ಮುಖಂಡರಾದ ಚಂದ್ರಶೇಖರ್‌ ಉಚ್ಚಿಲ್‌, ವಿಶ್ವಹಿಂದೂ ಪರಿಷತ್‌ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌, ಗುರುಚರಣ್‌ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

tdy-10

ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಆಡಳಿತ ಯಂತ್ರವಿನ್ನು ಚುನಾವಣ ಕಾರ್ಯದಲ್ಲಿ ವ್ಯಸ್ತ: ನಾಗರಿಕ ಸೇವೆಯಲ್ಲಿ ವ್ಯತ್ಯಯ ಸಂಭವ

ಆಡಳಿತ ಯಂತ್ರವಿನ್ನು ಚುನಾವಣ ಕಾರ್ಯದಲ್ಲಿ ವ್ಯಸ್ತ: ನಾಗರಿಕ ಸೇವೆಯಲ್ಲಿ ವ್ಯತ್ಯಯ ಸಂಭವ

ಕರಾವಳಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ನೀತಿ ಸಂಹಿತೆಯ ಬಿಸಿ; ಪೊಲೀಸ್‌ ಕಣ್ಗಾವಲು

ಕರಾವಳಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ನೀತಿ ಸಂಹಿತೆಯ ಬಿಸಿ; ಪೊಲೀಸ್‌ ಕಣ್ಗಾವಲು

ಕೆಲವೇ ದಿನಗಳಲ್ಲಿ ಅಭ್ಯರ್ಥಿ ಪಟ್ಟಿ ಪ್ರಕಟ: ನಳಿನ್‌

ಕೆಲವೇ ದಿನಗಳಲ್ಲಿ ಅಭ್ಯರ್ಥಿ ಪಟ್ಟಿ ಪ್ರಕಟ: ನಳಿನ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

crime (2)

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ