94 ಸಿ ಕಡತ ಶೀಘ್ರ ವಿಲೇವಾರಿಗೆ ಶಾಸಕ ಬಂಗೇರ ಆದೇಶ 


Team Udayavani, Oct 25, 2017, 3:57 PM IST

25-Mng-13.jpg

ಬೆಳ್ತಂಗಡಿ: ಅರಣ್ಯ ಇಲಾಖೆಗೆ ಕಳುಹಿಸಿದ ಕಡತಗಳು ಕಂದಾಯ ಇಲಾಖೆಗೆ ಬರದ ಕಾರಣ ಅನೇಕರ 94ಸಿ ಕಡತಗಳು ವಿಲೇವಾರಿಯಾಗಿಲ್ಲ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಡತಗಳ ಮೇಲೆ ಬಡವರಿಗೆ ಅನುಕೂಲವಾಗುವ ಕಾನೂನು ಸೂಕ್ಷ್ಮಗಳಲ್ಲಿ ಕಡತ
ವಿಲೇ ಮಾಡುವಂತೆ ಶಾಸಕ, ಕೆ. ವಸಂತ ಬಂಗೇರ ಅಧಿಕಾರಿಗಳಿಗೆ ಆದೇಶಿಸಿದರು. ಅವರು ಮಂಗಳವಾರ ಇಲ್ಲಿನ ತಾ. ಪಂ. ಸಭಾಂಗಣದಲ್ಲಿ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಬಡವರಿಗೆ ತೊಂದರೆ ನೀಡದಿರಿ
ಯಾವುದೇ ಕಾರಣಕ್ಕೂ ಬಡವರಿಗೆ ತೊಂದರೆ ನೀಡದಿರಿ. ಅಧಿಕಾರ ಇದೆ ಎಂದು ದರ್ಪದಿಂದ ಅಹಂ ನಿಂದ ವರ್ತಿಸಬೇಡಿ ಎಂದು ತಾಕೀತು ಮಾಡಿದರು.

ನೆಡುತೋಪು ಅರಣ್ಯ
ನೆಡುತೋಪು ಅರಣ್ಯವನ್ನು ಅರಣ್ಯ ಇಲಾಖೆ ತನ್ನದೆಂದು ಹೇಳುತ್ತಿದೆ. ಇದು ಕಂದಾಯ ಇಲಾಖೆಯ ಜಾಗ. ಆದ್ದರಿಂದ ತತ್‌ಕ್ಷಣ ಮರಗಳ ವಿಲೇವಾರಿ ಮಾಡಿ ಕಂದಾಯ ಇಲಾಖೆಗೆ ಜಾಗ ಮರಳಿಸಿ ಎಂದು ಶಾಸಕರು ಹೇಳಿದರು.

ಹಾಗೆ ನೀಡಲು ಬರುವುದಿಲ್ಲ. ಮರಗಳನ್ನು ಕಡಿದರೆ ಮರಳಿ ನೆಡಬೇಕೆಂದು ನಿಯಮ ಇದೆ ಎಂದು ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ ಪ್ರತಿಕ್ರಿಯಿಸಿದರು. ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ ಅವರು ಕೂಡ ಈ ಕುರಿತು ಗಮನ ಸೆಳೆದರು.

ಹಿಂದೂ ಪತ್ರಿಕೆ: ಆರೋಪ
ನೆರಿಯ ಬಯಲು ಶಾಲೆಯಲ್ಲಿ ಸನಾತನ ಸಂಸ್ಥೆಯವರು ಮಕ್ಕಳಿಗೆ ಹಿಂದೂ ಧರ್ಮದ ಪ್ರಶ್ನೆ ಪತ್ರಿಕೆ ವಿತರಿಸಿ ಪರೀಕ್ಷೆ ಮಾಡಿ ಸರ್ವಧರ್ಮ ಸಮನ್ವಯ ವಾತಾವರಣ ಹಾಳು ಮಾಡುತ್ತಿದ್ದಾರೆ ಎಂದು ಜಿ.ಪಂ. ಶಿಕ್ಷಣ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಸಾಹುಲ್‌ ಹಮೀದ್‌ ಹೇಳಿದರು.

ಶಿಕ್ಷಣಾಧಿಕಾರಿ ಗುರುಪ್ರಸಾದ್‌ ಪ್ರತಿಕ್ರಿಯಿಸಿ ಈ ಬಗ್ಗೆ ನೋಟಿಸ್‌ ನೀಡಲಾಗಿದೆ. ಮುಖ್ಯೋಪಾಧ್ಯಾಯರ ಗಮನಕ್ಕೆ ಬರದೇ ಎಸ್‌ಡಿಎಂಸಿ ಸದಸ್ಯರು ಮಾಡಿದ ಕೆಲಸ ಇದಾಗಿದೆ. ಆ ಎಸ್‌ಡಿಎಂಸಿ ಸದಸ್ಯರನ್ನು ಸಮಿತಿಯಿಂದ ವಜಾ ಮಾಡಲಾಗಿದೆ ಎಂದರು.

ಶಾಸಕರು ಪ್ರತಿಕ್ರಿಯಿಸಿ ಯಾವುದೇ ಶಾಲಾ ವಠಾರದಲ್ಲಿ ಬೈಠಕ್‌, ಕವಾಯತು ಇತ್ಯಾದಿ ನಡೆಯಕೂಡದು. ನಡೆದರೆ ಅಂತಹ ಅವಕಾಶ ನೀಡಿದ ಮುಖ್ಯೋಪಾಧ್ಯಾಯರನ್ನು ಅಮಾನತು ಮಾಡಿ. ಅಂತಹ ಶಾಲಾಭಿವೃದ್ಧಿ ಸಮಿತಿ ಯನ್ನು ಬರ್ಖಾಸ್ತುಗೊಳಿಸಿ ಎಂದವರು ಆದೇಶಿಸಿದರು.

ಕುವೆಟ್ಟು ಗ್ರಾಮದಲ್ಲಿ ಶಾಲಾ ಆಟದ ಮೈದಾನದಲ್ಲಿ ಬೇಲಿ ಅಳವಡಿಸಿದ ಕುರಿತು ಜಿ.ಪಂ. ಸದಸ್ಯೆ ಮಮತಾ ಶೆಟ್ಟಿ ಹೇಳಿದರು. ಇದನ್ನು ಸೌಹಾರ್ದಯುತವಾಗಿ ಮುಗಿಸಬೇಕು ಎಂದು ಶಾಸಕರು ಹೇಳಿದರು.

ತಾಲೂಕು ಪಂಚಾಯತ್‌ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಸ್ಥಾಯೀ ಸಮಿತಿ ಅಧ್ಯಕ್ಷ ಸುಧೀರ್‌ ಸುವರ್ಣ, ಕಾರ್ಯ ನಿರ್ವಹಣಾಧಿಕಾರಿ ಬಸವರಾಜ್‌ ಅಯ್ಯಣ್ಣನವರ್‌, ತಹಶೀಲ್ದಾರ್‌ ಇಸ್ಮಾಯಿಲ್‌ ಮತ್ತಿತರರು ಉಪಸ್ಥಿತರಿದ್ದರು.

ಚಿರತೆ ಕಾಟ
ಕೊಕ್ಕಡ, ಮಚ್ಚಿನ ಪ್ರಾಂತ್ಯದಲ್ಲಿ ಚಿರತೆ ಕಾಟ ಇದ್ದು ಆ ಭಾಗದ ಶಾಲಾ ಮಕ್ಕಳು ಶಾಲೆಗೆ ಹೋಗಲು ಭಯಭೀತರಾಗಿ ಶಾಲೆಗೆ ಹೋಗುತ್ತಿಲ್ಲ ಎಂದು ಪ್ರಶ್ನೆ ಬಂದಾಗ ಅಲ್ಲಿಗೆ ಹೋಗಿ ಸ್ಥಳೀಯರಿಗೆ ಧೈರ್ಯ ನೀಡಲಾಗಿದೆ. ಚಿರತೆ ಬಂದರೆ ಇಲಾಖೆಯವರನ್ನು ಸಂಪರ್ಕಿಸುವಂತೆ ಮೊಬೈಲ್‌ ಸಂಖ್ಯೆ ನೀಡಲಾಗಿದೆ ಎಂದು ಇಲಾಖೆಯರು ಉತ್ತರಿಸಿದರು.

ಪಂಪ್‌ ಅಳವಡಿಸಿಲ್ಲ
ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿ ಮಂಜೂರಾಗಿ ಬೋರ್‌ವೆಲ್‌ ಕೊರೆದು ವಿದ್ಯುತ್‌ ಸಂಪರ್ಕ ದೊರೆತಿದ್ದು ಸ್ಕಾಂನವರು ಪಂಪ್‌ ಅಳವಡಿಸಿಲ್ಲ ಎಂದು ಕೊರಗಪ್ಪ ನಾಯ್ಕ ಹೇಳಿದರು. ಇದಕ್ಕೆ ಸ್ಪಷ್ಟನೆ ನೀಡಿದ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಶಿವಶಂಕರ್‌, ವಿದ್ಯುತ್‌ ಸಂಪರ್ಕ ನೀಡುವುದು ಮಾತ್ರ ಮೆಸ್ಕಾಂ ಕರ್ತವ್ಯ. ಪಂಪ್‌ ಅಳವಡಿಸಬೇಕಾದುದು ನಿಗಮ ಎಂದರು. ವಿದ್ಯುತ್‌ ಸಂಪರ್ಕ ಅಳವಡಿಸಿದ ಅನಂತರ ಬಿಲ್‌ ಕಳುಹಿಸಲೇಬೇಕಾಗುತ್ತದೆ. ಪಂಪ್‌ ಅಳವಡಿಸದೇ ಬಿಲ್‌ ಕಳುಹಿಸಿದ್ದರೆ ಅದನ್ನು ನಿಗಮ ಪಾವತಿಸುವಂತೆ ಮಾಡಬೇಕು ಎಂದು ಜಿ.ಪಂ. ಎಂಜಿನಿಯರಿಂಗ್‌ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಸಿ.ಆರ್‌.ನರೇಂದ್ರ ಹೇಳಿದರು.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.