ಮಿತ್ತೂರು: ರೈಲ್ವೇ ಸೇತುವೆಯ ರಕ್ಷಣಾ ದ್ವಾರಕ್ಕೆ ಕಂಟೈನರ್‌ ಢಿಕ್ಕಿ


Team Udayavani, Feb 8, 2018, 8:15 AM IST

36.jpg

ವಿಟ್ಲ: ಮಾಣಿ-ಮೈಸೂರು ಹೆದ್ದಾರಿಯ ಇಡ್ಕಿದು ಗ್ರಾಮದ ಮಿತ್ತೂರು ರೈಲ್ವೇ ಮೇಲ್ಸೇತುವೆಯ ರಕ್ಷಣಾ ದ್ವಾರಕ್ಕೆ ಬೃಹತ್‌ ಗಾತ್ರದ ಕಂಟೈನರ್‌ ಲಾರಿಯೊಂದು ಬುಧವಾರ ಬೆಳಗ್ಗೆ ಢಿಕ್ಕಿ ಹೊಡೆದು ಹೆದ್ದಾರಿಗೆ ಅಡ್ಡ ನಿಂತ ಪರಿಣಾಮ ಸುಮಾರು ಎರಡು ತಾಸು ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಅಪಘಾತದಲ್ಲಿ ಲಾರಿ ಚಾಲಕ ಗಾಯಗೊಂಡಿದ್ದಾರೆ. ಅಪಘಾತಕ್ಕೀಡಾದ ಲಾರಿಯು ಕಾರುಗಳನ್ನು ತುಂಬಿ ರುವ ಕಂಟೈನರನ್ನು ಹೊತ್ತು ಮೈಸೂರಿನಿಂದ ಪುತ್ತೂರು – ಮಾಣಿ ಮೂಲಕ ಮಂಗಳೂರಿಗೆ ತೆರಳುತ್ತಿತ್ತು.

ಘಟನೆಯ ವಿವರ
ಮಿತ್ತೂರಿನ ರೈಲ್ವೇ ಸೇತುವೆಗಿಂತ ಮೊದಲು ಮತ್ತು ಸೇತುವೆಯ ಮುಂದೆ ಎರಡು ರಕ್ಷಣದ್ವಾರಗಳಿವೆ. ಮಿತಿಮೀರಿದ ಗಾತ್ರದ ವಾಹನಗಳನ್ನು ತಡೆಯುವ ಉದ್ದೇಶದಿಂದ ಇಲಾಖೆ ಈ ರಕ್ಷಣಾ ದ್ವಾರಗಳನ್ನು ಸ್ಥಾಪಿಸಿದೆ. ಮೊದಲನೇ ರಕ್ಷಣಾ ದ್ವಾರ ದಾಟಿದ ಕಂಟೈನರ್‌ ರೈಲ್ವೇ ಸೇತುವೆಯನ್ನೂ ದಾಟಿ ಮುಂದಿನ ರಕ್ಷಣಾ ದ್ವಾರದ ಬಲಭಾಗಕ್ಕೆ ಢಿಕ್ಕಿ ಹೊಡೆಯಿತು. ರಕ್ಷಣಾ ದ್ವಾರದ ಕಬ್ಬಿಣದ ಬೀಮ್‌ ಲಾರಿಯ ಮೇಲೆ ಉರುಳಿ ಬಳಿಕ ನೆಲಕ್ಕೆ ಕುಸಿದಿದೆ. ಲಾರಿಯ ಮುಂಭಾಗ ಹಾನಿಗೀಡಾಗಿದ್ದು, ಗಾಜು ಪುಡಿಯಾಗಿದೆ.

ಅಪಘಾತ ಸಂಭವಿಸಿದ ಬಳಿಕ ಚಾಲಕನು ಲಾರಿಯನ್ನು ಹಿಂದಕ್ಕೆ ಚಲಾಯಿಸಿದ್ದರಿಂದ ಅದು ನಿಯಂತ್ರಣ ತಪ್ಪಿ ಸೇತುವೆಯ ಅಡಿಭಾಗದಲ್ಲಿ ರಸ್ತೆಗೆ ಅಡ್ಡಲಾಗಿ ನಿಂತುಬಿಟ್ಟಿತು. ರೈಲ್ವೇ ಸೇತುವೆಗಾಗಲೀ ಸೇತುವೆಯ ಗೋಡೆಗಾಗಲೀ ಕಂಟೈನರ್‌ ತಾಗಿಲ್ಲ ಎನ್ನ ಲಾಗಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ರೈಲು ಸೇತುವೆಯೇ ಕುಸಿದಿದೆ ಎಂದು ಸುದ್ದಿ ಹಬ್ಬಿದ್ದ ರಿಂದ ಮಾಧ್ಯಮ ಪ್ರತಿನಿಧಿಗಳು ಸ್ಥಳಕ್ಕೆ ಧಾವಿಸಿ ಬಂದಿದ್ದರು.

ಪರ್ಯಾಯ ಮಾರ್ಗ
ವಿಟ್ಲ ಹಾಗೂ ಪುತ್ತೂರು ಪೊಲೀಸರು ಸ್ಥಳ ಕ್ಕಾಗಮಿಸಿ ಪರ್ಯಾಯ ರಸ್ತೆಗಳ ಮೂಲಕ ಸಂಚಾರ ಸುಗಮ ವಾಗಿ ಸುವ ಕಾರ್ಯವನ್ನು ಮಾಡಿದರು. ಉಪ್ಪಿ ನಂಗಡಿ ಯಿಂದ ಕ್ರೇನ್‌ ತರಿಸಿ ಲಾರಿಯನ್ನು ಹಾಗೂ ಕಬ್ಬಿಣದ ಬೀಮ್‌ ಅನ್ನು ಬದಿಗೆ ಸರಿಸಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ರಸ್ತೆ ತೆರವಾದ ಕೂಡಲೇ ವಾಹನಗಳು ನುಗ್ಗಲಾರಂಭಿ ಸಿದ್ದರಿಂದ ಮತ್ತೆ ಸ್ವಲ್ಪ ಕಾಲ ಸುಗಮ ಸಂಚಾರಕ್ಕೆ ತಡೆ ಯಾಯಿತು. ಸುಮಾರು ಎರಡು ತಾಸು ವಾಹನಗಳ ಸಂಚಾರಕ್ಕೆ ತಡೆಯಾಗಿತ್ತು.

ಕಂಟೈನರ್‌ ಎತ್ತರ ಹೆಚ್ಚಾಯಿತೇ ?
ಕಂಟೈನರ್‌ ಎತ್ತರ ಮಿತಿಗಿಂತ ಹೆಚ್ಚಿದ್ದ ಕಾರಣ ಅಪಘಾತ ಸಂಭವಿಸಿತು ಎಂದು ಹೇಳಲಾಗುತ್ತಿದ್ದರೂ ಮೊದಲಿನ ರಕ್ಷಣಾ ದ್ವಾರದ ಮೂಲಕ ಸುಗಮವಾಗಿ ಸಂಚರಿಸಿದೆ; ಸೇತುವೆಯನ್ನೂ ದಾಟಿದೆ. ಎರಡನೇ ರಕ್ಷಣಾ ದ್ವಾರಕ್ಕೆ ಢಿಕ್ಕಿ ಹೊಡೆಯಲು ಚಾಲಕನ ನಿದ್ದೆಯ ಮಂಪರು ಕಾರಣವಾಗಿರಬಹುದು ಅಥವಾ  ಈ ಹಿಂದೆ ಯಾವುದೋ ವಾಹನ ತಾಗಿ ದ್ವಾರ ವಾಲಿಕೊಂಡಿರುವುದೂ ಕಾರಣವಾಗಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ರೈಲು ಸಂಚಾರ ಅಬಾಧಿತ
ಕಂಟೈನರ್‌ ರಕ್ಷಣಾ ದ್ವಾರಕ್ಕೆ ಢಿಕ್ಕಿ ಹೊಡೆದ ಪರಿಣಾಮ ರೈಲು ಹಳಿಗೆ ಏನಾದರೂ ಹಾನಿಯಾಗಿರ ಬಹುದೇ ಎಂಬ ಸಂಶಯವನ್ನು ನಿವಾರಿಸಲು ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಲಾರಿ ಹಿಮ್ಮುಖ ಚಲಿಸುವಾಗ ಸೇತುವೆಯ ಗೋಡೆಗೆ ತಾಗಿದರೂ ಯಾವುದೇ ಹಾನಿ ಸಂಭವಿಸಿಲ್ಲ. ಬೆಳಗ್ಗೆ ಬೆಂಗಳೂರಿನಿಂದ ಬರುವ ಪ್ರಯಾಣಿಕ ರೈಲು ಮತ್ತು ಇತರ ಗೂಡ್ಸ್‌ ರೈಲುಗಳು ಎಂದಿನಂತೆಯೇ ಸಂಚರಿಸಿವೆ.

ಇಲಾಖೆಯ ನಿರ್ಲಕ್ಷ ಕಾರಣ ?
ರಕ್ಷಣಾ ದ್ವಾರವು ವಾಲಿಕೊಂಡಿದ್ದು ಬೀಳುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ರೈಲ್ವೇ ಇಲಾಖೆಗೆ ಈ ಹಿಂದೆ ದೂರು ನೀಡಿದ್ದರು. ಆದರೆ ಇಲಾಖೆಯ ನಿರ್ಲಕ್ಷ  ಇಂದಿನ ಘಟನೆಗೆ ಕಾರಣ ಎಂದು ನಾಗರಿಕರು ಆರೋಪಿಸಿದ್ದಾರೆ. ಲಾರಿಯ ಮಿತಿಮೀರಿದ ಎತ್ತರವೇ ಅಪಘಾತಕ್ಕೆ ಕಾರಣ; ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ರೈಲ್ವೇ ಪೊಲೀಸ್‌ ಅಧಿಕಾರಿ ಆರ್‌.ಜೆ. ಚೌಹಾಣ್‌ ತಿಳಿಸಿದ್ದಾರೆ.

ವಿಟ್ಲದಲ್ಲಿ ಸಂಚಾರ ಅಸ್ತವ್ಯಸ್ತ
ಶಿರಾಡಿ ಘಾಟಿಯ ರಸ್ತೆಯಲ್ಲಿ ದುರಸ್ತಿ ಕಾಮಗಾರಿ ನಿಮಿತ್ತ ಸಂಚಾರ ನಿಷೇಧಿಸಿರುವುದರಿಂದ ಮಾಣಿ- ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಆ ಕಾರಣಕ್ಕೆ ಮತ್ತು ಕಂಟೈನರ್‌ ಢಿಕ್ಕಿ ಹೊಡೆದ ಪರಿಣಾಮ ಬುಧವಾರ ಬೆಳಗ್ಗೆಯೇ ರಸ್ತೆ ಸಂಚಾರ ಅಸ್ತವ್ಯಸ್ತತೆ ಹೆಚ್ಚಾಯಿತು. ವಿಟ್ಲದಲ್ಲಿ ಒಮ್ಮೆಲೇ ಲಾರಿ, ಬಸ್‌ ಗಳ ಸಂಖ್ಯೆ ಹೆಚ್ಚಾಗಿ ಸಂಚಾರಕ್ಕೆ ಅಡಚಣೆ ಉಂಟಾಯಿತು.

ರಕ್ಷಣಾ ದ್ವಾರ ಕುಸಿತ; ಚಾಲಕನಿಗೆ ಗಾಯ 
ಹೆದ್ದಾರಿಗಡ್ಡ  ನಿಂತ ಕಂಟೈನರ್‌
2 ತಾಸು ಕಾಲ ಹೆದ್ದಾರಿ ಬಂದ್‌
ರೈಲ್ವೇ ಸೇತುವೆಗೆ ಅಪಾಯವಿಲ್ಲ

ಟಾಪ್ ನ್ಯೂಸ್

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

5

Riyan Parag ಯೂಟ್ಯೂಬ್‌ ಹಿಸ್ಟರಿ ಲೀಕ್:‌ ʼಸಾರಾ ಆಲಿ, ಅನನ್ಯಾ ಪಾಂಡೆ ಹಾಟ್‌ʼ ಎಂದು ಸರ್ಚ್

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದ ವೈದ್ಯರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು

4

Arrested: ಲಿವ್‌ ಇನ್‌ ಸಂಗಾತಿ ಆತ್ಮಹತ್ಯೆ; ಐಆರ್‌ಎಸ್‌ ಅಧಿಕಾರಿ ಬಂಧನ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Puttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Puttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ

Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

5

Riyan Parag ಯೂಟ್ಯೂಬ್‌ ಹಿಸ್ಟರಿ ಲೀಕ್:‌ ʼಸಾರಾ ಆಲಿ, ಅನನ್ಯಾ ಪಾಂಡೆ ಹಾಟ್‌ʼ ಎಂದು ಸರ್ಚ್

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.