Missing Case; ಉಳ್ಳಾಲ: ನಾಪತ್ತೆಯಾಗಿರುವ ಸಂಶೋಧನ ವಿದ್ಯಾರ್ಥಿನಿ ಚೈತ್ರಾ ವಿದೇಶದಲ್ಲಿ

ಕತಾರ್‌ ತಲುಪಿರುವ ಸಾಧ್ಯತೆ, ಸ್ನೇಹಿತ ವಶಕ್ಕೆ ?

Team Udayavani, Mar 3, 2024, 7:10 AM IST

ನಾಪತ್ತೆಯಾಗಿರುವ ಸಂಶೋಧನ ವಿದ್ಯಾರ್ಥಿನಿ ಚೈತ್ರಾ ವಿದೇಶದಲ್ಲಿ

ಉಳ್ಳಾಲ: ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಎಚ್‌.ಡಿ ಸಂಶೋಧನ ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಚೈತ್ರಾ ವಿದೇಶಕ್ಕೆ ತೆರಳಿರುವುದು ಖಚಿತವಾಗಿದೆ. ಆಕೆಯ ಸ್ನೇಹಿತ ಶಾರೂಕ್‌ನನ್ನು ಮಧ್ಯಪ್ರದೇಶದಿಂದ ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

ಅತ್ತ ವಿದೇಶಕ್ಕೆ ತೆರಳಿರುವ ಚೈತ್ರಾ ತಾನು ಸ್ವ ಇಚ್ಛೆಯಿಂದ ತೆರಳಿದ್ದು, ಈ ಕುರಿತು ಸೋಮವಾರ ವಿದೇಶದಲ್ಲಿರುವ ಭಾರತದ ದೂತವಾಸದ ಮೂಲಕ ಮಂಗಳೂರು ಕಮಿಷನರ್‌ಗೆ ಮಾಹಿತಿ ನೀಡುವ ಸಾಧ್ಯತೆ ಇದೆ.

ಚೈತ್ರಾ ಫೆ. 17ರಂದು ಮಾಡೂರಿನ ಬಾಡಿಗೆ ಮನೆಯಿಂದ ಸ್ಕೂಟರ್‌ನಲ್ಲಿ ಹೊರಟು ಸುರತ್ಕಲ್‌ನಲ್ಲಿ ಸ್ಕೂಟರ್‌ ತ್ಯಜಿಸಿ ನಾಪತ್ತೆಯಾಗಿದ್ದಳು. ಆರಂಭದಲ್ಲಿ ಸಾಮಾನ್ಯ ನಾಪತ್ತೆ ಪ್ರಕರಣ ಎಂದು ಪರಿಗಣಿಸಿದ್ದ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಆದರೆ ಚೈತ್ರಾ ನಾಪತ್ತೆಯ ಹಿಂದೆ ಡ್ರಗ್‌ ಪೆಡ್ಲರ್‌ ಅನ್ಯಕೋಮಿನ ಯುವಕನ ಕೈವಾಡವಿದೆ ಎಂದು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುವ ಬೆದರಿಕೆ ಹಾಕಿದಾಗ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು.

ಆಕೆಯ ಮೊಬೈಲ್‌ ಲೊಕೇಶನ್‌ ಆಧಾರದಲ್ಲಿ ಬೆಂಗಳೂರು ಕಡೆ ತೆರಳಿರುವ ಮಾಹಿತಿಯನ್ನು ಕಲೆ ಹಾಕಿತ್ತು. ಈ ನಡುವೆ ಆಕೆ ಮೆಜೆಸ್ಟಿಕ್‌ನಿಂದ ಬಸ್‌ ಇಳಿದು ಹೋಗಿರುವ ಮಾಹಿತಿ ಸಿಸಿಟಿವಿಯಲ್ಲಿ ಪತ್ತೆ ಹಚ್ಚಿದ್ದ ಪೊಲೀಸರು ಬೆಂಗಳೂರು ವ್ಯಾಪ್ತಿಯಲ್ಲಿ ಆಕೆಯ ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದರು.ಉಳ್ಳಾಲ ಪೊಲೀಸರ ಒಂದು ತಂಡ ತನಿಖೆಯ ಮುಂದುವರಿದ ಭಾಗವಾಗಿ, ಗೋವಾ, ಮದ್ಯಪ್ರದೇಶದ ಮೂಲಕ ವಿದೇಶಕ್ಕೆ ತೆರಳಿರುವ ಮಾಹಿತಿ ಕಲೆ ಹಾಕಿ ಮಧ್ಯಪ್ರದೇಶದಲ್ಲಿ ಸ್ನೇಹಿತನೊಂದಿಗಿದ್ದ ಶಾರೂಕ್‌ನನ್ನು ವಶಕ್ಕೆ ತೆಗೆದುಕೊಂಡಿದ್ದರು.

ಶಾರೂಕ್‌ ಸ್ನೇಹಿತನ ಸಹಕಾರ
ನಾಪತ್ತೆಯಾಗಿರುವ ಚೈತ್ರಾಳೊಂದಿಗೆ ಸಂಪರ್ಕವಿದ್ದ ಪುತ್ತೂರು ಮೂಲದ ಶಾರೂಕ್‌ ಬೆಂಗಳೂರಿಗೆ ತಲುಪಿದ್ದ ಚೈತ್ರಾಳನ್ನು ಗೋವಾಕ್ಕೆ ಕರೆದುಕೊಂಡು ಹೋಗಿದ್ದು ಬಳಿಕ ಮಧ್ಯಪ್ರದೇಶದಲ್ಲಿ ಕಣ್ಣೂರು ಮೂಲದ ಶಾರೂಕ್‌ನ ಸ್ನೇಹಿತನೊಬ್ಬ ಚೈತ್ರಾ ಮತ್ತು ಶಾರೂಕ್‌ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದ. ಮದ್ಯಪ್ರದೇಶದಲ್ಲಿದ್ದುಕೊಂಡೇ ಶಾರೂಕ್‌ನ ಹತ್ತಿರದ ಸಂಬಂಧಿಯಾಗಿದ್ದ ಕತಾರ್‌ನಲ್ಲಿ ನೆಲೆಸಿರುವ ಯುವಕ ಚೈತ್ರಾಳಿಗೆ ವಿಸಿಟಿಂಗ್‌ ವೀಸಾ ಮತ್ತು ವಿಮಾನದ ಟಿಕೆಟ್‌ ಮಾಡಿದ್ದು, ಅಲ್ಲಿಂದ ದಿಲ್ಲಿ ಮೂಲಕ ಕತಾರ್‌ಗೆ ಚೈತ್ರಾಳನ್ನು ಕಳುಹಿಸಿ ಶಾರೂಕ್‌ ವಾಪಸ್‌ ಮಧ್ಯಪ್ರದೇಶದಲ್ಲಿರುವ ಸ್ನೇಹಿತನ ಮನೆಗೆ ಬಂದಿದ್ದ. ಚೈತ್ರಾ ಪ್ರಸ್ತುತ ಕತಾರ್‌ಗೆ ತಲಪಿರುವುದು ಬಹುತೇಕ ಖಚಿತವಾಗಿದ್ದು, ಅಲ್ಲಿಂದ ಪೊಲೀಸರಿಗೆ ನಾನು ಸ್ವ ಇಚ್ಛೆಯಿಂದ ತೆರಳಿದ್ದೇನೆ ಎಂದು ಮಾಹಿತಿ ನೀಡಿದ್ದಾಳೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಶನಿವಾರ ಮತ್ತು ರವಿವಾರ ರಜೆಯಾಗಿರುವುದರಿಂದ ಸೋಮವಾರ ಭಾರತದ ರಾಯಭಾರ ಕಚೇರಿಗೆ ತೆರಳಿ ಅಲ್ಲಿಂದ ಮಂಗಳೂರು ಪೊಲೀಸ್‌ ಕಮಿಷನರ್‌ಗೆ ತಾನು ಸ್ವ ಇಚ್ಛೆಯಿಂದ ತೆರಳಿರುವ ವಿಚಾರವನ್ನು ಲಿಖೀತವಾಗಿ ನೀಡುವ ಸಾಧ್ಯತೆ ಇದೆ.

ಶಾರೂಖ್‌ ವಿದೇಶಕ್ಕೆ ಹೋಗುವಂತಿಲ್ಲ
ಶಾರೂಕ್‌ ಅಪರಾಧ ಪ್ರಕರಣದಲ್ಲಿ ಬಂಧಿತನಾಗಿರುವ ಹಿನ್ನೆಲೆಯಲ್ಲಿ ವಿದೇಶಕ್ಕೆ ತೆರಳಲು ಅವಕಾಶವಿಲ್ಲ. ಈ ನಿಟ್ಟಿನಲ್ಲಿ ದಿಲ್ಲಿಯ ಏರ್‌ಪೋರ್ಟ್‌ಗೆ ಬಿಟ್ಟು ಬಂದ ಬಳಿಕ ಮಧ್ಯಪ್ರದೇಶದಲ್ಲಿದ್ದ ಸ್ನೇಹಿತ ಮನೆಗೆ ಮರಳಿದಾಗ ಉಳ್ಳಾಲ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಬಳಿಕ ಆತನನ್ನು ತನಿಖೆಗೆ ಒಳಪಡಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.