ನಾಪತ್ತೆಯಾಗಿದ್ದಾಕೆ ಮುಂಬಯಿಯಲ್ಲಿ  ಪತ್ತೆ; ಲವ್‌ ಜೆಹಾದ್‌ ಆರೋಪ


Team Udayavani, Jan 2, 2018, 11:10 AM IST

02-18.jpg

ಮಂಗಳೂರು: “ಲವ್‌ ಜೆಹಾದ್‌’ ಆರೋಪದ ಪ್ರಕರಣವೊಂದು ಮಂಗಳೂರಿನಲ್ಲಿ ಇದೀಗ ಬೆಳಕಿಗೆ ಬಂದಿದ್ದು, ಐದು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಕಾಲೇಜು ಓದುತ್ತಿದ್ದ ಯುವತಿಯನ್ನು ಮುಂಬಯಿ ನಗರದಲ್ಲಿ ಪತ್ತೆ ಮಾಡಿ ಮರಳಿ ಹೆತ್ತವರ ಮನೆಗೆ ಕರೆತರಲಾಗಿದೆ. ವಿಶೇಷ ಅಂದರೆ ಈ ಯುವತಿ ಹಿಂದೂ ಪರ ಸಂಘಟನೆಯೊಂದರ ಮುಖಂಡರ ಪುತ್ರಿಯಾಗಿದ್ದಾರೆ.

ನಗರದ ಎಸ್‌ಡಿಎಂ ಕಾನೂನು ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ರೇಷ್ಮಾ ವಿ.ಕೆ. ಇದೀಗ ಲವ್‌ ಜೆಹಾದ್‌ ಆರೋಪದಡಿ ಸಿಲುಕಿ ಕೊಂಡಿರುವ ಯುವತಿ. ಮೂಲತಃ ಕಾಸರಗೋಡಿ ನವರಾಗಿರುವ ರೇಷ್ಮಾ ಮಂಗಳೂರಿನ ಬೆಂದೂರ್‌ವೆಲ್‌ನ ಮನೆಯೊಂದರಲ್ಲಿ ವಾಸ್ತವ್ಯ ಹೂಡಿ ಕಾಲೇಜು ಶಿಕ್ಷಣ ಪಡೆಯುತ್ತಿದ್ದಳು. ಸಾಮಾಜಿಕ ಜಾಲ ತಾಣವಾದ ಫೇಸ್‌ಬುಕ್‌ನಲ್ಲಿ ಮೂರು ವರ್ಷಗಳ ಹಿಂದೆ ಈಕೆಗೆ ಮುಂಬಯಿ ಮಾಂಕುರ್ಡ್‌ ಎಂಬ ಊರಿನ  ಮಹಮದ್‌ ಇಕ್ಬಾಲ್‌ ಚೌಧುರಿ ಎಂಬಾತನ ಪರಿಚಯವಾಗಿತ್ತು. ಐದು ತಿಂಗಳ ಹಿಂದೆಯಷ್ಟೇ ರೇಷ್ಮಾ ಏಕಾಏಕಿ ಮನೆಯಿಂದ ನಾಪತ್ತೆಯಾಗಿದ್ದಳು. ರೇಷ್ಮಾ ನಾಪತ್ತೆಯಾಗಿರುವ ಬಗ್ಗೆ ಆಕೆ ಪೋಷಕರು ನಗರದ ಕದ್ರಿ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು. ಆದರೆ ಇಲ್ಲಿವರೆಗೆ ರೇಷ್ಮಾ ಬಗ್ಗೆ ಹೆತ್ತವರಿಗೆ ಯಾವುದೇ ಮಾಹಿತಿ ಲಭಿಸಿರಲಿಲ್ಲ. ಪೊಲೀಸರಿಂದಲೂ ಈ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಕೆಲವು ದಿನಗಳ ಹಿಂದೆಯಷ್ಟೇ ರೇಷ್ಮಾ ಮುಂಬಯಿ ಯಲ್ಲಿ ಇರುವುದು ಪೋಷಕರ ಗಮನಕ್ಕೆ ಬಂದಿದ್ದು, ಆ ಪ್ರಕಾರ ಆಕೆಯ ಹೆತ್ತವರು ಮತ್ತು ಸಂಬಂಧಿಕರು ಮುಂಬಯಿಗೆ ತೆರಳಿ ರೇಷ್ಮಾಳನ್ನು ಇದೀಗ ಮಂಗಳೂರಿಗೆ ಕರೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಲವ್‌ ಜೆಹಾದ್‌ ಆರೋಪ
ಇದೊಂದು ಲವ್‌ ಜೆಹಾದ್‌ ಪ್ರಕರಣವಾಗಿದ್ದು, ಸೂಕ್ತ ಕ್ರಮ ಜರಗಿಸ ಬೇಕು ಎಂದು ಬಜರಂಗ ದಳ ಪ್ರಾಂತ ಸಂಚಾ ಲಕ ಶರಣ್‌ ಪಂಪ್‌ವೆಲ್‌ ಆಗ್ರಹಿಸಿದ್ದಾರೆ. ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಹೆಣ್ಮಕ್ಕಳು ಲವ್‌ ಜೆಹಾದ್‌ಗೆ ಬಲಿಯಾಗಿ ನಾಪತ್ತೆಯಾಗುತ್ತಿರುವ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂಲಕ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ವತಿಯಿಂದ ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ  ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಲಾಗಿತ್ತು.

ಕಳೆದ ಕೆಲವು ವರ್ಷಗಳಿಂದ ಕರ್ನಾಟಕ ಮತ್ತು ಕೇರಳ ದಲ್ಲಿ ಹೆಣ್ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಇಂತಹ ಯುವತಿಯರ ಪೈಕಿ ಹಲವರು ಮುಸ್ಲಿಂ ಹುಡುಗರೊಂದಿಗೆ ತೆರಳಿ, ಇಸ್ಲಾಂಗೆ ಮತಾಂತರವಾಗುತ್ತಿರುವುದೂ ತಿಳಿದು ಬಂದಿದೆ. ಕೆಲವು ಹುಡುಗಿಯರು ನಿರಂತರ ಕಿರುಕುಳ ಅನುಭವಿಸುವುದರೊಂದಿಗೆ, ಅವರು ವಿವಾಹವಾದ ಯುವಕರಿಗೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಇರುವುದನ್ನು ಅರಿತು ಮರಳಿ ಮನೆಗೆ ಬಂದ ಉದಾಹರಣೆಗಳೂ ಇವೆ.

ಎನ್‌ಐಎ ಮುಖಾಂತರ ತನಿಖೆ ನಡೆಸಿ ಎಲ್ಲ ಪ್ರಕರಣಗಳನ್ನು ಪ್ರಕರಣಗಳನ್ನು ಭೇದಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿತ್ತು. ಹಿಂದೂ ಪರ ಸಂಘಟನೆಗಳು ಹೇಳುವ ಪ್ರಕಾರ, ರೇಷ್ಮಾ ನಾಪತ್ತೆ ಕೂಡ ಲವ್‌ ಜೆಹಾದ್‌ ಪ್ರಕರಣ ಆಗಿರುವ ಬಗ್ಗೆ ಅನುಮಾನ ಮೂಡಿದ್ದು, ಆ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿವೆ.

ಹೆತ್ತವರಿಗೆ ರೇಷ್ಮಾ ಅಫಿದವಿತ್‌
ಈಗ ರೇಷ್ಮಾ ತನ್ನ ಪೋಷಕರಿಗೆ ನೀಡಿರುವ ಅಫಿದವಿತ್‌ ಬಹಿರಂಗ ಗೊಂಡಿದ್ದು, ಅದರಲ್ಲಿ “ನಾನು ನನ್ನ ಹೆತ್ತವರ ಜತೆ ಮಂಗಳೂರಿನಲ್ಲಿ ವಾಸ್ತವ್ಯ ಮಾಡಲು ಇಷ್ಟ ಪಡುತ್ತೇನೆ. ಸ್ವ ಇಚ್ಛೆಯಿಂದ ಈ ನಿರ್ಧಾರಕ್ಕೆ ಬಂದಿ ದ್ದೇನೆ; ಯಾರದೇ ಒತ್ತಡಕ್ಕೆ ಮಣಿದು ಈ ತೀರ್ಮಾನ ಮಾಡಿಲ್ಲ. ಹೆತ್ತವರ ಜತೆ ಸಂತೋಷದಿಂದ ಇದ್ದೇನೆ’ ಎಂದು ಆಕೆ ಅದರಲ್ಲಿ ಉಲ್ಲೇ ಖೀಸಿ ದ್ದಾರೆ. ಇದರಲ್ಲಿ ರೇಷ್ಮಾ ಅವರದು ಎನ್ನಲಾದ ಸಹಿಯೂ ಇದೆ.

ಅಪಹರಣ – ಪ್ರಿಯಕರನ ದೂರು
ಈ ನಡುವೆ ಆಕೆಯ ಪ್ರಿಯಕರ ಎನ್ನಲಾದ ಮಹಮದ್‌ ಇಕ್ಬಾಲ್‌ ಚೌಧುರಿ ಮುಂಬಯಿಯ ಮಾಂಕುದ್‌ì ಪೊಲೀಸ್‌ ಠಾಣೆಯಲ್ಲಿ ರೇಷ್ಮಾ ಕಾಣೆಯಾಗಿರುವುದಾಗಿ ದೂರು ಕೊಟ್ಟಿದ್ದಾರೆ. “ನನ್ನ ಪತ್ನಿಯನ್ನು ಮಂಗಳೂರಿನಿಂದ ನಾಲ್ವರು ಬಂದು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದಾರೆ. ಕಳೆದ ಜುಲೈ ತಿಂಗಳಲ್ಲಿ ನಾನು ರೇಷ್ಮಾಳನ್ನು ಮದುವೆ ಯಾಗಿದ್ದೇನೆ’ ಎಂದು ಆತ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖೀಸಿದ್ದಾನೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಪೊಲೀಸರು ಆಕೆಯನ್ನು ಹುಡುಕಿಕೊಂಡು ಮಂಗಳೂರಿಗೆ ಆಗಮಿಸಿರುವುದಾಗಿ ವದಂತಿಗಳು ಹಬ್ಬಿವೆ. ಆದರೆ ಮಂಗಳೂರಿನ ಪೊಲೀಸರಿಗೆ ಈ ಕುರಿತು ಮುಂಬಯಿ ಪೊಲೀಸರಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.

ಕಮಿಷನರ್‌ ಹೇಳಿಕೆ
ರೇಷ್ಮಾ ನಾಪತ್ತೆಯಾದ ಬಗ್ಗೆ ಅವರ ಹೆತ್ತವರು ಸುಮಾರು 5 ತಿಂಗಳ ಹಿಂದೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮಹಾ ರಾಷ್ಟ್ರ ಪೊಲೀಸರು ಮಂಗಳೂರಿಗೆ ಬಂದಿರುವ ಬಗ್ಗೆ ನಮಗೆ ಮಾಹಿತಿ ಬಂದಿಲ್ಲ ಎಂದು ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌ ಸ್ಪಷ್ಟಪಡಿಸಿದ್ದಾರೆ. 

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.