ಮೋದಿ ಧರ್ಮಸ್ಥಳ ಭೇಟಿ ಹಿನ್ನೆಲೆ: ಎಡಿಜಿಪಿಯಿಂದ ಭದ್ರತೆ ಪರಿಶೀಲನೆ


Team Udayavani, Oct 26, 2017, 10:36 AM IST

26-26.jpg

ಬೆಳ್ತಂಗಡಿ/ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಅ. 29ರಂದು ಧರ್ಮಸ್ಥಳ ಹಾಗೂ ಉಜಿರೆಗೆ ಆಗಮಿಸುವ ಹಿನ್ನೆಲೆಯಲ್ಲಿ ಬುಧವಾರ ಎಡಿಜಿಪಿ ಆಲೋಕ್‌ ಮೋಹನ್‌ ಅವರು ಭದ್ರತಾ ಪರಿ ಶೀಲನೆ ನಡೆಸಿದರು.

ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ಅನಂತರ ಉಜಿರೆಗೆ ಬಂದು ಕಾರ್ಯಕ್ರಮ ನಡೆ ಯುವ ಸ್ಥಳ, ಹೆಲಿಪ್ಯಾಡ್‌ ಇತ್ಯಾದಿ ಕಡೆಗಳಲ್ಲಿ ಪರಿಶೀಲಿಸಿದರು. ಎಡಿಜಿಪಿ ಅವರ ಜತೆ ಪಶ್ಚಿಮ ವಲಯ ಐಜಿಪಿ ಹೇಮಂತ್‌ ನಿಂಬಾಳ್ಕರ್‌, ದ.ಕ. ಜಿಲ್ಲಾ ಎಸ್‌ಪಿ ಸುಧೀರ್‌ ಕುಮಾರ್‌ ರೆಡ್ಡಿ, ಕಾರ್ಕಳ ಎಎಸ್‌ಪಿ ಹೃಷೀಕೇಶ್‌ ಅವರಿದ್ದರು. ಇದಕ್ಕೂ ಮುನ್ನ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು ಇದರಲ್ಲಿ ಬೆಳ್ತಂಗಡಿ ತಾಲೂಕಿನ ಅಧಿಕಾರಿಗಳೂ ಭಾಗವಹಿಸಿದ್ದರು.

ಹೆಲಿಪ್ಯಾಡ್‌ ವೀಕ್ಷಣೆ
ಎಡಿಜಿಪಿ ಅವರು ಧರ್ಮಸ್ಥಳದ ಹೆಲಿಪ್ಯಾಡ್‌ ವೀಕ್ಷಿಸಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭ ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್‌, ಕೃಷ್ಣ ಸಿಂಗ್‌, ಎ. ವೀರು ಶೆಟ್ಟಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಶಿವಪ್ರಸಾದ್‌ ಅಜಿಲ, ಮೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಶಿವಶಂಕರ್‌ ಮೊದಲಾದವರು ಇದ್ದರು.

ಡಾ| ಹೆಗ್ಗಡೆ ಜತೆ ಮಾತುಕತೆ
ಬಳಿಕ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಕಾರ್ಯಕ್ರಮದ ಬಗ್ಗೆ ಚರ್ಚಿಸಿದರು. ಅನಂತರ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಮಂಗಳೂರಿಗೆ ತೆರಳಿದರು.

ಅಘೋಷಿತ ಬಂದ್‌
ಪ್ರಧಾನಿ ಆಗಮನ ಸಂದರ್ಭ ಭದ್ರತೆಗಾಗಿ ಉಜಿರೆ ಹಾಗೂ ಧರ್ಮಸ್ಥಳದಲ್ಲಿ ಬಂದ್‌ ವಾತಾವರಣ ಕಂಡು ಬರಲಿದೆ. ಧರ್ಮಸ್ಥಳದಲ್ಲಿ ಶನಿವಾರ ಅಪರಾಹ್ನದಿಂದ ರವಿವಾರ ಅಪರಾಹ್ನದ ವರೆಗೆ ಅಂಗಡಿ ಮುಂಗಟ್ಟು ಗಳನ್ನು ಮುಚ್ಚುವಂತೆ ಮಾಲಕ ರಿಗೆ ಸೂಚನೆ ಕೊಡಲಾಗಿದೆ. ಜತೆಗೆ ಉಜಿರೆ – ಧರ್ಮಸ್ಥಳ ದಾರಿಯ ಎಲ್ಲ ಅಂಗಡಿಗಳನ್ನೂ ರವಿವಾರ ಮುಚ್ಚ ಬೇಕಾಗಿ ಬರಬಹುದು ಎನ್ನಲಾಗಿದೆ. 

2,000 ಪೊಲೀಸರ ನಿಯೋಜನೆ 
ಬಂದೋಬಸ್ತು ಕಾರ್ಯಕ್ಕಾಗಿ ಅಧಿಕಾರಿಗಳು ಮತ್ತು ಸಿಬಂದಿ ಸೇರಿ ದಂತೆ ಒಟ್ಟು 2,000 ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ. 10 ಎಸ್‌ಪಿ ದರ್ಜೆಯ ಅಧಿಕಾರಿಗಳು, 150 ಪೊಲೀಸ್‌ ಅಧಿಕಾರಿಗಳು (ಪಿಎಸ್‌ಐ, ಪಿಐ ಮತ್ತು ಡಿವೈಎಸ್‌ಪಿ) ಇರುತ್ತಾರೆ ಎಂದವರು ವಿವರಿಸಿದ್ದಾರೆ.

ನಕ್ಸಲರಿಗೆ ಶೋಧ
ನಕ್ಸಲ್‌ ಬಾಧಿತ ಪ್ರದೇಶಗಳಲ್ಲಿ ನಕ್ಸಲ್‌ ನಿಗ್ರಹ ದಳದ ಸಿಬಂದಿ ಶೋಧ ಆರಂಭಿಸಿದ್ದಾರೆ. 25 ಎಎನ್‌ಎಫ್‌ ತಂಡಗಳು ಈ ಕಾರ್ಯದಲ್ಲಿ ನಿರತ ವಾಗಿವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ವಿಧ್ವಂಸಕ ಕೃತ್ಯ ನಿಗ್ರಹ ತಪಾಸಣಾ ತಂಡಗಳು ಈಗಾಗಲೇ ಧರ್ಮಸ್ಥಳದಲ್ಲಿ ಬೀಡು ಬಿಟ್ಟಿದ್ದು, ಜನರ ಆಗುಹೋಗುಗಳ ಪರಿ ಶೀಲನೆ ಮತ್ತು ತಪಾಸಣೆ ನಡೆಸುತ್ತಿವೆ. ಎಸ್‌ಪಿಜಿ ಪಡೆಗಳು ಗುರುವಾರ ಆಗ ಮಿಸಿ ಭದ್ರತಾ ಕಾರ್ಯದಲ್ಲಿ ನಿರತವಾಗಲಿವೆ.

ಧರ್ಮಸ್ಥಳ: ಭಕ್ತರಿಗೆ ನಿರ್ಬಂಧ
ಪ್ರಧಾನಿ ನರೇಂದ್ರ ಮೋದಿ ಅವರು ಅ. 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಲಿರುವುದರಿಂದ ಅ. 28ರ ಮಧ್ಯಾಹ್ನ 2 ಗಂಟೆಯಿಂದ ಅ. 29ರ ಮಧ್ಯಾಹ್ನ 2 ಗಂಟೆಯ ತನಕ ಶ್ರೀ ಕ್ಷೇತ್ರದಲ್ಲಿ ಇತರ ಭಕ್ತರಿಗೆ ಸ್ವಾಮಿಯ ದರ್ಶನಕ್ಕೆ ಅವಕಾಶ‌ವಿರುವುದಿಲ್ಲ. ಇದರಿಂದ ಭಕ್ತರಿಗಾಗುವ ಅನನುಕೂಲತೆಗೆ ವಿಷಾದಿಸುತ್ತೇವೆ, ಭಕ್ತರು ಸಹಕರಿಸಬೇಕು ಎಂದು ಕ್ಷೇತ್ರದ ಪ್ರಕಟನೆಯಲ್ಲಿ ಕೋರಲಾಗಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.