“ತುಳುನಾಡಿನ ಸಂಸ್ಕೃತಿ ಜಗತ್ತಿಗೆ ಮಾದರಿ’

ಪಗ್ಗು 18 ಸಿರಿ ದಿನಾಚರಣೆ ಉದ್ಘಾಟನೆ

Team Udayavani, May 6, 2019, 6:04 AM IST

0505MLR7

ಮಹಾನಗರ: ತುಳುನಾಡಿನ ಬನ ಸಂಸ್ಕೃತಿಯು ಜಗತ್ತಿಗೆ ಮಾದರಿ. ಇವತ್ತಿಗೂ ತುಳುನಾಡಿನ ಸಂಸ್ಕೃತಿಯಲ್ಲಿ ಬನಗಳು ಅಚ್ಚಳಿಯದೆ ಉಳಿದಿವೆ. ಆದರೆ ಧಾರ್ಮಿಕತೆಯ ಹೆಸರಿನಲ್ಲಿ ಇದ್ದ ಬನಗಳನ್ನು ಕಡಿದು ಕಾಂಕ್ರೀಟ್‌ ಸ್ಮಾರಕಗಳಾಗಿ ಮಾಡುವುದು ಖೇದಕರ ಎಂದು ಪಿಲಿಕುಳ ನಿಸರ್ಗಧಾಮ ಸಸ್ಯಕಾಶಿಯ ಮೇಲ್ವಿಚಾರಕ ಉದಯಕುಮಾರ್‌ ಶೆಟ್ಟಿ ಹೇಳಿದರು.

ಬಂಟರ ಯಾನೆ ನಾಡವರ ಸಂಘ ಮಹಿಳಾ ವಿಭಾಗ ಮತ್ತು ತುಳು ವರ್ಲ್ಡ್ ಕುಡ್ಲ ಇವುಗಳ ಸಹಯೋಗದಲ್ಲಿ ನಗರದ ರಾಮಕೃಷ್ಣ ವಿದ್ಯಾರ್ಥಿನಿ ಭವನದಲ್ಲಿ ನಡೆದ ಪಗ್ಗು 18 ಸಿರಿ ದಿನಾಚರಣೆ ಮತ್ತು ಬಲೆ ಸಿರಿಭೂಮಿ ಬುಳೆಪಾಗ ಕಾರ್ಯಕ್ರ ಮವನ್ನು ಉದ್ಘಾಟಿಸಿ ಮಾತನಾಡಿದರು.

ಕೇಪುಳ ಹೂವನ್ನು ನಿರಂತರವಾಗಿ ದೇವರಿಗೆ ಅರ್ಪಿಸುವುದರಿಂದ ಮತ್ತು ಅದನ್ನು ಉಪಯೋಗಿಸುವುದರಿಂದ ಮನುಷ್ಯನಲ್ಲಿ ಅದ್ಭುತವಾದಂತಹ ತಪೋಶಕ್ತಿಯು ಉಂಟಾಗುತ್ತದೆ. ಇಂತಹ ಹಲವು ಗಿಡಮೂಲಿಕೆಗಳನ್ನು ಕಡೆಗಣಿಸಿ ಆಡಂಬರದ ಹೆಸರಿನಲ್ಲಿ ಏನೇನೋ ವಸ್ತುಗಳನ್ನು ದೇವರಿಗೆ ಅರ್ಪಿಸುತ್ತಿದ್ದೇವೆ. ಬನ ವೆಂದರೆ ವನ ಎಂದರ್ಥ ಇಂತಹ ವನಸಂಸ್ಕೃತಿಯನ್ನು ಬೆಳೆಸಲು ಸಮಾಜ ಮುಂದಾಗಬೇಕಾಗಿದೆ ಎಂದರು.

ಪ್ರಕೃತಿ ಉಳಿಸಿ
ಡಾ| ಆಶಾಜ್ಯೋತಿ ರೈ ಮಾತನಾಡಿ, ಸಿರಿ ನಮ್ಮ ಸಂಸ್ಕೃತಿಯ ಪ್ರತೀಕ, ಸಿರಿ ಅಂದರೆ ಅದು ಪ್ರಕೃತಿ ಎಂದರ್ಥ ಆದುದರಿಂದ ಪ್ರಕೃತಿ ಮತ್ತು ಸಂಸ್ಕೃತಿ ಒಂದಾಗುವ ದಿವಸವನ್ನು ಪಗ್ಗು 18 ಸಿರಿ ದಿನವೆಂದು ಆಚರಿಸುತ್ತಿದ್ದೇವೆ. ನಮ್ಮ ಮುಂದಿನ ಪೀಳಿಗೆಗೆ ಹಣ ಸಂಪತ್ತನ್ನು ಬಿಟ್ಟು ಹೋಗದೆ ಹಿರಿಯರು ಕೊಟ್ಟ ಪ್ರಕೃತಿಯನ್ನು ಮರಳಿ ಕೊಡುವುದು ನಮ್ಮೆಲ್ಲರ ಧೇಯ್ಯೋದ್ದೇಶ ಆಗಬೇಕು. ಆದುದರಿಂದ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ನೇತೃತ್ವದಲ್ಲಿ ಈ ಯೋಜನೆಯನ್ನು ಎಲ್ಲೆಲ್ಲಿ ಖಾಲಿ ಭೂಮಿ ಬನ ದೇವಸ್ಥಾನ ಶಾಲೆ ವಠಾರಗಳು, ತಮ್ಮ ಮನೆ ಪರಿಸರಗಳಲ್ಲಿ ಆದಷ್ಟು ಸಸಿಗಳನ್ನು ನೆಡುವ ಮತ್ತು ನಿರಂತರವಾಗಿ ಈ ಯೋಜನೆಯನ್ನು ಕಾರ್ಯಗತಗೊಳಿಸುವ ಪ್ರತಿಜ್ಞೆಯನ್ನು ಸ್ವೀಕರಿಸಬೇಕು ಎಂದು ಎಲ್ಲರಿಗೂ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷೆ ಕಸ್ತೂರಿ ಪಂಜ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಕ ಮಾಧವ ಉಳ್ಳಾಲ್‌ ಅವರು ರಾಮಕೃಷ್ಣ ವಿದ್ಯಾರ್ಥಿನಿ ಭವನದ ಸುತ್ತಮುತ್ತ ಹಲವಾರು ಮರಗಿಡಗಳನ್ನು ನೀಡುವಲ್ಲಿ ಮುತುವರ್ಜಿ ವಹಿಸಿದರು.

ರಾಮಕೃಷ್ಣ ವಿದ್ಯಾರ್ಥಿ ನಿಲಯದ ಉಷಾ ಬಲ್ಲಾಳ್‌, ತುಳುವರ್ಲ್ಡ್ ಅಧ್ಯಕ್ಷ ಡಾ| ರಾಜೇಶ್‌ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಪ್ರಕೃತಿ, ಸಂಸ್ಕೃತಿ ಪೂರಕವಾಗಿರಲಿ
ದಿಕ್ಸೂಚಿ ಭಾಷಣ ಮಾಡಿದ ಮಂಜುಳಾ ಶೆಟ್ಟಿ ಮಾತನಾಡಿ, ಪ್ರಕೃತಿ ಮತ್ತು ಸಂಸ್ಕೃತಿ ಪರಸ್ಪರ ಪೂರಕವಾಗಿರಬೇಕು. ಸಂಸ್ಕೃತಿ ಹೆಸರಲ್ಲಿ ವಿಕೃತಿಯನ್ನು ಸೃಷ್ಟಿಸಿದರೆ ಮುಂದೊಂದು ದಿನ ಮೃತ್ಯು ಖಂಡಿತ ಎಂದು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.