ಸಂಸದ ತೇಜಸ್ವಿ ಸೂರ್ಯರಿಂದ ಸೌಹರ್ಧತೆಗೆ ಭಂಗ: ಮೊಯಿದಿನ್ ಬಾವ ಆರೋಪ
Team Udayavani, May 7, 2021, 8:24 PM IST
ಕೂಳೂರು : ಸಂಸದ ತೇಜಸ್ವಿ ಸೂರ್ಯ ಅವರು , 207 ಮಂದಿ ಬಿಬಿಎಂಪಿ ವಾರ್ ರೂಮ್ ಸಿಬ್ಬಂದಿ ಹೆಸರಿದ್ದರೂ ಬರೀ 17 ಮಂದಿ ಮುಸ್ಲಿಮರ ಹೆಸರನ್ನು ಹೇಳುವ ಮೂಲಕ ತಾವೊಬ್ಬ ಕೋಮುವಾದಿ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಮಾಜಿ ಶಾಸಕ ಮೊಯಿದಿನ್ ಬಾವ ಆರೋಪಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಡಿದ ಅವರು “ಒಂದು ಸಮುದಾಯವನ್ನು ಹೀಯಾಳಿಸಿ ಈ ಹಿಂದೆಯೂ ತೇಜಸ್ವಿ ಸೂರ್ಯ ಪಂಕ್ಚರ್ ಹಾಕುವವರು ಎಂದಿದ್ದರು. ಎಲ್ಲಾ ಸಮುದಾಯಗಳಿಗೂ ಅದರದ್ದೇ ಆದ ಗೌರವಿದ್ದು ಆರೋಪಿಸುವ ಮೊದಲು ಸತ್ಯಾಸತ್ಯತೆ ಪರಿಶೀಲಿಸಬೇಕು.ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಸಾವನ್ನಪ್ಪಿರುವ 24 ಮಂದಿಯ ಪ್ರಕರಣ ಮುಚ್ಚಿಹಾಕಲು ಉದ್ದೇಶ ಪೂರ್ವಕವಾಗಿ ಬೆಡ್ ಬ್ಲಾಕಿಂಗ್ ಪ್ರಕರಣ ಎಳೆದು ತರಲಾಗಿದೆ. ಇದೀಗ ಬಹುತೇಕ ಮಾಧ್ಯಮಗಳಲ್ಲಿ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿಯ ಹೆಸರು ಕೇಳಿಬಂದಿದ್ದು ಬಿಜೆಪಿ ಸರಕಾರ ಕಠಿಣ ಕ್ರಮ ಕೈಗೊಳ್ಳ ಬೇಕು ಎಂದು ಆಗ್ರಹಿಸಿದರು.
ಬಹರೈನ್ ನಿಂದ ಅಲ್ಲಿನ ರಾಜಕುಮಾರ್ ಉಚಿತ ಕೊಡುಗೆಯಾಗಿ ನೀಡಿದ ಆಕ್ಸಿಜನ್ ಬಂದರಿಗೆ ಬಂದ ಸಂದರ್ಭ ಬಿಜೆಪಿ ಸಂಸದರ ಸಹಿತ ಶಾಸಕರು, ಮುಖಂಡರು ಛಾಯಾಚಿತ್ರಕ್ಕೆ ಫೋಸ್ ನೀಡಿ ಪ್ರಚಾರ ಗಿಟ್ಟಿಸಿಕೊಂಡಿದ್ದಾರೆ. ಮೋದಿ ಅವರ ಸಾಧನೆ ಎಂಬಂತೆ ಬಿಂಬಿಸಿದ್ದಾರೆ. ಕನಿಷ್ಠ ರಾಜಕುಮಾರನಿಗೆ ಗೌರವ ಸಲ್ಲಿಸಿ ಕೃತಜ್ಞತೆ ಸಲ್ಲಿಸುವ ಹೇಳಿಕೆ ಕೊಡಬೇಕಿತ್ತು. ಇನ್ನಾದರೂ ಸತ್ಯ ಒಪ್ಪಿಕೊಳ್ಳಿ, ಎಲ್ಲದಕ್ಕೂ ಮೋದಿ ಕೊಟ್ಟಿದ್ದು ಎಂದು ಜನರನ್ನು ನಂಬಿಸುವ ಪ್ರಯತ್ನ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸುದ್ದಿಗೋಷ್ಟಿಯಲ್ಲಿ ಹ್ಯಾರಿಸ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ