ಮಂಗಳೂರು: ಕೆಪಿಟಿ ಬಳಿ ವಾಹನಗಳ ಸರಣಿ ಅಪಘಾತ… ಸಂಚಾರ ವ್ಯತ್ಯಯ
Team Udayavani, Feb 27, 2023, 6:40 AM IST
ಮಂಗಳೂರು: ನಗರದ ಕೆಪಿಟಿ ಜಂಕ್ಷನ್ ಬಳಿ ರವಿವಾರ ರಾತ್ರಿ 7 ಗಂಟೆಯ ಸುಮಾರಿಗೆ ಸರಣಿ ಅಪಘಾತ ಸಂಭವಿಸಿ ಓರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.
ಕಾರೊಂದು ಯು ಟರ್ನ್ ತೆಗೆದುಕೊಳ್ಳುವ ವೇಳೆ ಅದಕ್ಕೆ ಮೀನು ಸಾಗಾಟದ ಪಿಕಪ್ ವಾಹನ ಢಿಕ್ಕಿ ಹೊಡೆಯಿತಲ್ಲದೇ ಬಳಿಕ ಪಕ್ಕದ ವಿದ್ಯುತ್ ಕಂಬಕ್ಕೂ ಢಿಕ್ಕಿಯಾಯಿತು. ಅದೇ ಸಮಯ ಹಿಂದಿನಿಂದ ಬಂದ ಹಾಲಿನ ವಾಹನ ಪಿಕಪ್ ವಾಹನಕ್ಕೆ ಢಿಕ್ಕಿಯಾಯಿತು. ಹಾಲಿನ ವಾಹನದ ಚಾಲಕ ಗಾಯಗೊಂಡು ಸಿಲುಕಿಕೊಂಡಿದ್ದು ಅವರನ್ನು ಹರಸಾಹಸ ಪಟ್ಟು ಹೊರತೆಗೆಯ ಲಾಯಿತು. ಹಾಲಿನ ವಾಹನ ಮತ್ತು ಪಿಕಪ್ ಒಂದಕ್ಕೊಂದು ಸಿಲುಕಿಕೊಂಡಿದ್ದು ಕ್ರೇನ್ ಬಳಸಿ ಅವುಗಳನ್ನು ಬೇರ್ಪಡಿಸಲಾಯಿತು. ಮೂರು ವಾಹನಗಳಿಗೂ ಹಾನಿ ಯಾಗಿದೆ. ಸಂಚಾರ ಪೂರ್ವ ಠಾಣೆಯ ಪೊಲೀಸರು ಸ್ಥಳದಲ್ಲಿದ್ದು ಕಾರ್ಯಾಚರಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?