ದ.ಕ.ದಲ್ಲಿ ಮೋದಿ ಕಮಾಲ್‌: ನಳಿನ್‌ಗೆ ವಿಜಯ ಮಾಲೆ

ದಾಖಲೆಯ 2 ಲಕ್ಷಗಳಿಗೂ ಹೆಚ್ಚು ಮತಗಳಿಂದ ಗೆದ್ದ ಕಟೀಲು, ಜಿಲ್ಲಾದ್ಯಂತ ಬಿಜೆಪಿ ಸಂಭ್ರಮ

Team Udayavani, May 24, 2019, 6:03 AM IST

2305MLR40

ಮಹಾನಗರ: ಪ್ರಧಾನಿ ನರೇಂದ್ರ ಮೋದಿ ಅವರ ಮೋಡಿಗೆ ತಲೆಬಾಗಿದ ದ.ಕ.ಜಿಲ್ಲೆಯ ಮತದಾರರು ಮತ್ತೂಮ್ಮೆ ಜಿಲ್ಲೆಯಲ್ಲಿ ತಾವರೆ ಅರಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ದಾಖಲೆಯ ಮತಗಳ ಅಂತರದ ಗೆಲ್ಲುವ ಮೂಲಕ ಜಿಲ್ಲೆಯ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.

ಕೇಂದ್ರದಲ್ಲಿ ಮೋದಿ ಹಾಗೂ ದ.ಕ.ದಲ್ಲಿ ನಳಿನ್‌ ಭರ್ಜರಿ ವಿಜಯದ ಸುದ್ದಿ ತಿಳಿಯುತ್ತಿದ್ದಂತೆ ನಗರ ಸಹಿತ ಎಲ್ಲೆಡೆ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.

ಎನ್‌ಐಟಿಕೆ ಮತ ಎಣಿಕೆ ಕೇಂದ್ರದ ಸುತ್ತ ಕಾರ್ಯಕರ್ತರ ಸಂಭ್ರಮಾಚರಣೆಗೆ ಅವಕಾಶ ಇಲ್ಲದಿದ್ದರೂ ಮಂಗಳೂರಿನ ಬಿಜೆಪಿಯ ಚುನಾವಣಾ ಕಚೇರಿ, ನಗರದ ವಿವಿಧ ಭಾಗಗಳಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಶಾಸಕರಾದ ವೇದವ್ಯಾಸ ಕಾಮತ್‌, ಡಾ| ವೈ.ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಜತೆಗೆ ಸಂಭ್ರಮಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಖುಷಿಯ ಮಧ್ಯೆಯೇ ಈ ಬಾರಿ ಮತ್ತೂಮ್ಮೆ ನಳಿನ್‌ ಅಧಿಕ ಮತಗಳ ಅಂತರ ದಲ್ಲಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಇಮ್ಮಡಿಯಾಗಿತ್ತು. ಕೆಲವೆಡೆ ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರೆ, ಇನ್ನೂ ಕೆಲವೆಡೆ ವಾಹನ ರ್ಯಾಲಿ ಮೂಲಕ ಕಾರ್ಯಕರ್ತರು ಸಂಭ್ರಮಿಸಿದರು. ಮತ್ತೆ ಕೆಲವೆಡೆ ಸಿಹಿತಿಂಡಿ ವಿತರಿಸುವ ಮೂಲಕ ಖುಷಿ ಹಂಚಿಕೊಂಡರು.

ಹೆಚ್ಚಿದ ಸಂಭ್ರಮ
2004ರಲ್ಲಿ ದ.ಕ. ಕ್ಷೇತ್ರದಿಂದ ಬಿಜೆಪಿಯ ಡಿ.ವಿ. ಸದಾನಂದ ಗೌಡ 3,84,760 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್‌ನ ಎಂ. ವೀರಪ್ಪ ಮೊಲಿ (3,51,345) ಅವರನ್ನು 33,415 ಮತಗಳ ಅಂತರದಿಂದ ಸೋಲಿಸಿದ್ದರು. 2009ರಲ್ಲಿ ನಳಿನ್‌ ಕುಮಾರ್‌ ಕಟೀಲು 4,99,385 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಅವರನ್ನು (4,58,965) 40,420 ಮತಗಳ ಅಂತರದಲ್ಲಿ ಪರಾಭವಗೊಳಿಸಿದ್ದರು. 2014ರ ಚುನಾವಣೆಯಲ್ಲಿ ನಳಿನ್‌ ಕುಮಾರ್‌ ಕಟೀಲು 6,42,739 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಅವರನ್ನು (499030) 1,43,704 ಮತಗಳ ಅಂತರದಲ್ಲಿ ಪರಾಭವಗೊಳಿಸಿದ್ದರು. ಈ ಬಾರಿ ನಳಿನ್‌ ಅವರು ಪಡೆದ ಮತಗಳ ಅಂತರ ಈ ಎಲ್ಲದಕ್ಕಿಂತಲೂ ಅಧಿಕವಾದ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ.

ಕಾಂಗ್ರೆಸ್‌ ನಿರೀಕ್ಷೆ
ಪ್ರಾರಂಭಿಕವಾಗಿ ಕೆಲವು ಸುತ್ತುಗಳ ಮತ ಎಣಿಕೆಯ ಫಲಿತಾಂಶ ಘೋಷಣೆ ಯಾಗುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್‌ ಲೀಡ್‌ ಸಮಬಲದಲ್ಲಿತ್ತು. ಹೀಗಾಗಿ ಕಾಂಗ್ರೆಸ್‌ ಪಾಳಯದಲ್ಲಿ ನಿರೀಕ್ಷೆ ಮೂಡಿತ್ತು. ಮುಂದಿನ ಸುತ್ತುಗಳಲ್ಲಿ ಇದೇ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆಯೂ ಕಾಂಗ್ರೆಸ್‌ ಮುಖಂಡರು ಮಾತುಕತೆ ನಡೆಸುತ್ತಿದ್ದರು. ಆದರೆ, ಬಳಿಕ ನಡೆದ ಒಂದೊಂದು ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಲೀಡ್‌ ದೀರ್ಘ‌ ಮಟ್ಟಿಗೆ ಕಡಿಮೆಯಾಗುತ್ತ ಬಂತು. ಕೊನೆಗೆ ಇದು 2 ಲಕ್ಷ ಮತಗಳ ಅಂತರವನ್ನು ದಾಟಿತು. ಬಿಜೆಪಿ 50 ಸಾವಿರ ಮತಗಳ ಲೀಡ್‌ ದಾಖಲಿಸುತ್ತಿದ್ದಂತೆ ಫಲಿತಾಂಶ ಬಿಜೆಪಿ ಪರವಾಗಿ ಬರುವ ಬಗ್ಗೆ ಬಿಜೆಪಿ ಪಾಳಯದಲ್ಲಿ ನಿಖರತೆ ಸೃಷ್ಟಿಯಾಗಿತ್ತು.

2014ರ ಚುನಾವಣೆಯಲ್ಲಿ ನಳಿನ್‌ ಕುಮಾರ್‌ ಕಟೀಲು 6,42,739 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಅವರನ್ನು (499030) 1,43,704 ಮತಗಳ ಅಂತರದಲ್ಲಿ ಪರಾಭವಗೊಳಿಸಿದ್ದರು. ಈ ಬಾರಿ ನಳಿನ್‌ ಅವರು ಪಡೆದ ಮತಗಳ ಅಂತರ ಈ ಎಲ್ಲದಕ್ಕಿಂತಲೂ ಅಧಿಕವಾದ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ.

ಕಾಂಗ್ರೆಸ್‌ ನಿರೀಕ್ಷೆ
ಪ್ರಾರಂಭಿಕವಾಗಿ ಕೆಲವು ಸುತ್ತುಗಳ ಮತ ಎಣಿಕೆಯ ಫಲಿತಾಂಶ ಘೋಷಣೆ ಯಾಗುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್‌ ಲೀಡ್‌ ಸಮಬಲದಲ್ಲಿತ್ತು. ಹೀಗಾಗಿ ಕಾಂಗ್ರೆಸ್‌ ಪಾಳಯ ದಲ್ಲಿ ನಿರೀಕ್ಷೆ ಮೂಡಿತ್ತು. ಮುಂದಿನ ಸುತ್ತುಗಳಲ್ಲಿ ಇದೇ ಅಂತರ ವನ್ನು ಕಾಯ್ದುಕೊಳ್ಳುವ ಬಗ್ಗೆಯೂ ಕಾಂಗ್ರೆಸ್‌ ಮುಖಂಡರು ಮಾತುಕತೆ ನಡೆಸುತ್ತಿದ್ದರು. ಆದರೆ, ಬಳಿಕ ನಡೆದ ಒಂದೊಂದು ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಲೀಡ್‌ ದೀರ್ಘ‌ ಮಟ್ಟಿಗೆ ಕಡಿಮೆಯಾಗುತ್ತ ಬಂತು. ಕೊನೆಗೆ ಇದು 2 ಲಕ್ಷ ಮತಗಳ ಅಂತರವನ್ನು ದಾಟಿತು. ಬಿಜೆಪಿ 50 ಸಾವಿರ ಮತಗಳ ಲೀಡ್‌ ದಾಖಲಿಸುತ್ತಿದ್ದಂತೆ ಫಲಿತಾಂಶ ಬಿಜೆಪಿ ಪರವಾಗಿ ಬರುವ ಬಗ್ಗೆ ಬಿಜೆಪಿ ಪಾಳಯದಲ್ಲಿ ನಿಖರತೆ ಸೃಷ್ಟಿಯಾಗಿತ್ತು.

ಎಣಿಕೆ ಕೇಂದ್ರಕ್ಕೆ ಬರಲೇ ಇಲ್ಲ ಮಿಥುನ್‌ ರೈ!
ಸುರತ್ಕಲ್‌ನ ಮತ ಎಣಿಕೆ ಕೇಂದ್ರಗಳಿಗೆ ಪ್ರಾರಂಭಿಕವಾಗಿ ಅಭ್ಯರ್ಥಿಗಳು ಬಂದಿರಲಿಲ್ಲ. ಪಕ್ಷಗಳ ಪರವಾಗಿ ಏಜೆಂಟರು ಮಾತ್ರ ಕೌಂಟಿಂಗ್‌ ಸೆಂಟರ್‌ನಲ್ಲಿದ್ದರು. ನಳಿನ್‌ ಕುಮಾರ್‌ ಕಟೀಲು ಹಾಗೂ ಮಿಥುನ್‌ ರೈ ಅವರು ಟಿವಿ ನೋಡುತ್ತ ಹಾಗೂ ತಮ್ಮ ಪಕ್ಷದ ಏಜೆಂಟರ ಮೂಲಕ ಫಲಿತಾಂಶದ ಮಾಹಿತಿ ಪಡೆಯುತ್ತಿದ್ದರು. ಪ್ರತೀ ಸುತ್ತಿನಲ್ಲಿಯೂ ಲೀಡ್‌ ಪಡೆಯುತ್ತಿರುವುದು ಖಚಿತವಾಗುತ್ತಿದ್ದಂತೆ ಬೆಳಗ್ಗೆ 11.50ರ ಸುಮಾರಿಗೆ ನಳಿನ್‌ ಮತ ಎಣಿಕೆ ಕೇಂದ್ರದತ್ತ ಆಗಮಿಸಿದರು. ಆದರೆ, ಮಿಥುನ್‌ ರೈ ಮತ ಎಣಿಕೆ ಕೇಂದ್ರದತ್ತ ಸುಳಿಯಲೇ ಇಲ್ಲ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.