ಆರ್ಯಾಪು ಪ್ರಥಮ; ವೇಣೂರು ದ್ವಿತೀಯ


Team Udayavani, Aug 7, 2018, 10:06 AM IST

manrega.jpg

ವೇಣೂರು: ಈ ಸಾಲಿನ ಮಹಾತ್ಮಾ ಗಾಂಧಿ ರಾ. ಗ್ರಾ. ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ವೇಣೂರು ಗ್ರಾ. ಪಂ. ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ, ದ.ಕ. ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ಯೋಜನೆ ಮೂಲಕ ದೊಡ್ಡ ಮಟ್ಟದ ಕಾಮಗಾರಿ ಗಳನ್ನೇ ನಿರ್ವಹಿಸಿ ಸಂಪೂರ್ಣ ಸದ್ಬಳಕೆ ಮಾಡಿ ಕೊಂಡಿದೆ. ಹಿಂದೂ ರುದ್ರಭೂಮಿ, ಅಂಗನವಾಡಿ ಕಟ್ಟಡ, 10 ರಸ್ತೆಗಳಿಗೆ ಕಾಂಕ್ರೀಟ್‌, 5 ಮೋರಿ, ಕಿಂಡಿ ಅಣೆಕಟ್ಟು, 2 ನೆಡು ತೋಪು ಕಾಮಗಾರಿ, ತಡೆಗೋಡೆ, 4 ಸಾರ್ವಜನಿಕ ಕೊಳವೆ ಬಾವಿ ಹಾಗೂ ಬಾವಿಗಳಿಗೆ ಜಲ ಮರುಪೂರಣ, 29 ಸಾರ್ವಜನಿಕ ಹಾಗೂ ಖಾಸಗಿ ಬಾವಿ ರಚನೆ, 30 ದನದ ಹಟ್ಟಿ, 135 ವಸತಿ, 40 ಮಂದಿಯ ಜಮೀನಿನಲ್ಲಿ ಅಡಿಕೆ ಗಿಡ ನಾಟಿ, 20 ಕಡೆ ಕಾಳುಮೆಣಸು ಗಿಡ ನಾಟಿ ಹಾಗೂ 7 ಶೌಚಾಲಯ ನಿರ್ಮಾಣ ನಡೆಸಲಾಗಿದೆ. ಒಟ್ಟು 44,12,384 ರೂ. ವ್ಯಯಿಸಿ 18,696 ಮಾನವ ಕೆಲಸದ ದಿನಗಳನ್ನು ಸೃಜಿಸಲಾಗಿದೆ. 34,00,000 ರೂ. ಕಾಮಗಾರಿಗೆ ಸಾಮಗ್ರಿ ಪೂರೈಸಲಾಗಿದೆ. ಒಟ್ಟು 70,34,384 ರೂ. ಖರ್ಚು ಮಾಡಿ ಸಾಧನೆ ಮಾಡಿದೆ.

ಸಾರ್ವಜನಿಕ ಕಾಮಗಾರಿ
ಸಾರ್ವಜನಿಕ ಕೊಳವೆಬಾವಿ ಮರು ಪೂರಣ ಘಟಕ, ಕಿಂಡಿ ಅಣೆಕಟ್ಟು ತಡೆಗೋಡೆ ನಿರ್ಮಾಣ, ರಸ್ತೆ ಕಾಂಕ್ರೀಟು ಕೆಲಸ, ರುದ್ರಭೂಮಿ ಅಭಿವೃದ್ಧಿ, ಬಾವಿ ನಿರ್ಮಾಣ, ನೆಡುತೋಪು ರಚನೆ ಹಾಗೂ ಮೋರಿ ರಚನೆ ನಡೆಸಲಾಗಿದೆ.

ಖಾಸಗಿ ಕಾಮಗಾರಿ
ಖಾಸಗಿ ಬಾವಿ ರಚನೆ, ತೋಟ ಗಾರಿಕೆ ಅಭಿವೃದ್ಧಿ, ದನದ ಹಟ್ಟಿ ನಿರ್ಮಾಣ, ವಸತಿ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ, ಶೌಚಾಲಯ ನಿರ್ಮಾಣ ನಡೆಸಲಾಗಿದೆ.

ಆರ್ಯಾಪು ಗ್ರಾ.ಪಂ. ಪ್ರಥಮ
ಪುತ್ತೂರು: ಏಳು ವೆಂಟೆಡ್‌ ಡ್ಯಾಂ ನಿರ್ಮಾಣ ಮಾಡಿರುವ ಪುತ್ತೂರು ತಾ.ಪಂ.ನ ಆರ್ಯಾಪು ಗ್ರಾಮ ಪಂಚಾಯತ್‌ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಪ್ರಥಮ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
ಒಂದು ಡ್ಯಾಂಗೆ 5 ಲಕ್ಷ ರೂ.ಗಳಂತೆ ಒಟ್ಟು 35 ಲಕ್ಷ ರೂ.ಗಳನ್ನು ವೆಂಟೆಡ್‌ ಡ್ಯಾಂಗೆ ಬಳಸಿಕೊಳ್ಳಲಾಗಿದೆ. ವೆಂಟೆಡ್‌ ಡ್ಯಾಂ ಸೇರಿದಂತೆ ಶಾಲಾ ಆವರಣ ಗೋಡೆ, ಕಾಂಕ್ರೀಟ್‌ ರಸ್ತೆ, ಶಾಲಾ ಆವರಣದಲ್ಲಿ ಕೃಷಿ, ಬಾವಿ ತೋಡಿಸುವ ಕೆಲಸಗಳನ್ನು ಉದ್ಯೋಗ ಖಾತರಿಯಡಿ ಮಾಡಲಾಗಿದೆ.

ಬಾವಿ ತೋಡಿ 70 ಸಾವಿರ ರೂ. ಪಡೆಯಿರಿ
ತೆರೆದ ಬಾವಿಗಳನ್ನು ಪ್ರೋತ್ಸಾಹಿಸುವುದಕ್ಕಾಗಿ ಕುಡಿಯುವ ನೀರು ಯೋಜನೆ ಯಡಿ ಬಾವಿ ತೆಗೆಸಿದರೆ ಎನ್‌ಆರ್‌ಇಜಿ ಅಡಿ 70 ಸಾವಿರ ರೂ. ಅನುದಾನವನ್ನು ನೀಡಲಾಗುತ್ತದೆ. ಗುಡ್ಡ ಪ್ರದೇಶದಲ್ಲಿ ತೆರೆದ ಬಾವಿ ತೆಗೆಯಲು 1 ಲಕ್ಷ ರೂ.ವರೆಗೂ ಖರ್ಚು ಬರುತ್ತದೆ. ಅನುದಾನ ಪಡೆಯಲು ಸರಕಾರದ ನಿಯ ಮಾನು ಸಾರ ಬಾವಿ ನಿರ್ಮಿಸಬೇಕಾಗುತ್ತದೆ. ಇದರಿಂದ ಸ್ಥಳೀಯ ಕಾರ್ಮಿಕರಿಗೂ ಉದ್ಯೋಗ ದೊರಕಿದಂತಾಗುತ್ತದೆ.

ಜಂಕ್ಷನ್‌ಗಳ ಅಭಿವೃದ್ಧಿಗೂ ಒತ್ತು
ಗ್ರಾಮಸ್ಥರ ಸಹಕಾರದಲ್ಲಿ ಯೋಜನೆಯ ಸಂಪೂರ್ಣ ಸದ್ಬಳಕೆ ಮಾಡಿದ್ದು, ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿರುವುದು ವೇಣೂರಿಗೆ ಹೆಮ್ಮೆ. ಪಂ. ಅಧ್ಯಕ್ಷರು, ಸದಸ್ಯರು, ಪಿಡಿಒ ಹಾಗೂ ಸಿಬಂದಿಯ ಸಹಕಾರದಿಂದ ಇದು ಸಾಧ್ಯ ವಾಗಿದೆ. ಮುಂದಿನ ದಿನಗಳಲ್ಲಿ ಜಂಕ್ಷನ್‌ಗಳ ಅಭಿವೃದ್ಧಿಗೂ ಒತ್ತು ನೀಡುತ್ತೇವೆ.
ಅರುಣ್‌ ಕ್ರಾಸ್ತ, ಉಪಾಧ್ಯಕ್ಷ, ವೇಣೂರು ಗ್ರಾ.ಪಂ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.