ಸುಳ್ಳನ್ನೇ ಸತ್ಯವಾಗಿಸಲು ಮೋದಿ ಪ್ರಯತ್ನ : ಸ್ವಾಮಿ ಅಗ್ನಿವೇಶ್
Team Udayavani, Mar 9, 2020, 6:09 AM IST
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಗಳನ್ನೇ ಹೇಳುತ್ತಾರೆ. ಒಂದು ಸುಳ್ಳನ್ನು ಹಲವು ಬಾರಿ ಹೇಳಿದರೆ ಅದು ಸತ್ಯವಾಗುತ್ತದೆ ಎಂಬುದಾಗಿ ಅವರು ನಂಬಿದ್ದಾರೆ ಎಂದು ಪ್ರಗತಿಪರ ಚಿಂತಕ ಸ್ವಾಮಿ ಅಗ್ನಿವೇಶ್ ಹೇಳಿದ್ದಾರೆ.
ಕೇಂದ್ರ ಸರಕಾರವು ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹಾಗೂ ಇತ್ತೀಚೆಗೆ ದಿಲ್ಲಿಯಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ದ.ಕ. ಜಿಲ್ಲಾ ಪೌರ ಸಮನ್ವಯ ಸಮಿತಿಯ ಆಶ್ರಯದಲ್ಲಿ ರವಿವಾರದಂದು ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿ ಜರಗಿದ ಪೌರತ್ವ ಸಂರಕ್ಷಣಾ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.
ಗುಜರಾತ್ ಮಾದರಿ ಗಲಭೆ
ಮೋದಿಯವರು ಮುಖ್ಯಮಂತ್ರಿ ಯಾಗಿದ್ದ ವೇಳೆ ಗುಜರಾತ್ನಲ್ಲಿ ನಡೆದಿದ್ದ ಗಲಭೆಯಂತೆಯೇ ಇತ್ತೀಚೆಗೆ ಹೊಸದಿಲ್ಲಿಯಲ್ಲಿ ಗಲಭೆ ನಡೆದಿದೆ. ಹೊಸದಿಲ್ಲಿಯ ಗಲಭೆಯಲ್ಲಿ ಹಿಂದೂ, ಮುಸ್ಲಿಮರು ಸಾವನ್ನಪ್ಪಿರುವುದು ಮಾತ್ರವಲ್ಲದೆ ಮನುಷ್ಯತ್ವವೇ ಸತ್ತು ಹೋಯಿತು ಎಂದರು.
ಪ್ರಜ್ಞಾ ದೇಶದ್ರೋಹಿ
ಪಾಕಿಸ್ಥಾನ ಪರ ಘೋಷಣೆ ಕೂಗಿದವರನ್ನು, ಸಿಎಎ ವಿರುದ್ಧ ನಾಟಕ ಮಾಡಿಸಿದವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವ ಬದಲು ನಾಥೂರಾಮ್ ಗೋಡ್ಸೆಯನ್ನು ಹೊಗಳಿದ ಪ್ರಜ್ಞಾಸಿಂಗ್ ಠಾಕೂರ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕಿತ್ತು. ಸಂವಿಧಾನದ ರಕ್ಷಣೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಂದ ಸಾಧ್ಯವಿಲ್ಲ. ಈ ದೇಶದ ಜನರೇ ದೇಶದ ಸಂವಿಧಾನ ರಕ್ಷಿಸುತ್ತಾರೆ ಎಂದು ಅಗ್ನಿವೇಶ್ ಹೇಳಿದರು.
ಮದ್ಯಪಾನ ನಿಷೇಧಿಸಿ
ನೋಟು ಅಮಾನ್ಯ ಮಾಡುವ ಬದಲು ದೇಶದಾದ್ಯಂತ ಮದ್ಯಪಾನ ನಿಷೇಧ ಮಾಡಿದ್ದರೆ ಅದನ್ನು ನಾನು ಕೂಡ ಬೆಂಬಲಿಸುತ್ತಿದ್ದೆ ಎಂದು ಅಗ್ನಿವೇಶ್ ಹೇಳಿದರು.
ಮಾಜಿ ಸ್ವೀಕರ್ ರಮೇಶ್ ಕುಮಾರ್, ಶಾಸಕರಾದ ಯು.ಟಿ. ಖಾದರ್, ಐವನ್ ಡಿ’ಸೋಜಾ, ವಿಧಾನಪರಿಷತ್ ಸದಸ್ಯ ಬಿ.ಎಂ. ಫಾರೂಕ್, ಐಯುಎಂಎಲ್-ವೈ.ವಿಂಗ್ ಅಧ್ಯಕ್ಷ ಮುನವ್ವರಲಿ ಶಿಹಾಬ್ ತಂಞಳ್ ಪಾಣಕ್ಕಾಡ್, ಮಾಜಿ ಶಾಸಕ ಮೊದಿನ್ ಬಾವಾ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ