ಮಂಗಳೂರಿನ ಮಾದರಿ ಮತಗಟ್ಟೆ


Team Udayavani, May 12, 2018, 11:02 AM IST

12-May-1.jpg

ಮಂಗಳೂರು: ಮಂಗಳೂರಿನ ಎರಡು ಮತಗಟ್ಟೆಗಳು ಆಧುನಿಕ ಸೌಲಭ್ಯಗಳ ಮೂಲಕ ವಿನೂತನ ರೀತಿಯಲ್ಲಿ ಸಿದ್ಧಗೊಂಡಿದ್ದು, ಶನಿವಾರ ನಡೆಯುವ ಮತದಾನಕ್ಕೆ ಸಕಲ ರೀತಿಯಲ್ಲಿ ಸನ್ನದ್ಧಗೊಂಡಿವೆ.

ನಗರದ ಲೇಡಿಹಿಲ್‌ ವಿಕ್ಟೋರಿಯಾ ಪ್ರೌಢ ಶಾಲೆಯ ಬೂತ್‌ ಸಂಖ್ಯೆ 12 ಹಾಗೂ ಗಾಂಧೀ ನಗರದ ಸ. ಹಿ. ಪ್ರಾ. ಶಾಲೆಯ ಬೂತ್‌ ಸಂಖ್ಯೆ 74ರ ಮತಗಟ್ಟೆಗಳನ್ನು ಮಾದರಿಯಾಗಿ ಸಿದ್ಧಪಡಿಸಲಾಗಿದ್ದು, ಈ ಬೂತ್‌ನಲ್ಲಿ ಮತ ಚಲಾವಣೆ ಮಾಡಲು ಇಂದು ಆಗಮಿಸುವ ಮತದಾರರಿಗೆ ವಿಶೇಷ ಸೌಲಭ್ಯಗಳು ದೊರೆಯಲಿದೆ. 

ಸರದಿ ಸಾಲು ಇಲ್ಲಿಲ್ಲ
ಸರದಿ ಸಾಲು ಇಲ್ಲಿ ಇರುವುದಿಲ್ಲ. ಮತ ಹಾಕಲು ಬರುವ ಮತದಾರ ನೇರವಾಗಿ ಬಂದು ಮತ ಹಾಕಬಹುದು. ಅದಕ್ಕಿಂತ ಮೊದಲು ಬಂದ ಮತದಾರರು ಇದ್ದರೆ, ಟೋಕನ್‌ ಕೊಡಲಾಗುತ್ತದೆ. ಅಲ್ಲಿಯವರೆಗೆ ಮತದಾರ ಅಲ್ಲಿಯೇ ವಿಶ್ರಾಂತಿ ಪಡೆಯಲು ಕುರ್ಚಿ, ಬೆಂಚು, ಸೋಫಾ ಸೇರಿದಂತೆ ವ್ಯವಸ್ಥೆಗಳನ್ನು ಮಾಡಲಾಗಿದೆ.

ಮತಗಟ್ಟೆಗಳ ಪ್ರವೇಶದ್ವಾರದಿಂದಲೇ ಸುಸಜ್ಜಿತವಾಗಿ ನವೀಕರಿಸಲಾಗಿದೆ. ಸ್ವಾಗತ ಕಮಾನು ಮಾಡ ಲಾಗಿದೆ. ಮತದಾರರಿಗೆ ಮಾಹಿತಿ ತಿಳಿಸುವ ಸೂಚನಾ ಫಲಕಗಳನ್ನು ಅಲ್ಲಲ್ಲಿ ಜೋಡಿಸಲಾಗಿದೆ. ಮತ ಗಟ್ಟೆಯ ಒಳಗಡೆ ಬಲೂನುಗಳ ಸಹಾಯದಿಂದ ಆಕರ್ಷಕವಾಗಿ ಕೋಣೆ ಶೃಂಗರಿಸಲಾಗಿದೆ. ಮದುವೆ ಮನೆಯಲ್ಲಿರುವ ಶೃಂಗಾರ ಮತಗಟ್ಟೆಯಲ್ಲಿದೆ.

ಫ್ಯಾನ್‌, ಕುಡಿಯುವ ನೀರು ಹಾಗೂ ಪ್ರಥಮ ಚಿಕಿತ್ಸಾ ಸೌಲಭ್ಯ ವ್ಯವಸ್ಥೆ ಇದೆ. ಮತಗಟ್ಟೆಗಳಿಗೆ ಮತದಾರರು ಬರುವಾಗ ಅನಿವಾರ್ಯವಾಗಿ ಚಿಕ್ಕ ಮಕ್ಕಳನ್ನು ಕರೆದುಕೊಂಡು ಬಂದರೆ ನೋಡಿಕೊಳ್ಳಲು ಒಬ್ಬ ಅಂಗನವಾಡಿ ಕಾರ್ಯಕರ್ತೆಯರನ್ನು ನೇಮಿಸಲಾಗಿದೆ. ಜತೆಗೆ ಮಕ್ಕಳಿಗೆ ಆಟವಾಡುವ ಕಾರಣದಿಂದ ಆಟೋಟ ಸಾಮಾಗ್ರಿಗಳನ್ನು ಜೋಡಿಸಿಡಲಾಗಿದೆ.

ಮಾದರಿ ಮತಗಟ್ಟೆಗಳು ರೆಡಿ
ಜಿಲ್ಲೆಯ ಎಲ್ಲ ಮತಗಟ್ಟೆಗಳಿಗೆ ಮತದಾರರನ್ನು ಆಕರ್ಷಿಸಬೇಕು ಎಂಬ ಉದ್ದೇಶದಿಂದ ಕೆಲವು ಮತಗಟ್ಟೆಗಳನ್ನು ವಿಶೇಷ ರೀತಿಯಲ್ಲಿ ಸಿದ್ಧಪಡಿಸಲಾಗುತ್ತಿದೆ. ಈ ಪೈಕಿ ಮಂಗಳೂರಿನ ಲೇಡಿಹಿಲ್‌ ಹಾಗೂ ಗಾಂಧೀನಗರದ ಎರಡು ಮತಗಟ್ಟೆಗಳನ್ನು ಮಾದರಿ ರೀತಿಯಲ್ಲಿ ರೂಪಿಸಲಾಗಿದೆ.
-ಡಾ| ಎಂ.ಆರ್‌. ರವಿ, ಜಿ. ಪಂ. ಸಿಇಒ

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.