ಕರಾವಳಿಯಲ್ಲಿ ಮೋದಿ ಮೋಡಿ!
Team Udayavani, May 25, 2019, 6:00 AM IST
ಮಂಗಳೂರು: ಕರಾವಳಿಯ ಎರಡೂ ಸ್ಥಾನಗಳಲ್ಲಿ ಬಿಜೆಪಿ ಜಯ ಸಾಧಿಸುವುದಕ್ಕೆ ಮುಖ್ಯ ಕಾರಣ ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ನೀಡಿ ಮೋಡಿ ಮಾಡಿದ್ದು ಎಂಬುದು ಸ್ಪಷ್ಟ.
ಮೋದಿ ಲೋಕಸಭೆ ಚುನಾವಣೆಗಷ್ಟೇ ಅಲ್ಲ; ಕಳೆದ ವರ್ಷ ನಡೆದಿದ್ದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಪ್ರಚಾರಕ್ಕಾಗಿ ಕರಾವಳಿ ಭಾಗಕ್ಕೆ ಬಂದು ಹೋಗಿದ್ದರು. ಕೇವಲ ಎರಡು ಸ್ಥಾನ ಹೊಂದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಇತ್ತೀಚೆಗಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ಎರಡೂ ಸಂದರ್ಭ ಅವರು ಬಂದದ್ದು ಗಮನಾರ್ಹ.
ಇಷ್ಟು ಮಾತ್ರ ಅಲ್ಲದೆ ಇನ್ನಿತರ ಸಂದರ್ಭಗಳಲ್ಲೂ ಒಂದೆರಡು ಬಾರಿ ಜಿಲ್ಲೆಗೆ ಕಾಲಿರಿಸಿ ತನ್ನ ಹವಾ ಇಲ್ಲಿ ಸದಾ ಇರುವಂತೆ ನೋಡಿಕೊಂಡಿದ್ದರು ಮೋದಿ.
2014ರ ಚುನಾವಣೆ ವೇಳೆ ಗುಜರಾತ್ ಮುಖ್ಯಮಂತ್ರಿ ಆಗಿದ್ದ ಮೋದಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ಪ್ರಚಾರ ಭಾಷಣ ಮಾಡಿದ್ದರು. ಆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಜಯ ಸಾಧಿಸಿತ್ತು. 2018ರ ವಿಧಾನಸಭಾ ಚುನಾವಣೆ ಸಂದರ್ಭ ಅವರು ಇಲ್ಲಿ ಪ್ರಚಾರ ನಡೆಸಿದ್ದು, ದ.ಕ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದರೆ ಉಡುಪಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ