ಅಸ್ವಸ್ಥ ಕಾರ್ಮಿಕನ ಜೀವ ಉಳಿಸಿದ ಆ್ಯಂಬುಲೆನ್ಸ್ ಚಾಲಕ :41ಗಂಟೆಗಳಲ್ಲಿ 2,700ಕಿ.ಮೀ. ಪ್ರಯಾಣ
Team Udayavani, Sep 17, 2022, 8:32 AM IST
ಮೂಡುಬಿದಿರೆ: ಅಡಿಕೆ ಗೋದಾಮಿನ ಮಾಡಿನಿಂದ ಬಿದ್ದು ಕೋಮಾದಲ್ಲಿದ್ದ ಕಾರ್ಮಿಕನನ್ನು ಆ್ಯಂಬುಲೆನ್ಸ್ನಲ್ಲಿ ಆಮ್ಲಜನಕದ ಜಾಡಿ ಇರಿಸಿಕೊಂಡು ಸುಮಾರು 2,700 ಕಿ.ಮೀ. ದೂರದಲ್ಲಿರುವ ಉತ್ತರ ಪ್ರದೇಶದ ಮೊರಾದಾಬಾದ್ಗೆ ಕೇವಲ 41 ಗಂಟೆಗಳಲ್ಲಿ ಕರೆದೊಯ್ದ “ಐರಾವತ’ ಆ್ಯಂಬುಲೆನ್ಸ್ನ ಚಾಲಕನ ಸಾಹಸಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಉತ್ತರ ಪ್ರದೇಶದ ಕಾರ್ಮಿಕ ಮಹಾಂದಿ ಹಸ್ಸನ್ ಮೂಡುಬಿದಿರೆ ಮಾಸ್ತಿಕಟ್ಟೆಯಲ್ಲಿ ಅಡಿಕೆ ದಾಸ್ತಾನು ಕೇಂದ್ರದಲ್ಲಿ ಕಾರ್ಮಿಕ. ಕೆಲಸದ ಸಂದರ್ಭ ಆಕಸ್ಮಾತ್ ಕೆಳಗೆ ಬಿದ್ದು ಆಸ್ಪತ್ರೆ ಸೇರಿ ಕೋಮಾಕ್ಕೆ ಜಾರಿದ. ಒಡನಾಡಿಗಳ ಸಲಹೆಯ ಮೇರೆಗೆ ಆತನನ್ನು ಸ್ವಂತ ಊರಿಗೆ ಕಳುಹಿಸಲು ಯಜಮಾನರು ವಿಮಾನದ ಟಿಕೆಟ್ ತೆಗೆಸಿಕೊಟ್ಟರು. ವೈದ್ಯರಿಲ್ಲದೆ, ದಾದಿಯರಿಲ್ಲದೆ ರೋಗಿಯನ್ನು ಒಯ್ಯಲಾಗದು ಎಂದು ವಿಮಾನ ಯಾನ ಸಂಸ್ಥೆ ನಿರಾಕರಿಸಿದ್ದರಿಂದ “ಐರಾವತ’ ಆ್ಯಂಬುಲೆನ್ಸ್ ಮಾಲಕ, ಮೂಡುಬಿದಿರೆಯ ಅನಿಲ್ ರೂಬನ್ ಮೆಂಡೋನ್ಸಾ ಅವರಲ್ಲಿ ಕೇಳಿ ಕೊಳ್ಳಲಾಯಿತು.
ವೈದ್ಯರಿಲ್ಲ. ದಾದಿಯೂ ಇಲ್ಲ. ರೋಗಿಯ ಕಡೆಯವರ ಹೊಣೆಗಾರಿಕೆಯಲ್ಲಿ ಆಸ್ಪತ್ರೆಯವರು ನೀಡಿದ ಬಿಡುಗಡೆ ಪತ್ರ, ಆಮ್ಲಜನಕದ ಜಾಡಿ, ಪೊಲೀಸ್ ಠಾಣೆಯಿಂದ ಪಡೆದ ಪತ್ರ ಜತೆಗಿರಿಸಿಕೊಂಡ ಅನಿಲ್ ಮೆಂಡೋನ್ಸಾ ಅವರು ಅಶ್ವತ್ಥ್ ಎಂಬ ಇನ್ನೋರ್ವ ಚಾಲಕನನ್ನು ಕರೆದುಕೊಂಡು ಸೆ. 10ರ ಸಂಜೆ ಮೂಡುಬಿದಿರೆಯಿಂದ ಹೊರಟರು.
ಇದನ್ನೂ ಓದಿ : ಒಡಿಶಾ : ಬಸ್ಸಿಗೆ ಟ್ರಕ್ ಢಿಕ್ಕಿ ಹೊಡೆದು 6 ಮಂದಿ ಕಾರ್ಮಿಕರು ಸಾವು, 20ಕ್ಕೂ ಹೆಚ್ಚು ಗಾಯ
“ಯೂ ಆರ್ ಗ್ರೇಟ್’
ಡೀಸೆಲ್ ತುಂಬಿಸುವಲ್ಲಿ ಹೊರತು ಪಡಿಸಿ ಎಲ್ಲೂ ವಾಹನ ನಿಲ್ಲಲಿಲ್ಲ. ಹಸ್ಸನ್ನ ಗೆಳೆಯರಲ್ಲಿ ಓರ್ವ ವಾಹನ ಚಾಲನೆ ಬಲ್ಲವನಾಗಿದ್ದರಿಂದಲೂ ಅನುಕೂಲವಾಯಿತು. ವಾಹನ ಹೊಸದಿಲ್ಲಿ ತಲುಪುವಾಗ ಇನ್ನೂ 160 ಕಿ.ಮೀ. ದೂರದ ಮೊರಾದಾಬಾದ್ಗೆ ಹೋಗಬೇಕಾಗಿದೆ ಎಂದು ಹಸ್ಸನ್ ಒಡನಾಡಿಗಳು ತಿಳಿಸಿದರು. ಮೊರಾದಾಬಾದ್ನ ಶ್ರೇಯಾ ನ್ಯೂರೋ ಕೇಂದ್ರ ತಲುಪುವಾಗ ಸೆ.12ರ ಬೆಳಗ್ಗೆ 10.30. ಆ್ಯಂಬುಲೆನ್ಸ್ ನಲ್ಲಿ ವೈದ್ಯರಾಗಲೀ ದಾದಿಯರಾಗಲೀ ಇಲ್ಲದೆಯೇ ಬಂದಿರುವುದನ್ನು ನೋಡಿದ ಅಲ್ಲಿನ ನರರೋಗ ತಜ್ಞ ಡಾ| ಅಜಯ್ ಜೈನ್, “ಯೂ ಅರ್ ಗ್ರೇಟ್’ ಎಂದು ಉದ್ಗರಿಸಿದರಂತೆ.
ಅನಿಲ್ ಮೆಂಡೋನ್ಸಾ ಗುರುವಾರ ಮೂಡುಬಿದಿರೆಗೆ ವಾಪಸಾಗಿದ್ದಾರೆ. ಪ್ರಯಾಣದ ಎಲ್ಲ ವೆಚ್ಚವನ್ನೂ ಹಸ್ಸನ್ ಯಜಮಾನರು ನೋಡಿಕೊಂಡಿದ್ದಾರೆ. ಅತ್ತ ಹಸ್ಸನ್ ಚೇತರಿಸಿಕೊಳ್ಳುತ್ತಿರುವುದಾಗಿ ಮಾಹಿತಿ ಲಭಿಸಿದೆ ಎಂದು ಅನಿಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್