ಶಾಸಕ ಅಭಯಚಂದ್ರ ಕಾರು ಮಹಿಳೆಗೆ ಢಿಕ್ಕಿ: ದೂರು 


Team Udayavani, Jul 23, 2017, 8:55 AM IST

abhayachandra.jpg

ಬಜಪೆ: ಬಜಪೆ ಕಿನ್ನಿಪದವಿನ ಪೆಟ್ರೋಲ್‌ ಬಂಕ್‌ ಬಳಿ ಮಹಿಳೆಯೊಬ್ಬರಿಗೆ ಮೂಡಬಿದಿರೆ ಶಾಸಕ ಅಭಯಚಂದ್ರ ಅವರು ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಸಾವರಿಸಿಕೊಂಡು ಪ್ರಶ್ನಿಸಲು ಬಂದ ಮಹಿಳೆಯನ್ನು ಶಾಸಕರು ತಳ್ಳಿದ ಕಾರಣ ಆಕೆ ಮತ್ತೆ ಬಿದ್ದು ಪೆಟ್ಟಾಗಿದೆ ಎಂದು ಬಜಪೆ ಠಾಣೆಗೆ ಶನಿವಾರ ದೂರು ನೀಡಲಾಗಿದೆ.

ಬಜಪೆಯ ಜೈನಾಬಿ (48) ಗಾಯಾಳು ಮಹಿಳೆ. ಅವರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿ ದ್ದಾರೆ. ಶುಕ್ರವಾರ ಸಂಜೆ ಅಭಯ ಚಂದ್ರ ಮಂಗಳೂರಿನಿಂದ ಬಜಪೆ ಮಾರ್ಗವಾಗಿ ಮೂಡಬಿದಿರೆ ಕಡೆಗೆ ಬರುತ್ತಿದ್ದಾಗ ಬಜಪೆ ಕಿನ್ನಿಪದವಿನಲ್ಲಿ ಅಪಘಾತ ಸಂಭವಿಸಿದೆ.

ಬಜಪೆ ಪೊಲೀಸರು ಕಾರಿನ ಶಾಸಕರ ಚಾಲಕ  ಸುದರ್ಶನ್‌ ಕೆ. ಕಿತ್ತೂರು ಮತ್ತು ಶಾಸಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್‌ 279 (ಅತೀ ವೇಗ ಚಾಲನೆ), ಸೆಕ್ಷನ್‌ 337 (ಗಾಯ), ಸೆಕ್ಷನ್‌ 323 (ಮಹಿಳೆಯನ್ನು ತಳ್ಳಿದ) ಪ್ರಕರಣ ದಾಖಲಾಗಿದೆ. ಚಾಲಕನನ್ನು, ಕಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.ಶಾಸಕರ ಮೇಲೆ ಕ್ರಮ ಜರಗಿಸಲು ವಿಧಾನಸಭಾಧ್ಯಕ್ಷರಿಗೆ ವರದಿ ಸಲ್ಲಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು “ಉದಯವಾಣಿ’ ಪ್ರತಿನಿಧಿ ಶಾಸಕ ಅಭಯಚಂದ್ರ ಅವರನ್ನು  ಸಂಪರ್ಕಿಸಲು ಪ್ರಯತ್ನಿಸಿದಾಗ ಅವರು ಸಂಪರ್ಕಕ್ಕೆ ಲಭ್ಯರಾಗಿಲ್ಲ.

ಎದ್ದು ನಿಂತಾಕೆಯನ್ನು ತಳ್ಳಿದರು
ಕಾರು ತಾಗಿದಾಗ  ಮಹಿಳೆ ಆಯತಪ್ಪಿ ಬಿದ್ದರು; ತತ್‌ಕ್ಷಣ ಸಾವರಿಸಿಕೊಂಡು ಕಾರಿನ ಬಾಗಿಲ ಹಿಡಿಯನ್ನು ಹಿಡಿದು ಮೇಲೆದ್ದು, “ನೋಡಲಿಕ್ಕಿಲ್ಲವಾ ಸೀದಾ ಹೋಗುವುದಾ’ ಎಂದು ಶಾಸಕರನ್ನು ಪ್ರಶ್ನಿಸಿದರು ಎನ್ನಲಾಗಿದೆ. ಆಗ ಶಾಸಕರು ಮಹಿಳೆಯ ಕೈಯನ್ನು ಕಾರಿನ ಬಾಗಿಲ ಹಿಡಿಯಿಂದ ಬಿಡಿಸಿ, ತಳ್ಳಿದ್ದು, ಅವರು ಮತ್ತೆ ಕೆಳಗೆ ಬಿದ್ದಿದ್ದಾರೆ ಎಂದು ಜೈನಾಬಿಯ ಸಂಬಂಧಿಕರು ಆರೋಪಿಸಿದ್ದಾರೆ.

ಈ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ  ದೂರು ನೀಡುವುದಾಗಿ  ಹೇಳಿದಾಗ “ನೀನು ಯಾರಲ್ಲಿ ಬೇಕಾದರೆ ಹೇಳು’ ಎಂದು  ಸೌಜನ್ಯ ತೋರದೆ, ಅಮಾನವೀಯವಾಗಿ ವರ್ತಿಸಿರುವುದಾಗಿ ಮಹಿಳೆ ದೂರಿನಲ್ಲಿ  ತಿಳಿಸಿದ್ದಾರೆ. 

ಟಾಪ್ ನ್ಯೂಸ್

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.