ಸಾರಿಗೆ ವ್ಯವಸ್ಥೆ  ಸುಧಾರಣೆಗೆ ಮೊಬೈಲ್‌ ಆ್ಯಪ್‌


Team Udayavani, Dec 20, 2018, 10:51 AM IST

sarige-vyavaste.png

ಮಂಗಳೂರು: ನಗರದ ಸಮಗ್ರ ಸಾರಿಗೆ ವ್ಯವಸ್ಥೆ ಸುಧಾರಣೆ,  ಸುಗಮ ಸಂಚಾರ ನಿರ್ವಹಣೆಗೆ ಜಿಲ್ಲಾಡಳಿತದ ವತಿಯಿಂದ ಮೊಬೈಲ್‌ ಆ್ಯಪ್‌ನ್ನು 4 ತಿಂಗಳ ಒಳಗೆ ಜಾರಿಗೊಳಿಸುವುದಾಗಿ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಹೇಳಿದರು.

ಬುಧವಾರ ತಮ್ಮ ಕಚೇರಿಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಬಸ್‌ ಹಾಗೂ ಆಟೋ ರಿಕ್ಷಾಗಳ ನಿಯಮ ಬಾಹಿರ ಸಂಚಾರಗಳ ಬಗ್ಗೆ, ಬಸ್‌ನ ಚಾಲಕ, ನಿರ್ವಾಹಕರ ವರ್ತನೆಯ ಬಗ್ಗೆ, ರೂಟ್‌ ತಪ್ಪಿಸಿ ಸಂಚರಿಸುವ ಬಸ್‌ಗಳ ಬಗ್ಗೆ, ಟಿಕೆಟ್‌ ನೀಡದಿರುವ ಬಗ್ಗೆ ನಾಗರಿಕರು ಆ್ಯಪ್‌ ಮೂಲಕವೇ ದೂರು ನೀಡಲು ಅವಕಾಶ ಕಲ್ಪಿಸಲಾಗುವುದು. ಇದರ ಮೇಲೆ ಜಿಲ್ಲಾಡಳಿತ ಮತ್ತು ಆರ್‌ಟಿಒ ನಿಗಾ ವಹಿಸಲಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ರೇಟಿಂಗ್‌ ಸೌಲಭ್ಯ
ಖಾಸಗಿ ಬಸ್‌ಗಳ ಸಂಚಾರ ನಿಯಮ ಉಲ್ಲಂಘನೆಯಾದರೆ ರೇಟಿಂಗ್‌ ನೀಡಲು ಕೂಡ ಅವಕಾಶ ಕಲ್ಪಿಸಲಾಗುವುದು. ಈ ಮೂಲಕ ಬಸ್‌ಗಳ ಲೋಪವನ್ನು ಸರಿಪಡಿಸಲು ಹಾಗೂ ಗುಣಮಟ್ಟದ ಬಸ್‌ ಸೇವೆಯನ್ನು ಪ್ರೋತ್ಸಾಹಿಸಲು ಕೂಡ ಅವಕಾಶ ನೀಡಲಾಗುವುದು. ಸ್ಮಾರ್ಟ್‌ಸಿಟಿಗೆ ಪೂರಕವಾಗಿ ಆ್ಯಪ್‌ ಮೂಲಕ ಸಂಚಾರ ಸುಧಾರಣೆ ಹೊಸ ಪ್ರಯತ್ನ ನಡೆಯಲಿದೆ ಎಂದರು.

ಬಸ್‌ ಮಾಲಕರ ಸಂಘದ ರಾಜವರ್ಮ ಬಲ್ಲಾಳ್‌ ಹಾಗೂ ದಿಲ್‌ರಾಜ್‌ ಆಳ್ವ ಮಾತನಾಡಿ, ಖಾಸಗಿ ಬಸ್‌ಗಳು ಜಿಪಿಎಸ್‌ ಹಾಗೂ ಸ್ಮಾರ್ಟ್‌ಕಾರ್ಡ್‌ ಅಳವಡಿಕೆಗೆ ಮುಂದಾಗಿವೆ. ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವ ದಿಶೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ನಗರದಲ್ಲಿ ಗ್ರಾಮಾಂತರ ರಿಕ್ಷಾ!
ಗ್ರಾಮಾಂತರ ಪರವಾನಿಗೆಯ ರಿಕ್ಷಾಗಳ ನಗರ ಪ್ರವೇಶಕ್ಕೆ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಬೇಕು. ಹಳೆ ಪರವಾನಿಗೆ ವರ್ಗಾಯಿಸಿದ ಬಳಿಕ ಮತ್ತೆ ಆಟೋ ಪರವಾನಿಗೆ ನೀಡಬಾರದು. ಪ್ರಸ್ತುತ ನೂರಾರು ಗ್ರಾಮೀಣ ಪರವಾನಿಗೆ ಆಟೋಗಳು ನಗರದಲ್ಲಿ ಅನಧಿಕೃತವಾಗಿ ಓಡಾಡುತ್ತಿವೆ. ಪರವಾನಿಗೆ ನೀಡುವಲ್ಲಿ ಅವ್ಯವಹಾರ ನಡೆದಿರುವ ಶಂಕೆ ಇದೆ ಎಂದು ಆಟೋ ಚಾಲಕರು ಆರೋಪಿಸಿದರು. ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.

ಪಿಲಿಕುಳದಲ್ಲಿ ಎಲೆಕ್ಟ್ರಿಕ್‌ ವಾಹನ
ಪಿಲಿಕುಳ ನಿಸರ್ಗಧಾಮಕ್ಕೆ ಇನ್ನು ಮುಂದೆ ನಗರ ಸಾರಿಗೆ ಬಸ್‌ಗಳಿಗೆ ಪ್ರವೇಶ ಇರುವುದಿಲ್ಲ. ಸಿಟಿ ಬಸ್‌ಗಳು ಪಿಲಿಕುಳ ಪ್ರವೇಶ ದ್ವಾರದವರೆಗೆ ಮಾತ್ರ ಸಂಚರಿಸಬಹುದು. ಅಲ್ಲಿಂದ ಪಿಲಿಕುಳದ ಒಳಭಾಗಕ್ಕೆ 14 ಎಲೆಕ್ಟ್ರಿಕಲ್‌ ವಾಹನಗಳ ಸೌಲಭ್ಯ ಒದಗಿಸಲಾಗಿದೆ. ಆ ವಾಹನಗಳಲ್ಲಿ ಪಿಲಿಕುಳ ಪ್ರದಕ್ಷಿಣೆಗೆ ಅವಕಾಶ ಇದೆ. ಖಾಸಗಿ ವಾಹನಗಳ ಪ್ರವೇಶಕ್ಕೆ ಅಡ್ಡಿ ಇಲ್ಲ ಎಂದರು.

ಅಪರ ಜಿಲ್ಲಾಧಿಕಾರಿ ಕುಮಾರ್‌, ಪೊಲೀಸ್‌ ವರಿಷ್ಠಾಧಿಕಾರಿ ಡಾ| ರವಿಕಾಂತೇ ಗೌಡ, ಡಿಸಿಪಿ ಉಮಾ ಪ್ರಶಾಂತ್‌, ಆರ್‌ಟಿಒ ಜಾನ್‌ ಮಿಸ್ಕಿತ್‌, ಮನಪಾ ಆಯುಕ್ತ ಮೊಹಮ್ಮದ್‌ ನಝೀರ್‌ ಉಪಸ್ಥಿತರಿದ್ದರು.

ಸ್ಮಾರ್ಟ್‌ಸಿಟಿ; ಬಸ್‌ಗಳಿಗೆಲ್ಲ ಏಕಬಣ್ಣ !
ಮಂಗಳೂರು “ಸ್ಮಾರ್ಟ್‌ಸಿಟಿ’ಯಾಗಿ ಘೋಷಣೆಯಾದ ಹಿನ್ನೆಲೆಯಲ್ಲಿ ಬಸ್‌ಗಳಿಗೆ ಏಕರೂಪದ ಬಣ್ಣ, ಬಣ್ಣದ ಪಟ್ಟಿ ಅಳವಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಬಸ್‌ಗಳಿಗೆ ನಸು ನೀಲಿ ಬಣ್ಣ, ಕವಚದ ಸುತ್ತ 5 ಸೆಂ.ಮೀ. ಅಗಲದ ಮೂರು ಬಿಳಿ ಪಟ್ಟಿ ಬಳಿಯಲು ಚಿಂತಿಸಲಾಗಿದೆ. ಗ್ರಾಮಾಂತರ ಬಸ್‌ಗಳು ನಸು ಬೂದು ಬಣ್ಣ, ಕವಚದ ಸುತ್ತ ಮಧ್ಯಭಾಗದಲ್ಲಿ 5 ಸೆಂ.ಮೀ. ಅಗಲದ 3 ಬಿಳಿಪಟ್ಟಿಗಳು ಹಾಗೂ ಇತರ ಮಜಲು ವಾಹನಗಳು ನಸು ಗುಲಾಬಿ ಬಣ್ಣ, ಕವಚದ ಸುತ್ತ ಮಧ್ಯಭಾಗದಲ್ಲಿ ಬಿಳಿಪಟ್ಟಿ ಬಳಿಯುವ ಬಗ್ಗೆ ಯೋಚಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು 
ಜಿಲ್ಲಾಧಿಕಾರಿ ತಿಳಿಸಿದರು.

ಆಟೋ, ಬಸ್‌ ದರ ಏರಿಕೆ: ಮನವಿ
ರಿಕ್ಷಾ ದರವನ್ನು ಪರಿಷ್ಕರಿಸದೆ ಮೂರು ವರ್ಷಗಳು ಕಳೆದಿವೆ. ಕನಿಷ್ಠ 5 ರೂ.ಗಳಷ್ಟು ದರ ಏರಿಕೆ ಮಾಡುವಂತೆ ಆಟೋರಿಕ್ಷಾ ಸಂಘಟನೆಗಳು ಸಾರಿಗೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದರು. ಈ ಬಗ್ಗೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿ, ರಿಕ್ಷಾ ದರ ಪರಿಷ್ಕರಣೆಗೆ ಸಂಬಂಧಿಸಿ ಆರ್‌ಟಿಒ ನೇತೃತ್ವದಲ್ಲಿ ಉಪ ಸಮಿತಿ ರಚಿಸಲಾಗುವುದು. ಈ ಸಮಿತಿ 3 ವಾರದೊಳಗೆ ವರದಿ ಸಲ್ಲಿಸಲಿದ್ದು, ಮುಂದೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಖಾಸಗಿ ಬಸ್‌ಗಳ ಟಿಕೆಟ್‌ ದರ ಪರಿಷ್ಕರಿಸುವಂತೆ ಬಸ್‌ ಮಾಲಕರು ಪ್ರಾಧಿಕಾರವನ್ನು ಒತ್ತಾಯಿಸಿದರು. ಆದರೆ ಬಸ್‌ ಪ್ರಯಾಣ ದರ ಪರಿಷ್ಕರಣೆ ವಿಚಾರ ಹೈಕೋರ್ಟ್‌ನಲ್ಲಿ ಇರುವುದರಿಂದ ಇಲ್ಲಿ ಪ್ರಸ್ತಾವಿಸುವುದು ಸರಿಯಲ್ಲ. ಸದ್ಯ ಆರ್‌ಟಿಎ ಕೂಡ ಏನೂ ಮಾಡುವಂತಿಲ್ಲ ಎಂದರು. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.