ಮಂಗಳೂರಿಗೆ ಬಂದಿದ್ದ 14 ವರ್ಷದ ಬಾಲಕಿ ನಾಪತ್ತೆ
Team Udayavani, Oct 19, 2022, 7:12 AM IST
ಮಂಗಳೂರು: ಮಂಗಳೂರಿಗೆ ಬಂದಿದ್ದ ಬೆಂಗಳೂರು ಮಹಾಲಕ್ಷ್ಮೀ ಲೇಔಟ್ ಭಾರ್ಗವಿ (14) ನಾಪತ್ತೆಯಾಗಿದ್ದಾಳೆ.
ಕಳೆದ ಸೋಮವಾರ ಈಕೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದು ಬಸ್ ಮೂಲಕ ಮುಂಜಾವ 3 ಗಂಟೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಳು.
ಅಲ್ಲಿಂದ ರಿಕ್ಷಾವೊಂದನ್ನು ಬಾಡಿಗೆಗೆ ಗೊತ್ತುಪಡಿಸಿ ಮುಕ್ಕ ಬೀಚ್, ಕದ್ರಿ ಪಾರ್ಕ್ ತಿರುಗಿದ್ದಾಳೆ.
ಅಲ್ಲಿಂದ ರಿಕ್ಷಾದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಚಿಕ್ಕಮ್ಮನ ಮನೆಗೆ ಹೋಗು ವುದಾಗಿ ರಿಕ್ಷಾ ಚಾಲಕನಲ್ಲಿ ಹೇಳಿರುವ ಮಾಹಿತಿ ಇದೆ. ಆದರೆ ಇದುವರೆಗೆ ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.