ದ.ಕ.: ಶವ, ಉಣ್ಣಿಯ ಮಾದರಿ ಪರೀಕ್ಷೆಗೆ ರವಾನೆ
Team Udayavani, Jan 24, 2019, 12:30 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗನಕಾಯಿಲೆ ಪ್ರಕರಣ ಈವರೆಗೆ ಪತ್ತೆಯಾಗಿಲ್ಲ. ಆದರೆ ಮಂಗಗಳ ಕಳೇಬರ ಮತ್ತು ಉಣ್ಣಿಯನ್ನು ಬಯಾಪ್ಸಿ ಪರೀಕ್ಷೆಗಾಗಿ ಪುಣೆಗೆ ಕಳುಹಿಸಲಾಗಿದ್ದು, ವರದಿ ಬರಬೇಕಿದೆ ಎಂದು ದ.ಕ. ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮಂಗನ ಕಾಯಿಲೆ ಬಗ್ಗೆ ಭಯ ಪಡಬೇಕಾದ ಅಗತ್ಯವಿಲ್ಲ. ಆದರೆ ಮುಂಜಾಗ್ರತೆ ಕ್ರಮ ವಹಿಸಬೇಕು. ಸೋಂಕಿತ ಮಂಗನ ಶರೀರದಿಂದ ಹರಡುವ ಉಣ್ಣಿಗಳಿಂದ ಕಾಡಿಗೆ ತೆರಳುವ ಜನರಿಗೆ ಹರಡುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ನಿಗದಿತ ಅರಣ್ಯದ ಗಡಿ ಭಾಗಗಳಲ್ಲಿನ ಜನರಿಗಾಗಿ ಮೈಗೆ ಹಚ್ಚಿಕೊಳ್ಳಲು 300 ಬಾಟಲಿ ಡಿಎಂಪಿ ತೈಲ ವಿತರಿಸಲಾಗಿದೆ ಎಂದು ತಿಳಿಸಿದರು.
ದನಕರುಗಳನ್ನು ಕಾಡಿಗೆ ಬಿಡದಿರುವುದೇ ಒಳಿತು. ಕಾಡಿಗೆ ಹೋಗಲೇಬೇಕಾದ ಅನಿವಾರ್ಯವಿದ್ದಲ್ಲಿ ಉದ್ದತೋಳಿನ ಅಂಗಿಗಳ ಬಳಕೆ, ಡಿಎಂಪಿ ತೈಲವನ್ನು ಮೈಗೆ ಹಚ್ಚಿಕೊಳ್ಳಬೇಕು. ಮಂಗಗಳು ಸತ್ತಿರುವುದು ಕಂಡು ಬಂದಲ್ಲಿ ತತ್ಕ್ಷಣ ಆರೋಗ್ಯ ಇಲಾಖೆ ಅಥವಾ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ವಿನಂತಿಸಿದರು. ಅಪರ ಜಿಲ್ಲಾಧಿಕಾರಿ ಡಾ| ಕುಮಾರ್ ಉಪಸ್ಥಿತರಿದ್ದರು.
ಮಂಗಗಳನ್ನು ಸುಡದಿರಿ
ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್ ಮಾತನಾಡಿ, ಸತ್ತ ಮಂಗ ಕಂಡುಬಂದರೆ ಸುಟ್ಟು ಹಾಕದೆ, ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಸಾಕುಪ್ರಾಣಿಗಳಲ್ಲಿ ಉಣ್ಣಿಗಳು ಕಂಡು ಬಂದರೆ ತಪಾಸಣೆಗೊಳಪಡಿಸಬೇಕು ಎಂದರು. ಜಿಲ್ಲೆಯಲ್ಲಿ ಈವರೆಗೆ 9 ಮಂಗಗಳು ಸಾವನ್ನಪ್ಪಿವೆ. ಆದರೆ ಮಂಗನಕಾಯಿಲೆಯಿಂದ ಎನ್ನಲು ಸಾಧ್ಯವಿಲ್ಲ. ಪುತ್ತೂರಿನ ಕಡಬ ಕುಂಟಾಡಿ, ಬೆಳ್ತಂಗಡಿಯ ಪಡಂಗಡಿ ಕಣ್ಣಾಜೆ, ಉಜಿರೆಯ ಅತ್ತಾಜೆಯಿಂದ ಉಣ್ಣಿಗಳ ಮಾದರಿ ತಪಾಸಣೆಗೆ ಕಳುಹಿಸಲಾಗಿದೆ. ಕೊೖಲ, ಕಾಣಿಯೂರಿನಿಂದಲೂ ಸಂಗ್ರಹಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ