ಬ್ರಿಟಿಷ್‌ ಕಾಲದ ಸಬ್‌ಜೈಲ್‌ ಆವರಣ ಗೋಡೆ ನೆಲಸಮ


Team Udayavani, Jul 18, 2018, 10:44 AM IST

18-july-2.jpg

ಪುತ್ತೂರು: ಶತಮಾನದ ಇತಿಹಾಸವಿದ್ದು, ಬ್ರಿಟಿಷ್‌ ಆಡಳಿತದ ಕಾಲದಲ್ಲಿ ನಿರ್ಮಾಣವಾಗಿದ್ದ ಪುತ್ತೂರಿನ ಹಳೆ ಸಬ್‌ಜೈಲ್‌ನ ಶಿಥಿಲಾವಸ್ಥೆಯಲ್ಲಿದ್ದ ಗೋಡೆಗಳನ್ನು ತಾಲೂಕು ಆಡಳಿತ ನೆಲಸಮ ಮಾಡಿದೆ. ಬ್ರಿಟಿಷ್‌ ಕಾಲದಲ್ಲಿ ಕೋರ್ಟ್‌ ಮತ್ತು ಸಬ್‌ಜೈಲ್‌ ಅಕ್ಕಪಕ್ಕದಲ್ಲೇ ಇದ್ದವು. ಅದಕ್ಕಾಗಿಯೇ ಬ್ರಿಟಿಷ್‌ ಸರಕಾರ ಸುಸಜ್ಜಿತ ಕಟ್ಟಡ ನಿರ್ಮಿಸಿತ್ತು. ಮುಂಭಾಗದಲ್ಲಿ ನ್ಯಾಯಾಲಯ ಮತ್ತು ಹಿಂಭಾಗದಲ್ಲಿ ಜೈಲು ಕಾರ್ಯಾಚರಿಸುತ್ತಿದ್ದವು. ಅನಂತರದಲ್ಲಿ ಕೋರ್ಟ್‌ ಸಮುಚ್ಚಯವನ್ನು ತಾಲೂಕು ಕಚೇರಿಯಾಗಿ ಪರಿವರ್ತಿಸಲಾಯಿತು. ಪುತ್ತೂರು ಸಬ್‌ಜೈಲ್‌ ಅನ್ನು ಸ್ಥಗಿತಗೊಳಿಸಿ ಮಂಗಳೂರಿಗೆ ವರ್ಗಾಯಿಸಿದ ಆನಂತರ ದಲ್ಲಿ ಈ ಜೈಲು ಅನಾಥವಾಯಿತು. ಕೆಲ ಕಾಲ ಈ ಜಾಗವನ್ನು ಖಜಾನೆಯಾಗಿ ಬಳಸಲಾಗಿತ್ತು. ಬಳಿಕ ನಿರ್ವಹಣೆ ಇಲ್ಲದ ಕಾರಣ ಜೀರ್ಣಾವಸ್ಥೆಗೆ ತಲುಪಿತ್ತು.

ಸಂಭಾವ್ಯ ಅನಾಹುತ ತಪ್ಪಿದೆ
ಪುತ್ತೂರು ಸಹಾಯಕ ಕಮಿಷನರ್‌ ಎಚ್‌.ಕೆ. ಕೃಷ್ಣಮೂರ್ತಿ ಅವರು ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಹಳೆ ಜೈಲಿನ ಆವರಣ ಗೋಡೆ ಕೆಡಹುವುದೇ ಉತ್ತಮ ಎಂದು ತೀರ್ಮಾನಿಸಿ ಕ್ರಮ ಕೈಗೊಂಡು ಸಂಭಾವ್ಯ ಅನಾಹುತ ತಪ್ಪಿಸಿದ್ದಾರೆ.

ಕಳೆದ ಮಳೆಗಾಲದಲ್ಲೇ ಕುಸಿದಿತ್ತು
ಸಬ್‌ಜೈಲ್‌ ಆವರಣದ ಉತ್ತರ ದಿಕ್ಕಿನ ಗೋಡೆಯ ಒಂದು ಪಾರ್ಶ್ವ ಕಳೆದ ಮಳೆಗಾಲ ದಲ್ಲಿಯೇ ಕುಸಿದಿತ್ತು. ಈ ಬಾರಿ ಪಶ್ಚಿಮ ದಿಕ್ಕಿನ ಗೋಡೆ ವಾಲಿತ್ತು. ಯಾವುದೇ ಕ್ಷಣದಲ್ಲಿ ಬೀಳುವ ಸಾಧ್ಯತೆ ಇತ್ತು. ಸುಮಾರು 100 ಮೀಟರ್‌ ಉದ್ದದ ಗೋಡೆ ಕೆಡವಲಾಗಿದ್ದು, ಪ್ರಸ್ತುತ ಸಬ್‌ಜೈಲ್‌ ಅವಶೇಷಗಳಲ್ಲಿ ಮಾತ್ರ ಕಾಣಿಸುತ್ತಿದೆ.

ಪಕ್ಕದಲ್ಲೇ ಇತ್ತು ವಿದ್ಯುತ್‌ ಕಂಬ
ಆವರಣ ಗೋಡೆಯ ಪಕ್ಕದಲ್ಲೇ ಸರಕಾರಿ ಆಸ್ಪತ್ರೆಯ ವಠಾರಕ್ಕೆ ಬೆಳಕು ಕೊಡುವ ಬೀದಿ ದೀಪಗಳಿದೆ. ಗೋಡೆ ಉರುಳಿದರೆ ಈ ವಿದ್ಯುತ್‌ ಕಂಬಗಳು ಕೂಡ ಉರುಳಿ ಬಿದ್ದು ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.

‘ಸುದಿನ’ ಎಚ್ಚರಿಸಿತ್ತು 
ಹಳೆಯದಾದ ಜೈಲಿನ ಆವರಣ ಗೋಡೆ ಬಿರುಕು ಬಿಟ್ಟು ವಾಲಿ ನಿಂತಿತ್ತು. ಇದರಿಂದ ಸರಕಾರಿ ಆಸ್ಪತ್ರೆ, ಸಾರ್ವಜನಿಕರಿಗೆ ಅಪಾಯ ಸಂಭವಿಸಬಹುದಾದ ಸಾಧ್ಯತೆಯ ಕುರಿತು ‘ಉದಯವಾಣಿ’ಯಲ್ಲಿ ಜೂ. 12ರಂದು ಸಚಿತ್ರ ವರದಿ ಪ್ರಕಟಿಸಿ ಎಚ್ಚರಿಸಲಾಗಿತ್ತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.