ಮತ್ತೂಮ್ಮೆ ಮೋದಿ ಪ್ರಧಾನಿಯಾಗಲು ಮತದಾರ ಸಂಕಲ್ಪ


Team Udayavani, Apr 17, 2019, 6:30 AM IST

nalin

ಮಂಗಳೂರು: ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನಿಯಾಗಬೇಕು ಎಂಬ ಹುಮ್ಮಸ್ಸಿನಿಂದ ಬಿಜೆಪಿ ಕಾರ್ಯಕರ್ತರು ದುಡಿಯುವ ಜತೆಗೆ ಮತದಾರರೂ ಸಂಕಲ್ಪ ತೊಟ್ಟಿದ್ದಾರೆ ಎಂದು ಸಂಸದ, ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ದ.ಕ. ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಾಲಯದಲ್ಲಿ ಮಂಗಳವಾರ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋದಿ ಅಲೆ ಸುನಾಮಿಯಾಗಿ ಪರಿವರ್ತನೆ ಆಗಿದ್ದು, ಪ್ರಧಾನಿಯವರ ಐದು ವರ್ಷಗಳ ಆಡಳಿತವನ್ನು ಜನ ಸ್ವೀಕರಿಸಿದ್ದಾರೆ. ಜಾತಿ, ಮತ, ಪಂಥ ಮರೆತು ನಾವು ರಾಷ್ಟ್ರದ ಪರ ಎಂದು ಜಿಲ್ಲೆಯ ಜನತೆ ಮೋದಿ ಅವರನ್ನು ಬೆಂಬಲಿಸಲಿದ್ದಾರೆ.

ಕಳೆದ 10 ವರ್ಷ ಸಜ್ಜನಿಕೆಯ, ಭ್ರಷ್ಟಾಚಾರ ರಹಿತ ರಾಜಕಾರಣದ ಜತೆಗೆ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇನೆ. ಮೂರನೇ ಬಾರಿ ಜನರು ಆಯ್ಕೆ ಮಾಡುವ ವಿಶ್ವಾಸವಿದ್ದು, ಜನರ ಆಶೀರ್ವಾದಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕಳೆದ ಮೂರು ತಿಂಗಳಿನಿಂದ ದ.ಕ. ಕ್ಷೇತ್ರದಲ್ಲಿ ಬಿಜೆಪಿ ಚುನಾವಣೆಯ ಪೂರ್ವ ತಯಾರಿ ಆರಂಭಿ ಸಿತ್ತು. ಅಭ್ಯರ್ಥಿ ಘೋಷಣೆ ಬಳಿಕ ಜಿಲ್ಲೆಯಲ್ಲಿ ನಾಲ್ಕು ಸುತ್ತಿನ ಪ್ರಚಾರ ನಡೆಸಿದ್ದೇನೆ. ಕಾರ್ಯಕರ್ತರು ಮಂಗಳವಾರದವರೆಗೆ ಮೂರು ಸುತ್ತಿನ ಮನೆ-ಮನೆ ಭೇಟಿ ನಡೆಸಿದ್ದಾರೆ. ಈ ಸಂದರ್ಭ ಮತದಾರರಿಂದ ಅಪೂರ್ವ ಸ್ಪಂದನೆ ದೊರೆತಿದೆ ಎಂದರು.

ಜಿಲ್ಲೆಯ ಎಲ್ಲ 8 ವಿಧಾನಸಭಾ ಕ್ಷೇತ್ರಗಳಿಗೆ ಸಮಾನ ಆದ್ಯತೆ ನೀಡಿ ಪ್ರಚಾರ ನಡೆಸಲಾಗಿದೆ. ಬೆಳ್ತಂಗಡಿ, ಪುತ್ತೂರು, ಸುಳ್ಯದಲ್ಲಿ ಹೆಚ್ಚು ಗ್ರಾಮಗಳು ಮತ್ತು ಮನೆಗಳೂ ದೂರ ದೂರ ಇರುವ ಕಾರಣ ಸ್ವಲ್ಪ ಹೆಚ್ಚು ಗಮನ ನೀಡಲಾಗಿದೆ. ಎಸ್‌ಡಿಪಿಐ ಸ್ಪರ್ಧೆಯಿಂದ ಬಿಜೆಪಿಗೆ ಯಾವುದೇ ಲಾಭ ಅಥವಾ ನಷ್ಟವಿಲ್ಲ.

ಎಸ್‌ಡಿಪಿಐ ಸ್ಪರ್ಧೆಯಿಂದ ಬಿಜೆಪಿಗೆ ಲಾಭ ಎಂದಾದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಡಿಪಿಐ ಸ್ಪರ್ಧಿಸದಿರುವಾಗ ಕಾಂಗ್ರೆಸ್‌ಗೆ ಲಾಭವಾಗಬೇಕಿತ್ತ ಲ್ಲವೇ? ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಗೋಪಾಲಕೃಷ್ಣ ಹೇರಳೆ, ರವಿಶಂಕರ ಮಿಜಾರು, ಕಿಶೋರ್‌ ರೈ, ಆರ್‌.ಸಿ. ನಾರಾಯಣ ಉಪಸ್ಥಿತರಿದ್ದರು.

ಮೋದಿ ಸಮಾವೇಶದ ಬಳಿಕ ವಿಪಕ್ಷ ಶಸ್ತ್ರ ತ್ಯಾಗ!
ಲೋಕಸಭೆಗೆ 3ನೇ ಬಾರಿ ಸ್ಪರ್ಧಿಸುತ್ತಿದ್ದೇನೆ. 2009ರಲ್ಲಿ ಮೊದಲ ಬಾರಿ ಸ್ಪರ್ಧಿಸಿದಾಗ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನ ತಲಾ ನಾಲ್ವರು
ಶಾಸಕರಿದ್ದರು. ಬಿಜೆಪಿ ಗೆಲ್ಲುತ್ತದೆ ಎಂದು ಯಾರೂ ಹೇಳಿರಲಿಲ್ಲ. ಆದರೆ 40,000ಕ್ಕೂ ಅಧಿಕ ಮತಗಳಿಂದ ಗೆದ್ದಿದ್ದೆ. 2014ರಲ್ಲಿ ಕಾಂಗ್ರೆಸ್‌ನ 7, ಬಿಜೆಪಿಯ ಓರ್ವ ಶಾಸಕರಿದ್ದರು. ಆ ಸಂದರ್ಭ 1.43 ಲಕ್ಷ ಮತಗಳ ಅಂತರದ ಗೆಲುವು ದೊರೆತಿತ್ತು. ಈ ಬಾರಿ ಬಿಜೆಪಿಯ 7 ಶಾಸಕರು, ಕಾಂಗ್ರೆಸ್‌ನ ಒಬ್ಬ ಶಾಸಕರಿದ್ದಾರೆ. ಕೇಂದ್ರದ ಸಾಧನೆ, ಜಿಲ್ಲೆಗೆ ಬಂದ ಅನುದಾನ ಮತ್ತು ಅಭಿವೃದ್ಧಿ ಕಾರ್ಯಮುಂದಿಟ್ಟು ಪ್ರಚಾರ ನಡೆಸಲಾ ಗಿದೆ. 650 ಮಂದಿ ಎನ್‌ಆರ್‌ಐಗಳು ಮೋದಿ ಗಾಗಿ ವಿದೇಶದಿಂದ ಬಂದಿ ದ್ದಾರೆ. ಮೋದಿ ಸಮಾವೇಶದ ಬಳಿಕ ವಿಪಕ್ಷಗಳು ಶಸ್ತ್ರ ತ್ಯಾಗ ಮಾಡಿದಂತೆ ಕಾಣುತ್ತಿದೆ ಎಂದು ನಳಿನ್‌ ಹೇಳಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.