ಕರಾವಳಿಯಲ್ಲಿ ಸಾಧಾರಣ ಮಳೆ: ಉಡುಪಿ: 8 ಮನೆಗಳಿಗೆ ಹಾನಿ
Team Udayavani, Jul 19, 2022, 12:00 AM IST
ಪಣಂಬೂರು ಬೀಚ್ನಲ್ಲಿ ವಿಶ್ರಾಂತಿ ಗೋಪುರದ ಮೇಲ್ಛಾವಣಿ ಗಾಳಿಗೆ ಉರುಳಿ ಬಿದ್ದಿದೆ.
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ಸಾಧಾರಣ ಮಳೆಯಾಗಿದೆ. ಮೋಡ, ಬಿಸಿಲಿನ ವಾತಾವರಣದ ಜತೆಗೆ ಬಿಟ್ಟು ಬಿಟ್ಟು ಮಳೆಯಾಗಿದೆ.
ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಹೀಗಾಗಿ ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದೆ. ಕಡಬ, ಸುಳ್ಯ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಪಣಂಬೂರಿನಲ್ಲಿ ಕಡಲಬ್ಬರ ಜೋರಾಗಿತ್ತು. ಗಾಳಿ-ಮಳೆಗೆ ಕೆಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ.
ಮುಂದುವರಿದ ಮಳೆ; ಹೆದ್ದಾರಿ ಜಲಾವೃತ
ಸುಬ್ರಹ್ಮಣ್ಯ: ಸುಳ್ಯ ತಾಲೂಕಿನಲ್ಲಿ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಮುಂದುವರಿದ್ದು, ಹಲವೆಡೆ ಹಾನಿ ಸಂಭವಿಸಿದೆ. ಹೆದ್ದಾರಿ ಜಲಾವೃತಗೊಂಡಿದೆ.
ಕುಮಾರಧಾರಾ ನದಿಯಲ್ಲಿ ಸೋಮವಾರ ನೀರಿನ ಮಟ್ಟ ಏರಿಕೆಯಾಗಿದ್ದು, ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಪಂಜ – ಕಡಬ ಹೆದ್ದಾರಿಯ ಪುಳಿಕುಕ್ಕು ಬಳಿ ಹೆದ್ದಾರಿ ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಸಂಪಾಜೆ ಗ್ರಾಮದ ಪೇರಡ್ಕಕ್ಕೆ ತೆರಳುವ ಸೇತುವೆ ಮುಳುಗಡೆಯಾಗಿದೆ.
ಉಡುಪಿ: 8 ಮನೆಗಳಿಗೆ ಹಾನಿ
ಉಡುಪಿ: ಜಿಲ್ಲೆಯಲ್ಲಿ ರವಿವಾರ ತಡರಾತ್ರಿ, ಸೋಮವಾರ ಬಿಟ್ಟುಬಿಟ್ಟು ಮಳೆ ಸುರಿದಿದೆ. ಕುಂದಾಪುರ, ಬೈಂದೂರು, ಸಿದ್ದಾಪುರ, ಹೆಬ್ರಿ, ಅಜೆಕಾರು, ಕಾರ್ಕಳ, ಪಡುಬಿದ್ರಿ, ಕಾಪು, ಬ್ರಹ್ಮಾವರ, ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ಉಡುಪಿ ನಗರದ ಸುತ್ತಮುತ್ತ ಬಿಸಿಲ ವಾತಾವರಣದ ನಡುವೆ ಬಿಟ್ಟುಬಿಟ್ಟು ಮಳೆಯಾಗಿದೆ. ಬ್ರಹ್ಮಾವರ ತಾಲೂಕಿನಲ್ಲಿ 3, ಕಾರ್ಕಳ 2, ಬೈಂದೂರು ತಾಲೂಕಿನಲ್ಲಿ 3 ಮನೆಗಳು ಸೇರಿ 8 ಮನೆಗಳಿಗೆ ಹಾನಿ ಸಂಭವಿಸಿದೆ.
ಮಂಗಳವಾರ ಮತ್ತು ಬುಧವಾರಕ್ಕೆ ಎಲ್ಲೋ ಅಲರ್ಟ್ ಇದೆ. ಸಮುದ್ರದ ಪ್ರಕ್ಷುಬ್ದತೆ ಮುಂದುವರಿಯಲಿದ್ದು, ಗಾಳಿ ಕಡಿಮೆಯಾಗುವ ಸಂಭವವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ