ಶಾಸಕ ಭರತ್‌ ಶೆಟ್ಟಿ ದಿಢೀರ್‌ ಭೇಟಿ; ಪರಿಶೀಲನೆ


Team Udayavani, Jul 26, 2018, 2:55 AM IST

nemmadi-kendra-25-7.jpg

ಸುರತ್ಕಲ್‌ : 28 ಗ್ರಾಮಗಳ ಕೆಲಸಕ್ಕೆ ಒಂದು ಕಂಪ್ಯೂಟರ್‌, ಓರ್ವ ಆಪರೇಟರ್‌, ಆಗಾಗ ಕೈ ಕೊಡುವ ನೆಟ್‌ವರ್ಕ್‌ ಸಾಲುಗಟ್ಟಿ ನಿಂತ ಸಾರ್ವಜನಿಕರು. ಇದು ಬುಧವಾರ ಶಾಸಕ ಡಾ| ವೈ. ಭರತ್‌ ಶೆಟ್ಟಿ ಅವರು ನಾಡಕಚೇರಿಯ ನೆಮ್ಮದಿ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭ ಕಂಡು ಬಂದ ದೃಶ್ಯ. ಸಾರ್ವಜನಿಕರ ದೂರಿನ ಮೇರೆಗೆ ಭೇಟಿ ನೀಡಿದ ಶಾಸಕರು ಸಮಸ್ಯೆ ಕುರಿತಾಗಿ ಅಧಿಕಾರಿಗಳಲ್ಲಿ ಮಾಹಿತಿ ಪಡೆದರು. ಸಿಬಂದಿ ಕೊರತೆಯಿಂದ ಗ್ರಾಮಕರಣಿಕರೇ ಕೂತು ಸಾರ್ವಜನಿಕರಿಗೆ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಕೊಡಬೇಕಾದ ಸ್ಥಿತಿಯಿದೆ. ಇರುವ ಒಂದು ಕಂಪ್ಯೂಟರ್‌ನಲ್ಲೇ 28 ಗ್ರಾಮಗಳ ಜನರಿಗೆ ಸೇವೆ ನೀಡಬೇಕಾಗಿದೆ. ಆಗಾಗ ಅಂತರ್ಜಾಲ ಕೈ ಕೊಡುವುದರಿಂದ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಹಿಂದಕ್ಕೆ ಹೋಗುವ ಸ್ಥಿತಿ ಇದೆ ಎಂದು ಪ್ರಮಾಣ ಪತ್ರ ಪಡೆಯಲು ಬಂದ ಸಾರ್ವಜನಿಕರೊಬ್ಬರು ಶಾಸಕರಿಗೆ ದೂರಿದರು. ತತ್‌ ಕ್ಷಣ ಕಂದಾಯ ಅಧಿಕಾರಿ ನವೀನ್‌ ಜತೆ ಮಾತುಕತೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್‌ ಅವರಿಗೆ ಸೂಚಿಸಿದರು. ಇದೇ ಸಂದರ್ಭ ನಾಡ ಕಚೇರಿ ಸ್ಥಳಾಂತರವಾಗುವ ಕಟ್ಟಡವನ್ನು ವೀಕ್ಷಿಸಿದರು.

ಮುಂದುವರಿದ ಮಂಗಳೂರು ವನ್‌ ಸಿಬಂದಿ ಸಮಸ್ಯೆ
ಸುರತ್ಕಲ್‌ ಮಂಗಳೂರು ವನ್‌ ಕೇಂದ್ರದಲ್ಲಿ ಅವ್ಯವಸ್ಥೆ ಮುಂದುವರಿದಿದ್ದು ಸಿಬಂದಿಗೆ ಶೌಚಾಲಯ ವ್ಯವಸ್ಥೆಯಿಲ್ಲ. ಮಳೆಗಾಲದಲ್ಲಿ ಕಟ್ಟಡ ಸೋರುವ ಸ್ಥಿತಿಯಿದೆ. ವೇತನ ಬೇಡಿಕೆ ಮಂಡಿಸಿದ ಮಂಗಳೂರು ವನ್‌ ಸಿಬಂದಿ ಪೈಕಿ ಐವರನ್ನು ವಜಾ ಮಾಡಿದ್ದು ಸುರತ್ಕಲ್‌ ಮಹಿಳಾ ಸಿಬಂದಿಯೋರ್ವರಿಗೆ ಹಿಂಬಡ್ತಿ ನೀಡಲಾಗಿದೆ. ಈ ಬಗ್ಗೆ ಶಾಸಕರಲ್ಲಿ ದೂರಿಕೊಂಡ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು. ಕಾರ್ಮಿಕ ಅಧಿ ಕಾರಿಗೆ ದೂರವಾಣಿ ಕರೆ ಮಾಡಿ ಸುರತ್ಕಲ್‌ ಕಚೇರಿಗೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಶಾಸಕರು ಸೂಚಿಸಿದರು. ಈ ಸಂದರ್ಭ ಮಾಜಿ ಮೇಯರ್‌ ಗಣೇಶ್‌ ಹೊಸಬೆಟ್ಟು, ಕಾರ್ಪೊರೇಟರ್‌ಗಳಾದ ಗುಣಶೇಖರ ಶೆಟ್ಟಿ, ಸುಮಿತ್ರಾ ಕರಿಯಾ, ಬಿಜೆಪಿ ಮುಖಂಡರಾದ ವಸಂತ್‌ ಹೊಸಬೆಟ್ಟು, ಭರತ್‌ರಾಜ್‌ ಕೃಷ್ಣಾಪುರ, ಶಿವರಾಮ್‌ ಗುಡ್ಡೆಕೊಪ್ಲ, ಜಯಂತ್‌ ಸಾಲ್ಯಾನ್‌, ವಿಠ್ಠಲ ಸಾಲ್ಯಾನ್‌, ಉಮೇಶ್‌ ದೇವಾಡಿಗ ಮೊದಲಾದವರು  ಉಪಸ್ಥಿತರಿದ್ದರು.

ಸಮಸ್ಯೆಗಳಿಗೆ ಶೀಘ್ರ ಪರಿಹಾರ
ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಕಂಪ್ಯೂಟರ್‌, ಓರ್ವ ಆಪರೇಟರ್‌ ನೇಮಕಕ್ಕೆ ತಹಶೀಲ್ದಾರ್‌ಗೆ ಸೂಚಿಸಲಾಗಿದೆ. ಇನ್ನೂ ಮಾದರಿಯಾಗಿ ಇರಬೇಕಾದ ಸಂಸ್ಥೆ ಮಂಗಳೂರು ವನ್‌ ಸರಕಾರಿ ಅಧೀನದಲ್ಲಿರುವ ಹೊರಗುತ್ತಿಗೆ ಸಂಸ್ಥೆಯಾಗಿದ್ದು ಇಲ್ಲಿಯೇ ಸಿಬಂದಿಗೆ ಅನ್ಯಾಯವಾಗುತ್ತಿದೆ. ಕಡಿಮೆ ವೇತನ ನೀಡುತ್ತಿರುವ ಬಗ್ಗೆ ಸಂಬಂಧ ಪಟ್ಟ ಇಲಾಖೆ ಸಚಿವರಲ್ಲಿ ಮಾತನಾಡಿ ಸಿಬಂದಿ ಸಮಸ್ಯೆಗಳಿಗೆ ಗಮನಹರಿಸಲಿದ್ದೇನೆ. 
– ಡಾ| ವೈ. ಭರತ್‌ ಶೆಟ್ಟಿ, ಶಾಸಕರು

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.