ಮಹಿಳೆಗೆ ಅಪಘಾತ ;ಶಾಸಕ ಅಭಯಚಂದ್ರ ಜೈನ್ ದರ್ಪ, ವ್ಯಾಪಕ ಟೀಕೆ
Team Udayavani, Jul 22, 2017, 1:40 PM IST
ಮಂಗಳೂರು: ಬಜ್ಪೆಯ ಕಿನ್ನಿಪದವಿನಲ್ಲಿ ಮಾಜಿ ಸಚಿವ, ಶಾಸಕ ಅಭಯಚಂದ್ರ ಜೈನ್ ಅವರು ಪ್ರಯಾಣಿಸುತ್ತಿದ್ದ ಕಾರೊಂದು ಪಾದಚಾರಿ ಮಹಿಳೆಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆಶುಕ್ರವಾರ ಸಂಜೆ ನಡೆದಿದೆ.
ಗಾಯಗೊಂಡಿರುವ ಮಹಿಳೆ ಕಿನ್ನಿಪದವಿನ ಜೈನಾಬಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆನ್ನಿಗೆ ಗಂಭೀರ ಪ್ರಮಾಣದ ಗಾಯವಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ. ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಸ್ಪತ್ರೆಗೆ ಸೇರಿಸದೆ ದರ್ಪ ?
ಅಪಘಾತವಾದಬಳಿಕ ಮಾನವೀಯತೆ ಮೆರೆಯ ಬೇಕಿದ್ದ ಶಾಸಕ ಮತ್ತೆ ದರ್ಪ ಪ್ರದರ್ಶಿಸಿದ್ದು, ಅಪಘಾತಕ್ಕೀಡಾದ ಮಹಿಳೆ ನ್ಯಾಯ ಕೇಳಿದಾಗ ನಿನಗೆ ರಸ್ತೆ ಕಾಣವುದಿಲ್ಲವೇ? ಯಾಕೆ ಅಡ್ಡ ಬಂದಿ ಎಂದು ಹಾರಿಕೆಯ ಉತ್ತರ ನೀಡಿ ಆಕೆಯನ್ನು ತಳ್ಳಿದ್ದಾರೆ. ಈ ವೇಳೆ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದಾಗ ನಿನ್ನ ಅಪ್ಪನಲ್ಲಿ ದೂರು ಕೊಡು ನಾನು ಹೆದರುವುದಿಲ್ಲ ಎಂದಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಮಾಜಿ ಸಚಿವರ ಈ ನಡೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಹಿಂದೆಯೂ ಸಾರ್ವಜನಿಕವಾಗಿ ದರ್ಪ ತೋರಿ ಟೀಕೆಗೆ ಗುರಿಯಾಗಿದ್ದರು.
ಈ ಬಗ್ಗೆ ವಿಧಾನ ಸಭಾ ಸಭಾಧ್ಯಕ್ಷರಿಗೆ ಪೊಲೀಸ್ ವರದಿ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು